ಸಾಂದರ್ಭಿಕ ಚಿತ್ರ 
ರಾಜ್ಯ

SBI ಎಟಿಎಂಗೆ ಕನ್ನ: ಗ್ಯಾಸ್ ಕಟರ್ ಬಳಸಿ 20 ಲಕ್ಷ ರೂ. ದೋಚಿದ ಖದೀಮರು

ರಾಜ್ಯದಲ್ಲಿ ಮತ್ತೊಂದು ಎಟಿಎಂ ಕಳ್ಳತನ ಪ್ರಕರಣ ದಾಖಲಾಗಿದ್ದು ಮತ್ತೆ ಖದೀಮರು ಗ್ಯಾಸ್ ಕಟರ್ ಬಳಸಿ ಎಟಿಎಂಗೆ ಕನ್ನ ಹಾಕಿ ಬರೊಬ್ಬರಿ 18 ಲಕ್ಷಕ್ಕೂ ಅಧಿಕ ಹಣ ದೋಚಿದ್ದಾರೆ.

ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಮತ್ತೊಂದು ಎಟಿಎಂ ಕಳ್ಳತನ ಪ್ರಕರಣ ದಾಖಲಾಗಿದ್ದು ಮತ್ತೆ ಖದೀಮರು ಗ್ಯಾಸ್ ಕಟರ್ ಬಳಸಿ ಎಟಿಎಂಗೆ ಕನ್ನ ಹಾಕಿ ಬರೊಬ್ಬರಿ 18 ಲಕ್ಷಕ್ಕೂ ಅಧಿಕ ಹಣ ದೋಚಿದ್ದಾರೆ.

ಚಿಕ್ಕಬಳ್ಳಾಪುರ (Chikkaballapur) ನಗರದ ಎಂ.ಜಿ ರಸ್ತೆಯ ದರ್ಗಾ ಬಳಿ ನಡೆದಿದ್ದು, ಎಸ್​ಬಿಐ(SBI) ಬ್ಯಾಂಕ್​​ಗೆ ಸೇರಿದ ಎಟಿಎಂ(ATM)ಗೆ ನುಗ್ಗಿದ ಖದೀಮರು, ಬರೊಬ್ಬರಿ 20 ಲಕ್ಷ ರೂ. ಹಣವನ್ನು ಕದ್ದು, ಬಳಿಕ ಎಟಿಎಂಗೆ ಬೆಂಕಿ ಹಾಕಿದ ಘಟನೆ ನಡೆದಿದೆ. 

ಮೂಲಗಳ ಪ್ರಕಾರ ಸದರಿ ಎಟಿಎಂ ಅನ್ನು ಹಿಟಾಚಿ ಸಂಸ್ಥೆ ನಿರ್ವಹಣೆ ಮಾಡುತ್ತಿದ್ದು, ಸಿಎಂಎಸ್ ಸಂಸ್ಥೆ ಹಣ ತುಂಬುವ ಕೆಲಸ ಮಾಡುತ್ತಿತ್ತು. ಆದರೆ, ತಡರಾತ್ರಿ ಎ.ಟಿ.ಎಂ ಗೆ ನುಗ್ಗಿರುವ ದುಷ್ಕರ್ಮಿಗಳ ತಂಡ, ಎಟಿಎಂ ಸಿಸಿ ಕ್ಯಾಮೆರಾಗಳಿಗೆ ಸ್ಪ್ರೇ ಬಳಸಿ ನಂತರ ಗ್ಯಾಸ್ ಕಟರ್​ನಿಂದ ಎಟಿಎಂ ಬಾಗಿಲುಗಳನ್ನು ಕಟ್ ಮಾಡಿದ್ದಾರೆ. ನಂತರ ಎಟಿಎಂನಲ್ಲಿದ್ದ ಸುಮಾರು ಇಪ್ಪತ್ತು ಲಕ್ಷ ರೂಪಾಯಿಗಳನ್ನು ಕದ್ದು ಎಟಿಎಂ ಯಂತ್ರಕ್ಕೆ ಗ್ಯಾಸ್ ಕಟರ್​ನಿಂದಲೇ ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ.

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಬಂಧನಕ್ಕೆ ಬಲೆ ಬೀಸಿದ್ದಾರೆ. ಇತ್ತಿಚೀಗೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ, ಗೌರಿಬಿದನೂರು ಹಾಗೂ ಪೊಶೆಟ್ಟಿಯಲ್ಲಿ ಇದೆ ರೀತಿಯ ಕೆಲವು ಘಟನೆಗಳು ನಡೆದಿವೆ. ಆದರೆ ಆರೋಪಿಗಳು ಪೊಲೀಸರ ಕಣ್ಣಿಗೆ ಬಿದ್ದಿಲ್ಲ. ಸದ್ಯಕ್ಕೆ ಚಿಕ್ಕಬಳ್ಳಾಪುರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT