ಸಿದ್ದರಾಮಯ್ಯ 
ರಾಜ್ಯ

ಅನ್ನ ಕೊಡುವ ನೆಲದ ನಿಯಮ ಪಾಲಿಸಿ, ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ: ಸಿಎಂ ಸಿದ್ದರಾಮಯ್ಯ

ಬೆಂಗಳೂರಿನ ವಾಣಿಜ್ಯ ಮಳಿಗೆಗಳ ನಾಮಫಲಕದಲ್ಲಿ ಶೇ 60 ಕನ್ನಡ ಅಕ್ಷರಗಳ ಬಳಕೆ ಕಡ್ಡಾಯಗೊಳಿಸಲಾಗಿದೆ. ಇದಕ್ಕೆ ಫೆಬ್ರುವರಿ 28 ಕಡೆಯ ದಿನವಾಗಿದ್ದು, ಕನ್ನಡವನ್ನು ಉಳಿಸಿ, ಕನ್ನಡತನವನ್ನು ಬೆಳೆಸುವ ಸಲುವಾಗಿ ಈ ನಿಯಮ ತರಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಬೆಂಗಳೂರು: ಬೆಂಗಳೂರಿನ ವಾಣಿಜ್ಯ ಮಳಿಗೆಗಳ ನಾಮಫಲಕದಲ್ಲಿ ಶೇ 60 ಕನ್ನಡ ಅಕ್ಷರಗಳ ಬಳಕೆ ಕಡ್ಡಾಯಗೊಳಿಸಲಾಗಿದೆ. ಇದಕ್ಕೆ ಫೆಬ್ರುವರಿ 28 ಕಡೆಯ ದಿನವಾಗಿದ್ದು, ಕನ್ನಡವನ್ನು ಉಳಿಸಿ, ಕನ್ನಡತನವನ್ನು ಬೆಳೆಸುವ ಸಲುವಾಗಿ ಈ ನಿಯಮ ತರಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಈ ಬಗ್ಗೆ ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿ ಮನವಿ ಮಾಡಿಕೊಂಡಿರುವ ಅವರು, ಕರ್ನಾಟಕದಲ್ಲಿ ಹುಟ್ಟಿ ಬೆಳೆದವರು, ಹೊರರಾಜ್ಯದಿಂದ ಇಲ್ಲಿಗೆ ಬಂದು ಬದುಕು ಕಟ್ಟಿಕೊಂಡವರನ್ನು ನಾವು "ಕನ್ನಡಿಗ"ರೇ ಎಂದು ಭಾವಿಸಿದ್ದೇವೆ.  ಕನ್ನಡ ನೆಲದಲ್ಲಿ ಕನ್ನಡಕ್ಕೇ ಮೊದಲ ಪ್ರಾಶಸ್ತ್ಯ, ಅನ್ನ ಕೊಡುವ ಈ ನೆಲದ ನಿಯಮ ಪಾಲನೆ ಮಾಡಬೇಕಿರುವುದು ಪ್ರತಿಯೊಬ್ಬರ ಕರ್ತವ್ಯ ಕೂಡ.  ಕನ್ನಡವನ್ನು ಉಳಿಸಿ, ಕನ್ನಡತನವನ್ನು ಬೆಳೆಸುವ ಸಲುವಾಗಿ ಬೆಂಗಳೂರಿನ ವಾಣಿಜ್ಯ ಮಳಿಗೆಗಳ ನಾಮಫಲಕದಲ್ಲಿ ಶೇ.60 ಕನ್ನಡ ಅಕ್ಷರಗಳ ಬಳಕೆ ಕಡ್ಡಾಯಗೊಳಿಸಲಾಗಿದೆ. ಇದಕ್ಕೆ ಫೆಬ್ರವರಿ 28 ಕಡೆಯ ದಿನವಾಗಿದ್ದು, ನಿಯಮ ಪಾಲನೆ ಮಾಡಿ "ಹೆಮ್ಮೆಯ ಕನ್ನಡಿಗ"ರಾಗಿ ಎಂದು ಸಂದೇಶ ರವಾನಿಸಿದ್ದಾರೆ.

ವಾಣಿಜ್ಯ ಮಳಿಗೆಗಳ ನಾಮಫಲಕಗಳಲ್ಲಿ ಕಡ್ಡಾಯವಾಗಿ ಕನ್ನಡ ಬಳಸುವಂತೆ ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಸದಸ್ಯರು ಈ ಹಿಂದೆ ಮನವಿ ಮಾಡಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇದು ಕೇವಲ ಧ್ವಜವಲ್ಲ ಭಾರತೀಯ ನಾಗರಿಕತೆಯ ಪುನರ್‌ ಜಾಗೃತಿಯ ಧ್ವಜ, ಶತಮಾನಗಳಷ್ಟು ಹಳೆಯ ಗಾಯ ಈಗ ವಾಸಿಯಾಗುತ್ತಿದೆ: ಪ್ರಧಾನಿ ಮೋದಿ

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

"Misfit For Army": ಗುರುದ್ವಾರ ಪ್ರವೇಶಿಸಲು ನಿರಾಕರಣೆ; ಕ್ರಿಶ್ಚಿಯನ್ ಸೇನಾ ಅಧಿಕಾರಿಗೆ ಸುಪ್ರೀಂ ಕೋರ್ಟ್ ತರಾಟೆ!

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್: ಏಕ ಕಾಲದಲ್ಲಿ ರಾಜ್ಯದ 10 ಕಡೆ ದಾಳಿ- ಪರಿಶೀಲನೆ

WPL 2026 auction: ಈ ಬಾರಿಯ 'ಮೋಸ್ಟ್ ಡಿಮ್ಯಾಂಡ್' ಆಟಗಾರ್ತಿ ಯಾರು?

SCROLL FOR NEXT