ರಾಜ್ಯ

ಮಂಗಳೂರು: ಕಾರು-ವ್ಯಾನ್ ಡಿಕ್ಕಿಯಾಗಿ ಅಪಘಾತ; ಓರ್ವ ಸಾವು, ಎಂಟು ಮಂದಿಗೆ ಗಾಯ

Ramyashree GN

ಮಂಗಳೂರು: ಧರ್ಮಸ್ಥಳ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಮರ್ದಾಳ ಬಳಿ ಶನಿವಾರ ಸಂಜೆ ಓಮ್ನಿ ವ್ಯಾನ್ ಕಾರೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಮೃತಪಟ್ಟಿದ್ದು, ಎಂಟು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ವ್ಯಾನ್ ಧರ್ಮಸ್ಥಳದಿಂದ ಸುಬ್ರಹ್ಮಣ್ಯಕ್ಕೆ ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದು, ಕಾರು ವಿರುದ್ಧ ದಿಕ್ಕಿನಲ್ಲಿ ಸಾಗುತ್ತಿತ್ತು.
ರಸ್ತೆಯ ತಿರುವಿನಲ್ಲಿ ಘರ್ಷಣೆ ಸಂಭವಿಸಿದೆ ಎಂದು ಮೂಲಗಳು ತಿಳಿಸಿವೆ.

ಮೃತರನ್ನು ಸೋಮವಾರಪೇಟೆಯ ಹೋಟೆಲ್ ಮಾಲೀಕ ರವಿ (53) ಎಂದು ಗುರುತಿಸಲಾಗಿದ್ದು, ಇವರು ವ್ಯಾನ್ ಚಲಾಯಿಸುತ್ತಿದ್ದರು.

ಗಾಯಾಳುಗಳನ್ನು ಪುತ್ತೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಡಬ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

SCROLL FOR NEXT