ಸಾಂದರ್ಭಿಕ ಚಿತ್ರ 
ರಾಜ್ಯ

ಮೈಸೂರು, ಹೊಸೂರು ರಸ್ತೆಯಲ್ಲಿ ಭಾರೀ ಟ್ರಾಫಿಕ್: ಸಂಚಾರ ಅಸ್ತವ್ಯಸ್ತ

ಕ್ರಿಸ್‌ಮಸ್ ಮತ್ತು ವರ್ಷಾಂತ್ಯದ ರಜೆಯ ಹಿನ್ನೆಲೆಯಲ್ಲಿ ನಗರದಿಂದ ಪ್ರಸಿದ್ಧ ಪ್ರವಾಸಿ ತಾಣಗಳಿಗೆ ತೆರಳುವ ಜನರಿಂದ ಶನಿವಾರ ಬೆಂಗಳೂರು-ಮೈಸೂರು ರಸ್ತೆ, ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ರಸ್ತೆ ಮತ್ತು ಹೊಸೂರು ರಸ್ತೆಯಲ್ಲಿ ಗಂಟೆಗಟ್ಟಲೆ ಟ್ರಾಫಿಕ್ ಜಾಮ್‌ ಉಂಟಾಗಿತ್ತು.

ಬೆಂಗಳೂರು: ಕ್ರಿಸ್‌ಮಸ್ ಮತ್ತು ವರ್ಷಾಂತ್ಯದ ರಜೆಯ ಹಿನ್ನೆಲೆಯಲ್ಲಿ ನಗರದಿಂದ ಪ್ರಸಿದ್ಧ ಪ್ರವಾಸಿ ತಾಣಗಳಿಗೆ ತೆರಳುವ ಜನರಿಂದ ಶನಿವಾರ ಬೆಂಗಳೂರು-ಮೈಸೂರು ರಸ್ತೆ, ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ರಸ್ತೆ ಮತ್ತು ಹೊಸೂರು ರಸ್ತೆಯಲ್ಲಿ ಗಂಟೆಗಟ್ಟಲೆ ಟ್ರಾಫಿಕ್ ಜಾಮ್‌ ಉಂಟಾಗಿತ್ತು. ಇದರಿಂದಾಗಿ ವಾಹನ ಸವಾರರು ಹಲವು ಗಂಟೆಗಳ ಕಾಲ ಟ್ರಾಫಿಕ್‌ನಲ್ಲಿ ಸಿಲುಕಿಕೊಂಡರು.

ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ ನಲ್ಲಿ ನೂರಾರು ವಾಹನ ಸವಾರರು ಹಲವು ಗಂಟೆಗಳ ಕಾಲ ಸಿಲುಕಿಕೊಂಡರು. ಮುಂಜಾನೆಯೇ ಮನೆ ಬಿಟ್ಟರೂ ಸಂಚಾರ ದಟ್ಟಣೆಯಲ್ಲಿ ಸಿಲುಕಿಕೊಂಡಿರುವುದಾಗಿ ಪ್ರಯಾಣಿಕರು ಹೇಳಿದರು. ಕೆಂಗೇರಿ ತಲುಪುತ್ತಿದ್ದಂತೆ, ಹೆದ್ದಾರಿಯಲ್ಲಿ ನೂರಾರು ಕಾರುಗಳು ಮತ್ತು ಇತರ ವಾಹನಗಳು ಸಾಲುಗಟ್ಟಿ ನಿಂತಿದ್ದವು. ಬೆಂಗಳೂರು-ಮೈಸೂರು ಪ್ರವೇಶ ನಿಯಂತ್ರಿತ ಹೆದ್ದಾರಿ ಪ್ರವೇಶಿಸುವವರೆಗೂ ತುಂಬಾ ಸಮಯ ಹಿಡಿಯಿತು ಎಂದು ಮೈಸೂರಿಗೆ ಹೊರಟ ಪ್ರಶಾಂತ್ ಹೇಳಿದರು.

ಸೋಮವಾರದಿಂದ ಕ್ರಿಸ್‌ಮಸ್‌ ರಜೆ ಇರುವುದರಿಂದ ಟ್ರಾಫಿಕ್‌ ಜಾಮ್‌ ಉಂಟಾಗಿದೆ. ಅನೇಕರು ತಮ್ಮ ಫಾಸ್ ಟ್ಯಾಗ್  ರೀಚಾರ್ಜ್ ಮಾಡಿಲ್ಲ ಮತ್ತು ಟೋಲ್ ಶುಲ್ಕವನ್ನು ದುಪ್ಪಟ್ಟು ಪಾವತಿಸುವಂತೆ ಕೇಳಲಾಯಿತು. ಇದು ಟ್ರಾಫಿಕ್ ಜಾಮ್‌ಗೆ ಮತ್ತೊಂದು ಕಾರಣವಾಗಿತ್ತು. ವಾಹನ ಚಾಲಕರು ತಮ್ಮ ಪ್ರಯಾಣ ಪ್ರಾರಂಭಿಸುವ ಮೊದಲು ತಮ್ಮ ಫಾಸ್ ಟ್ಯಾಗ್ ಬ್ಯಾಲೆನ್ಸ್  ಪರಿಶೀಲಿಸದ ಕಾರಣ ಇದು ಸಾಮಾನ್ಯವಾಗಿ ಸಂಭವಿಸುತ್ತದೆ ಎಂದು ಅವರು ಹೇಳಿದರು.

ಹೊಸೂರು ರಸ್ತೆಯಲ್ಲೂ ಪರಿಸ್ಥಿತಿ ಭಿನ್ನವಾಗಿರಲಿಲ್ಲ. ಕ್ರಿಸ್‌ಮಸ್ ಮತ್ತು ಹೊಸ ವರ್ಷದ ಸಂಭ್ರಮಾಚರಣೆಗಾಗಿ ಅನೇಕರು ಹೊಸೂರು ರಸ್ತೆಯ ಮೂಲಕ ಕೇರಳದ ಕಡೆಗೆ ತೆರಳಿದ್ದರಿಂದ ಟ್ರಾಫಿಕ್ ಜಾಮ್ ಆಗಿತ್ತು. ಬೆಂಗಳೂರಿನ ಹಲವು ಕಾರ್ಪೊರೇಟ್ ಕಚೇರಿಗಳಿಗೆ ರಜೆ ಘೋಷಿಸಲಾಗಿದೆ ಎಂದು ಟೆಕ್ಕಿ ಬಾಲಚಂದರ್ ತಿಳಿಸಿದರು. 

ಬಳ್ಳಾರಿ ರಸ್ತೆಯಲ್ಲಿ ಭಾರೀ ದಟ್ಟಣೆಯಿಂದಾಗಿ ಅನೇಕ ಪ್ರಯಾಣಿಕರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ತಲುಪಲು ತುಂಬಾ ಸಮಯ ಬೇಕಾಯಿತು. ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಮತ್ತೆ ರಜೆ ಇರುವುದರಿಂದ ಟ್ರಾಫಿಕ್ ಜಾಮ್ ಆಗಿದೆ ಎಂದು ಚನ್ನಪಟ್ಟಣ ಸಂಚಾರ ಪೊಲೀಸ್ ಠಾಣೆಯ ಕಾನ್‌ಸ್ಟೆಬಲ್ ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಚೀನಾ ಏಕಪಕ್ಷೀಯ ನೀತಿಗೆ ಬ್ರೇಕ್‌: 'Quad' ಸಭೆ ನಡುವೆ ಮಹತ್ವದ ಖನಿಜ ಒಪ್ಪಂದಕ್ಕೆ ಭಾರತ-ಅಮೆರಿಕಾ ಸಹಿ..!

ಚೀನಾಗೆ ಕೌಂಟರ್: ಇಂಡೋ-ಪೆಸಿಫಿಕ್‌ನಲ್ಲಿ ಭದ್ರತಾ ಸಹಕಾರ ಹೆಚ್ಚಿಸಲು 'Quad' ಮಹತ್ವದ ತೀರ್ಮಾನ, ಹೊಸ ಕಾರ್ಯಯೋಜನೆ ಘೋಷಿಸಿದ ಮಾರ್ಕೊ ರುಬಿಯೋ..!

ಹಂಪಿಯಲ್ಲಿ ಉದ್ವಿಗ್ನ ಪರಿಸ್ಥಿತಿ: ಲಕ್ಷ್ಮಿ ಆನೆ ಸ್ಥಳಾಂತರಕ್ಕೆ ಸ್ಥಳೀಯರಿಂದ ಭಾರೀ ವಿರೋಧ; ಭಾವನಾತ್ಮಕ ಪ್ರತಿಭಟನೆ

ದೆಹಲಿಯಲ್ಲಿ ಸಿದ್ದರಾಮಯ್ಯ-ಡಿಕೆ.ಶಿವಕುಮಾರ್; ನಾಯಕತ್ವ ಬದಲಾವಣೆ ಊಹಾಪೋಹಗಳಿಗೆ ಬೀಳುತ್ತಾ ತೆರೆ? ಕುತೂಹಲ ಮೂಡಿಸಿದ ಕಾಂಗ್ರೆಸ್ ಸಭೆ..!

ಪ್ಯಾಲೆಸ್ಟೀನ್ ರಾಷ್ಟ್ರ ಸ್ಥಾಪನೆವರೆಗೆ ಇಸ್ರೇಲ್‌ಗೆ ಮಾನ್ಯತೆ ಇಲ್ಲ: ಅಬ್ರಹಾಂ ಒಪ್ಪಂದಕ್ಕೆ 'NO' ಎಂದ ಪಾಕಿಸ್ತಾನ, ಟ್ರಂಪ್ ರಾಜತಾಂತ್ರಿಕ ಯತ್ನಕ್ಕೆ ಹಿನ್ನೆಡೆ..!

SCROLL FOR NEXT