ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರಿನಲ್ಲಿ ಇಸ್ರೋ ವಿಜ್ಞಾನಿಗೆ ವಂಚನೆ: ಇಬ್ಬರು ಯುವಕರ ಜಾಮೀನು ಅರ್ಜಿ ವಜಾ

ಅನ್ನದಾಸೋಹಕ್ಕೆ (ಲಂಗರ್) ದೇಣಿಗೆ ನೀಡುವ ನೆಪದಲ್ಲಿ ಬೆಂಗಳೂರಿನಲ್ಲಿ ಇಸ್ರೋದಲ್ಲಿ ಕೆಲಸ ಮಾಡುತ್ತಿದ್ದ ವಿಜ್ಞಾನಿಯೊಬ್ಬರಿಗೆ ವಂಚಿಸಿದ ಆರೋಪದ ಮೇಲೆ ದೆಹಲಿ ಮೂಲದ ಇಬ್ಬರು ಯುವಕರು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಸಿಟಿ ಕೋರ್ಟ್ ತಿರಸ್ಕರಿಸಿದೆ.

ಬೆಂಗಳೂರು: ಅನ್ನದಾಸೋಹಕ್ಕೆ (ಲಂಗರ್) ದೇಣಿಗೆ ನೀಡುವ ನೆಪದಲ್ಲಿ ಬೆಂಗಳೂರಿನಲ್ಲಿ ಇಸ್ರೋದಲ್ಲಿ ಕೆಲಸ ಮಾಡುತ್ತಿದ್ದ ವಿಜ್ಞಾನಿಯೊಬ್ಬರಿಗೆ ವಂಚಿಸಿದ ಆರೋಪದ ಮೇಲೆ ದೆಹಲಿ ಮೂಲದ ಇಬ್ಬರು ಯುವಕರು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಸಿಟಿ ಕೋರ್ಟ್ ತಿರಸ್ಕರಿಸಿದೆ. ಪಶ್ಚಿಮ ದೆಹಲಿಯಲ್ಲಿ ನೆಲೆಸಿರುವ ಕುಲದೀಪ್ ಸಿಂಗ್ (25) ಮತ್ತು ಗುರುಪ್ರೀತ್ ಸಿಂಗ್ (24) ಆರೋಪಿಗಳು. ಈ ಸಂಬಂಧ ವಿಜ್ಞಾನಿ ನೀಡಿದ ದೂರಿನ ಆಧಾರದ ಮೇಲೆ ಮಾರತಹಳ್ಳಿ ಪೊಲೀಸರು ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ಅಪರಾಧವನ್ನು ದಾಖಲಿಸಿಕೊಂಡಿದ್ದಾರೆ.

ಆಗಸ್ಟ್ 17, 2023 ರಂದು ಸಿಖ್ ಸಮುದಾಯದ ಅಪರಿಚಿತ ವ್ಯಕ್ತಿಯೊಬ್ಬರು ಲಂಗರ್ ಗೆ ದೇಣಿಗೆ ಕೋರಿ ವಿಜ್ಞಾನಿಯ ನಿವಾಸಕ್ಕೆ ಬಂದಿದ್ದಾರೆ. ಆದರೆ ದೂರುದಾರರು ಪಾವತಿಸಲು ನಿರಾಕರಿಸಿದರು. ನಂತರ, ವಿಜ್ಞಾನಿ ತನ್ನ ಮೊಬೈಲ್ ಫೋನ್‌ನ ಕೀಪ್ಯಾಡ್ ನ್ನು ಅನ್ಲಾಕ್ ಮಾಡುತ್ತಿರುವುದನ್ನು ನೋಡಿದ ಆರೋಪಿಗಳು ದೂರುದಾರರಿಗೆ ಕುಡಿಯುವ ನೀರು ನೀಡುವಂತೆ ಮನವಿ ಮಾಡಿದ್ದಾರೆ. ದೂರುದಾರರು ನೀರು ಪಡೆಯಲು ಒಳಗೆ ಹೋದಾಗ,ಅವರ ಮೊಬೈಲ್ ಫೋನ್ ಪಡೆದ ಆರೋಪಿಗಳು 41,800 ರೂ ದೋಚಿದ್ದರು.  ನಂತರ ಆಗಸ್ಟ್ 18 ರಂದು, ವಿಜ್ಞಾನಿ ರಾಷ್ಟ್ರೀಯ ಸೈಬರ್ ಕ್ರೈಂಗೆ ದೂರು ಸಲ್ಲಿಸಿದ್ದರು. 

ಆರೋಪಿಗಳು ತಾವು ನಿರಪರಾಧಿಗಳು, ದೂರುದಾರರು ಸ್ವಯಂ ಪ್ರೇರಿತವಾಗಿ ಹಣವನ್ನು ಕಳುಹಿಸಿದ್ದಾರೆ ಎಂದು ಆರೋಪಿಗಳು ಎಂದು ನ್ಯಾಯಾಲಯದ ಮುಂದೆ ಹೇಳಿಕೊಂಡಿದ್ದಾರೆ. ಆದರೆ  ದೂರುದಾರರು ರಾಷ್ಟ್ರೀಯ ಸೈಬರ್ ಕ್ರೈಮ್ ಪೋರ್ಟಲ್‌ಗೆ ತಕ್ಷಣವೇ ದೂರು ದಾಖಲಿಸಿದ್ದಾರೆ ಮತ್ತು ಸಿಸಿಟಿವಿ ದೃಶ್ಯಾವಳಿಗಳು ಆರೋಪಿಯ ನಿವಾಸದಲ್ಲಿ ಇರುವುದನ್ನು ತೋರಿಸುತ್ತದೆ ಎಂದು ಗಮನಿಸಿದ  64ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶೆ ಎಂಎಸ್ ಕಲ್ಪನಾ ಜಾಮೀನು ಅರ್ಜಿಯನ್ನು ವಜಾಗೊಳಿಸಿದರು. 
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

ಚಾಮುಂಡೇಶ್ವರಿ ದೇವಿ ಬಗ್ಗೆ ಗೌರವವಿದ್ದು, ಧಾರ್ಮಿಕ ಭಾವನೆಗಳ ಗೌರವಿಸುತ್ತೇನೆ; ಬಾನು ಮುಷ್ತಾಕ್

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

SCROLL FOR NEXT