ಬೆಂಕಿ (ಸಾಂಕೇತಿಕ ಚಿತ್ರ) 
ರಾಜ್ಯ

ಬೆಂಗಳೂರು: ಸಿಲಿಂಡರ್ ಸ್ಫೋಟದಿಂದ ಗಾಯಗೊಂಡಿದ್ದ ತಂದೆ-ಮಗ ಸಾವು, ಮೂವರ ಸ್ಥಿತಿ ಗಂಭೀರ

ಗರ್ವೆಭಾವಿ ಪಾಳ್ಯದಲ್ಲಿರುವ ತಮ್ಮ ನಿವಾಸದಲ್ಲಿ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಎರಡೂವರೆ ವರ್ಷದ ಮಗು ಸೇರಿದಂತೆ ಇಬ್ಬರು ಸಾವಿಗೀಡಾಗಿದ್ದು, ಉಳಿದ ಮೂವರು ಕುಟುಂಬ ಸದಸ್ಯರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೆಂಗಳೂರು: ಗರ್ವೆಭಾವಿ ಪಾಳ್ಯದಲ್ಲಿರುವ ತಮ್ಮ ನಿವಾಸದಲ್ಲಿ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಎರಡೂವರೆ ವರ್ಷದ ಮಗು ಸೇರಿದಂತೆ ಇಬ್ಬರು ಸಾವಿಗೀಡಾಗಿದ್ದು, ಉಳಿದ ಮೂವರು ಕುಟುಂಬ ಸದಸ್ಯರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಡಿಸೆಂಬರ್ 19 ರಂದು ಈ ಘಟನೆ ನಡೆದಿದ್ದು, ಕುಟುಂಬದ ಸದಸ್ಯರಲ್ಲಿ ಒಬ್ಬರಾದ ನಿಖಿಲಾ (26) ಅವರು ಸೋಮವಾರ ರಾತ್ರಿ ಅಡುಗೆ ತಯಾರಿಸಿದ ನಂತರ ಗ್ಯಾಸ್ ರೆಗ್ಯುಲೇಟರ್ ಅನ್ನು ಸ್ವಿಚ್ ಆಫ್ ಮಾಡಲು ಮರೆತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. 

ಮಂಗಳವಾರ ಬೆಳಗ್ಗೆ 7 ಗಂಟೆ ಸುಮಾರಿಗೆ ಸಂತ್ರಸ್ತ ಸಂದೇಶ್ ಎಂಬುವವರು ಗ್ಯಾಸ್ ಹೊತ್ತಿಸಿದ ಪರಿಣಾಮ ಸಿಲಿಂಡರ್ ಸ್ಫೋಟಗೊಂಡಿದೆ.

ರೆಗ್ಯುಲೇಟರ್ ಅನ್ನು ಆನ್ ಮಾಡಿದ್ದರಿಂದ ಗ್ಯಾಸ್ ಸೋರಿಕೆಯಾಗಿ ದುರ್ಘಟನೆ ಸಂಭವಿಸಿದೆ. ಘಟನೆಯಲ್ಲಿ ಸಂದೇಶ್, ಅವರ ಮಗು ರೋಷನ್ ಮತ್ತು ಅವರ ಅತ್ತಿಗೆ ನಿಖಿಲಾ ಮತ್ತು ಇತರ ಇಬ್ಬರು ಮಕ್ಕಳಾದ ರೋಶಿನಿ ಮತ್ತು ರೋಹನ್‌ಗೆ ಗಂಭೀರ ಗಾಯಗಳಾಗಿದ್ದವು. ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. 

ನಂತರ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದ್ದು, ಭಾನುವಾರ ಬೆಳಗ್ಗೆ ಸಂದೇಶ್ ಮತ್ತು ರೋಷನ್ ಅವರು ಚಿಕಿತ್ಸೆಗೆ ಸ್ಪಂದಿಸದೆ ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. 

ಸದ್ಯ ಚಿಕಿತ್ಸೆ ಪಡೆಯುತ್ತಿರುವ ಕುಟುಂಬದ ಇತರೆ ಸದಸ್ಯರ ಸ್ಥಿತಿ ಚಿಂತಾಜನಕವಾಗಿದೆ. ಬೇಗೂರು ಪೊಲೀಸರು ಅಸಹಜ ಸಾವು ಎಂದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT