ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥರು 
ರಾಜ್ಯ

ಹಿಜಾಬ್ ವಿವಾದ: ಸಿದ್ದರಾಮಯ್ಯ ಯಾವುದೋ ಒಂದು ಪಂಗಡದ ಮುಖ್ಯಮಂತ್ರಿಯಲ್ಲ- ಪೇಜಾವರ ಶ್ರೀ

ಸಿದ್ದರಾಮಯ್ಯ ಅವರು ಯಾವುದೋ ಒಂದು ಪಂಗಡದ ಮುಖ್ಯಮಂತ್ರಿಯಲ್ಲ. ಇಡೀ ರಾಜ್ಯದ ಸಿಎಂ ಆಗಿದ್ದಾರೆ. ಎಂದು ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥರು ಹೇಳಿದ್ದಾರೆ.

ಬೆಳಗಾವಿ: ಸಿದ್ದರಾಮಯ್ಯ ಅವರು ಯಾವುದೋ ಒಂದು ಪಂಗಡದ ಮುಖ್ಯಮಂತ್ರಿಯಲ್ಲ. ಇಡೀ ರಾಜ್ಯದ ಸಿಎಂ ಆಗಿದ್ದಾರೆ. ಎಂದು ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥರು ಹೇಳಿದ್ದಾರೆ.

ಹಿಜಾಬ್ ನಿಷೇಧ ಆದೇಶ ವಾಪಸ್ ಪಡೆಯುತ್ತೇವೆ ಎಂಬ ಸಿಎಂ ಹೇಳಿಕೆ ವಿಚಾರಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಶ್ರೀಗಳು, ಅದು ಸಮಾಜದಲ್ಲಿ ಒಂದು ಪಂಗಡವನ್ನು ಗುರಿಯಾಗಿರಿಸಿಕೊಂಡು, ಒಬ್ಬರಿಗೆ ಒಂದು ನ್ಯಾಯ ಇನ್ನೊಬ್ಬರಿಗೆ ಒಂದು ನ್ಯಾಯ, ಒಬ್ಬರಿಗೆ ಒಂದು ಕಾನೂನು, ಇನ್ನೊಬ್ಬರಿಗೆ ಒಂದು ಕಾನೂನು ಮಾಡುವದು ಸರಿಯಲ್ಲ ಎಂದು ಹೇಳಿದರು.

“ಸಿದ್ದರಾಮಯ್ಯ ಅವರು ಕರ್ನಾಟಕದ ಎಲ್ಲರ ಮುಖ್ಯಮಂತ್ರಿ ಅವರು ಆಗಿದ್ದಾರೆಯೇ ಹೊರತು ಯಾವುದೇ ಒಂದು ಪಂಗಡದ ಸಿಎಂ ಅಲ್ಲ. ಇಂತಹ ನಡವಳಿಕೆ ಸಮಾಜದಲ್ಲಿ ಗೊಂದಲಕ್ಕೆ ಕಾರಣವಾಗುತ್ತದೆ. ಮೊನ್ನೆ ಪರೀಕ್ಷೆ ಬರೆಯುವಾಗ ಹಿಂದೂಗಳಾದವರು ಕಾಲುಂಗರ, ತಾಳಿ ತೆಗೆಯಬೇಕು ಎಂಬ ಆದೇಶ ಬಂದಿತ್ತು. ಒಂದು ಕಡೆ ಹೀಗಾದರೆ, ಮತ್ತೊಂದು ಪಂಗಡದವರಿಗೆ ಮುಸುಕುಧಾರಿಗಳು ಆಗಿ ಹೋಗಬಹುದು ಎನ್ನುತ್ತಾರೆ. ಇದನ್ನು ಯಾರೂ ಮಾಡಬಾರದು.  ಸಿಎಂ ಈ ರೀತಿ ಆಡಳಿತ ನಡೆಸಬಾರದು ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT