ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥರು 
ರಾಜ್ಯ

ಹಿಜಾಬ್ ವಿವಾದ: ಸಿದ್ದರಾಮಯ್ಯ ಯಾವುದೋ ಒಂದು ಪಂಗಡದ ಮುಖ್ಯಮಂತ್ರಿಯಲ್ಲ- ಪೇಜಾವರ ಶ್ರೀ

ಸಿದ್ದರಾಮಯ್ಯ ಅವರು ಯಾವುದೋ ಒಂದು ಪಂಗಡದ ಮುಖ್ಯಮಂತ್ರಿಯಲ್ಲ. ಇಡೀ ರಾಜ್ಯದ ಸಿಎಂ ಆಗಿದ್ದಾರೆ. ಎಂದು ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥರು ಹೇಳಿದ್ದಾರೆ.

ಬೆಳಗಾವಿ: ಸಿದ್ದರಾಮಯ್ಯ ಅವರು ಯಾವುದೋ ಒಂದು ಪಂಗಡದ ಮುಖ್ಯಮಂತ್ರಿಯಲ್ಲ. ಇಡೀ ರಾಜ್ಯದ ಸಿಎಂ ಆಗಿದ್ದಾರೆ. ಎಂದು ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥರು ಹೇಳಿದ್ದಾರೆ.

ಹಿಜಾಬ್ ನಿಷೇಧ ಆದೇಶ ವಾಪಸ್ ಪಡೆಯುತ್ತೇವೆ ಎಂಬ ಸಿಎಂ ಹೇಳಿಕೆ ವಿಚಾರಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಶ್ರೀಗಳು, ಅದು ಸಮಾಜದಲ್ಲಿ ಒಂದು ಪಂಗಡವನ್ನು ಗುರಿಯಾಗಿರಿಸಿಕೊಂಡು, ಒಬ್ಬರಿಗೆ ಒಂದು ನ್ಯಾಯ ಇನ್ನೊಬ್ಬರಿಗೆ ಒಂದು ನ್ಯಾಯ, ಒಬ್ಬರಿಗೆ ಒಂದು ಕಾನೂನು, ಇನ್ನೊಬ್ಬರಿಗೆ ಒಂದು ಕಾನೂನು ಮಾಡುವದು ಸರಿಯಲ್ಲ ಎಂದು ಹೇಳಿದರು.

“ಸಿದ್ದರಾಮಯ್ಯ ಅವರು ಕರ್ನಾಟಕದ ಎಲ್ಲರ ಮುಖ್ಯಮಂತ್ರಿ ಅವರು ಆಗಿದ್ದಾರೆಯೇ ಹೊರತು ಯಾವುದೇ ಒಂದು ಪಂಗಡದ ಸಿಎಂ ಅಲ್ಲ. ಇಂತಹ ನಡವಳಿಕೆ ಸಮಾಜದಲ್ಲಿ ಗೊಂದಲಕ್ಕೆ ಕಾರಣವಾಗುತ್ತದೆ. ಮೊನ್ನೆ ಪರೀಕ್ಷೆ ಬರೆಯುವಾಗ ಹಿಂದೂಗಳಾದವರು ಕಾಲುಂಗರ, ತಾಳಿ ತೆಗೆಯಬೇಕು ಎಂಬ ಆದೇಶ ಬಂದಿತ್ತು. ಒಂದು ಕಡೆ ಹೀಗಾದರೆ, ಮತ್ತೊಂದು ಪಂಗಡದವರಿಗೆ ಮುಸುಕುಧಾರಿಗಳು ಆಗಿ ಹೋಗಬಹುದು ಎನ್ನುತ್ತಾರೆ. ಇದನ್ನು ಯಾರೂ ಮಾಡಬಾರದು.  ಸಿಎಂ ಈ ರೀತಿ ಆಡಳಿತ ನಡೆಸಬಾರದು ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

SCROLL FOR NEXT