ಬಿಎಸ್ ಯಡಿಯೂರಪ್ಪ 
ರಾಜ್ಯ

ಹಿಂದಿನ ಜಾತಿ ಗಣತಿ ವ್ಯವಸ್ಥಿತವಾಗಿ ನಡೆದಿಲ್ಲ, ಈಗ ಹೊಸದಾಗಿ ಸಮೀಕ್ಷೆ ಆಗಬೇಕು: ಬಿಎಸ್ ಯಡಿಯೂರಪ್ಪ

ಹಿಂದಿನ 'ಜಾತಿ ಗಣತಿ'ಯನ್ನು ವ್ಯವಸ್ಥಿತವಾಗಿ ಮಾಡಿಲ್ಲ. ಹೀಗಾಗಿ, ರಾಜ್ಯದ ಕಾಂಗ್ರೆಸ್ ಸರ್ಕಾರವು ಹೊಸ ಸಮೀಕ್ಷೆಯನ್ನು ಮಾಡಿ ಜನರ ಮುಂದೆ ಸತ್ಯವನ್ನು ಪ್ರಸ್ತುತಪಡಿಸಬೇಕು ಎಂದು ಬಿಜೆಪಿ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ಭಾನುವಾರ ಹೇಳಿದ್ದಾರೆ. 

ದಾವಣಗೆರೆ: ಹಿಂದಿನ 'ಜಾತಿ ಗಣತಿ'ಯನ್ನು ವ್ಯವಸ್ಥಿತವಾಗಿ ಮಾಡಿಲ್ಲ. ಹೀಗಾಗಿ, ರಾಜ್ಯದ ಕಾಂಗ್ರೆಸ್ ಸರ್ಕಾರವು ಹೊಸ ಸಮೀಕ್ಷೆಯನ್ನು ಮಾಡಿ ಜನರ ಮುಂದೆ ಸತ್ಯವನ್ನು ಪ್ರಸ್ತುತಪಡಿಸಬೇಕು ಎಂದು ಬಿಜೆಪಿ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ಭಾನುವಾರ ಹೇಳಿದ್ದಾರೆ. 

ಕರ್ನಾಟಕದ ಎರಡು ಪ್ರಬಲ ಸಮುದಾಯಗಳಾದ ಒಕ್ಕಲಿಗರು ಮತ್ತು ಲಿಂಗಾಯತರು ಕೂಡ ಸಮೀಕ್ಷೆಯ ಬಗ್ಗೆ ಅಸಮ್ಮತಿ ವ್ಯಕ್ತಪಡಿಸಿದ್ದಾರೆ, ಇದನ್ನು ಅವೈಜ್ಞಾನಿಕ ಎಂದು ಕರೆದಿದ್ದಾರೆ. ಈ ವರದಿಯನ್ನು ತಿರಸ್ಕರಿಸಬೇಕು ಮತ್ತು ಹೊಸದಾಗಿ ಸಮೀಕ್ಷೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ.

'ಸಮೀಕ್ಷೆ ವ್ಯವಸ್ಥಿತವಾಗಿ ನಡೆದಿಲ್ಲ ಎಂಬ ಭಾವನೆ ಎಲ್ಲರ ಮನಸ್ಸಿನಲ್ಲಿದೆ. ನನಗೂ ಇದೇ ಅಭಿಪ್ರಾಯವಿದೆ. ಹೀಗಾಗಿ ಹೊಸದಾಗಿ ಜಾತಿ ಗಣತಿ ನಡೆಸಿ, ಸತ್ಯಾಂಶಗಳನ್ನು ಜನರಿಗೆ ತಿಳಿಸಬೇಕು ಮತ್ತು ಈ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಬೇಕೆಂದು ಸರ್ಕಾರವನ್ನು ಒತ್ತಾಯಿಸುತ್ತೇನೆ' ಎಂದು ಯಡಿಯೂರಪ್ಪ ಹೇಳಿದರು.

ಅಂದಿನ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ (2013-2018) 2015 ರಲ್ಲಿ ರಾಜ್ಯದಲ್ಲಿ 'ಜಾತಿ ಗಣತಿ' ನಡೆಸಲು ಅಂದಾಜು 170 ಕೋಟಿ ರೂ. ಖರ್ಚು ಮಾಡಿತ್ತು. ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿದ್ದ ಎಚ್. ಕಾಂತರಾಜು ಅವರಿಗೆ ಜಾತಿ ಗಣತಿ ವರದಿ ಸಿದ್ಧಪಡಿಸುವ ಜವಾಬ್ದಾರಿ ವಹಿಸಲಾಗಿತ್ತು.

2018ರಲ್ಲಿ ಸಿದ್ದರಾಮಯ್ಯನವರ ಮುಖ್ಯಮಂತ್ರಿಯಾಗಿದ್ದ ಮೊದಲ ಅವಧಿಯ ಅಂತ್ಯದ ವೇಳೆಗೆ ಸರ್ವೆ ಕಾರ್ಯ ಪೂರ್ಣಗೊಂಡಿತು. ಆದರೆ, ಅದನ್ನು ಸ್ವೀಕರಿಸಲಿಲ್ಲ ಅಥವಾ ಸಾರ್ವಜನಿಕಗೊಳಿಸಲಿಲ್ಲ.

ಬಿಹಾರ ಸರ್ಕಾರವು ಇತ್ತೀಚೆಗೆ ಜಾತಿ ಸಮೀಕ್ಷೆಯ ವರದಿಯನ್ನು ಬಿಡುಗಡೆ ಮಾಡಿದ ನಂತರ ರಾಜ್ಯದ ಸಮೀಕ್ಷೆಯನ್ನು ಸಾರ್ವಜನಿಕಗೊಳಿಸುವಂತೆ ಕೆಲವು ವರ್ಗದಿಂದ ತಮ್ಮ ಸರ್ಕಾರದ ಮೇಲೆ ಒತ್ತಡ ಹೆಚ್ಚುತ್ತಿದ್ದು, ವರದಿ ಬಂದ ನಂತರ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಕೆ ಜಯಪ್ರಕಾಶ್ ಹೆಗ್ಡೆ ಅವರು ಸದ್ಯ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿದ್ದು, ಜಾತಿ ಗಣತಿಯ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲು ಜನವರಿ 31, 2024 ರವರೆಗೆ ಕಾಲಾವಕಾಶ ನೀಡಲಾಗಿದೆ.

ಹಿಜಾಬ್ ವಿವಾದದ ಕುರಿತು ಪ್ರತಿಕ್ರಿಯಿಸಿದ ಯಡಿಯೂರಪ್ಪ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮುದಾಯಗಳ ನಡುವೆ ವಿಷಬೀಜ ಬಿತ್ತುವುದನ್ನು ನಿಲ್ಲಿಸಬೇಕು. ಇದರಿಂದ ಅವರಿಗೆ ಮತ್ತು ಅವರ ಪಕ್ಷಕ್ಕೆ ಯಾವುದೇ ರೀತಿಯಲ್ಲಿ ಪ್ರಯೋಜನವಾಗುವುದಿಲ್ಲ ಎಂದು ಹೇಳಿದರು.

'ನಮ್ಮ ಒತ್ತಡಕ್ಕೆ ಮಣಿದು ಸಿದ್ದರಾಮಯ್ಯ ಅವರು ತಮ್ಮ ಹೇಳಿಕೆಯನ್ನು ಹಿಂಪಡೆದಿರುವುದು ಒಳ್ಳೆಯದು. ಈಗಲಾದರೂ ಅವರಿಗೆ ಒಳ್ಳೆಯ ಬುದ್ದಿ ಬರಲಿ, ನಾವು (ಬಿಜೆಪಿ) ಅಲ್ಪಸಂಖ್ಯಾತರ ವಿರೋಧಿಗಳಲ್ಲ. ಹಿಂದೂಗಳು, ಕ್ರಿಶ್ಚಿಯನ್ನರು ಮತ್ತು ಮುಸ್ಲಿಮರು ಒಂದೇ ತಾಯಿಯ ಮಕ್ಕಳಂತೆ ಒಟ್ಟಿಗೆ ಬಾಳಬೇಕು ಎಂದು ಬಿಜೆಪಿ ನಂಬುತ್ತದೆ. ಪ್ರಧಾನಿ ನರೇಂದ್ರ ಮೋದಿ ಇದನ್ನು ಹಲವಾರು ಬಾರಿ ಹೇಳಿದ್ದಾರೆ' ಎಂದು ಅವರು ಹೇಳಿದರು.

ರಾಜ್ಯದಲ್ಲಿನ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸುವುದರ ಮೇಲಿನ ನಿಷೇಧವನ್ನು ಹಿಂತೆಗೆದುಕೊಳ್ಳುವ ಬಗ್ಗೆ ಆಡಳಿತವು ಚಿಂತನೆ ನಡೆಸುತ್ತಿದ್ದು, ಸರ್ಕಾರದ ಮಟ್ಟದಲ್ಲಿ ಚರ್ಚೆ ನಡೆಸಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಸಿದ್ದರಾಮಯ್ಯ ಶನಿವಾರ ಸ್ಪಷ್ಟಪಡಿಸಿದ್ದಾರೆ.

ಉಡುಗೆ ಮತ್ತು ಆಹಾರದ ಆಯ್ಕೆಯು ಪ್ರತಿಯೊಬ್ಬರಿಗೂ ಇದೆ. ಹಿಂದಿನ ಬಿಜೆಪಿ ಸರ್ಕಾರ ಹಿಜಾಬ್ ಮೇಲೆ ಹೇರಿದ್ದ ನಿಷೇಧವನ್ನು ಹಿಂತೆಗೆದುಕೊಳ್ಳುವುದಾಗಿ ಮೊದಲಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT