ಸಂಸದ ಪ್ರತಾಪ್ ಸಿಂಹ 
ರಾಜ್ಯ

ಸಂಸತ್‌ ಭದ್ರತಾ ವೈಫಲ್ಯ: ದೇಶಪ್ರೇಮಿನಾ, ದೇಶದ್ರೋಹಿನಾ ಎಂಬುದನ್ನು ಜನ ತೀರ್ಮಾನ ಮಾಡುತ್ತಾರೆ; ಕೊನೆಗೂ ಮೌನ ಮುರಿದ ಪ್ರತಾಪ್ ಸಿಂಹ

ಸಂಸತ್ ಭದ್ರತಾ ಲೋಪ ಘಟನೆಗೆ ಸಂಬಂಧಿಸಿದಂತೆ ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರು ಕೊನೆಗೂ ಮೌನ ಮುರಿದಿದ್ದು, ನಾನು ದೇಶಪ್ರೇಮಿನಾ, ದೇಶದ್ರೋಹಿನಾ ಎಂಬುದನ್ನು ಜನ ತೀರ್ಮಾನ ಮಾಡುತ್ತಾರೆಂದು ಭಾನುವಾರ ಹೇಳಿದ್ದಾರೆ.

ಮೈಸೂರು: ಸಂಸತ್ ಭದ್ರತಾ ಲೋಪ ಘಟನೆಗೆ ಸಂಬಂಧಿಸಿದಂತೆ ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರು ಕೊನೆಗೂ ಮೌನ ಮುರಿದಿದ್ದು, ನಾನು ದೇಶಪ್ರೇಮಿನಾ, ದೇಶದ್ರೋಹಿನಾ ಎಂಬುದನ್ನು ಜನ ತೀರ್ಮಾನ ಮಾಡುತ್ತಾರೆಂದು ಭಾನುವಾರ ಹೇಳಿದ್ದಾರೆ.

ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಇಂದು ಬೆಳಗ್ಗೆ ಮಾತನಾಡಿರುವ ಅವರು, ದೇಶದ್ರೋಹಿನಾ, ದೇಶಪ್ರೇಮಿನಾ ಎಂಬುದನ್ನು ಬೆಟ್ಟದ ಚಾಮುಂಡಿ ತಾಯಿ, ಕೊಡಗಿನ ಕಾವೇರಿ ತಾಯಿ. ನನ್ನ ಓದುಗರು, ಮೈಸೂರು ಕೊಡಗಿನ ಜನ ಮುಂದಿನ ಲೋಕಸಭಾ ಚುನಾವಣೆಯಲ್ಲಿ ತೀರ್ಮಾನ ಮಾಡುತ್ತಾರೆಂದು ಹೇಳಿದರು.

”2024ರ ಏಪ್ರಿಲ್‌ನಲ್ಲಿ ನಡೆಯುವಂತಹ ಲೋಕಸಭಾ ಚುನಾವಣೆಯಲ್ಲಿ ಜನರು ನನ್ನ ಬಗ್ಗೆ ತೀರ್ಮಾನ ತೆಗೆದುಕೊಳ್ಳುತ್ತಾರೆ. ನಾನು ಏನು ಎಂಬುದನ್ನು ಅಂತಿಮವಾಗಿ ತೀರ್ಮಾನ ಕೊಡಬೇಕಾದವರು ನನ್ನ ಕ್ಷೇತ್ರದ ಜನ. ಅದರಾಚೆಗೆ ನಾನು ಏನೂ ಹೇಳುವುದಿಲ್ಲ” ಎಂದು ತಿಳಿಸಿದರು.

ಸಿದ್ದರಾಮಯ್ಯ ಐಷಾರಾಮಿ ಖಾಸಗಿ ವಿಮಾನದಲ್ಲಿ ಪ್ರಯಾಣಿಸಿದ್ದರ ಕುರಿತ ಪ್ರಶ್ನೆಗೆ ಉತ್ತರಿಸಿ, ತಮ್ಮನ್ನು ಸಮರ್ಥಿಸಿಕೊಳ್ಳಲು ಸಿಎಂ ಈ ವಿಚಾರದಲ್ಲಿ ಪ್ರಧಾನಿಯನ್ನು ಎಳೆದು ತಂದಿದ್ದಾರೆ. ಪ್ರಧಾನಿಯವರು ಸರ್ಕಾರದ ವಿಮಾನದಲ್ಲೇ ಓಡಾಡುತ್ತಾರೆ. ಖಾಸಗಿ ಜೆಟ್‌ನಲ್ಲಿ ತಮ್ಮ ಪಟಾಲಂ, ಛೇಲಾ, ದುಡ್ಡು ಕೊಡುವವರ ಜೊತೆ ಪ್ರಧಾನಿ ಓಡಾಡುವುದಿಲ್ಲ ಎಂದು ತಿರುಗೇಟು ನೀಡಿದರು.

ದೇಶಕ್ಕೆ ಒಬ್ಬರೇ ಪ್ರಧಾನಿ ಇರುವುದು. ದೇಶದಲ್ಲಿ 29 ಜನ ಮುಖ್ಯಮಂತ್ರಿಗಳಿದ್ದಾರೆ. ನೀವು ಸುಖಾ ಸುಮ್ಮನೆ ಪ್ರಧಾನಿಗೆ ನಿಮ್ಮನ್ನು ನೀವು ಹೋಲಿಕೆ ಮಾಡಿಕೊಳ್ಳಬೇಡಿ. ಈ ರೀತಿ ಹೋಲಿಕೆ ಮಾಡಿಕೊಳ್ಳುವುದನ್ನು ಮೊದಲು ಬಿಡಿ ಎಂದು ಕಿಡಿಕಾರಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

SCROLL FOR NEXT