ಸಿದ್ದರಾಮಯ್ಯ 
ರಾಜ್ಯ

ಅನ್ನ ಕೊಡುವ ನೆಲದ ನಿಯಮ ಪಾಲಿಸಿ, ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ: ಸಿಎಂ ಸಿದ್ದರಾಮಯ್ಯ

ಬೆಂಗಳೂರಿನ ವಾಣಿಜ್ಯ ಮಳಿಗೆಗಳ ನಾಮಫಲಕದಲ್ಲಿ ಶೇ 60 ಕನ್ನಡ ಅಕ್ಷರಗಳ ಬಳಕೆ ಕಡ್ಡಾಯಗೊಳಿಸಲಾಗಿದೆ. ಇದಕ್ಕೆ ಫೆಬ್ರುವರಿ 28 ಕಡೆಯ ದಿನವಾಗಿದ್ದು, ಕನ್ನಡವನ್ನು ಉಳಿಸಿ, ಕನ್ನಡತನವನ್ನು ಬೆಳೆಸುವ ಸಲುವಾಗಿ ಈ ನಿಯಮ ತರಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಬೆಂಗಳೂರು: ಬೆಂಗಳೂರಿನ ವಾಣಿಜ್ಯ ಮಳಿಗೆಗಳ ನಾಮಫಲಕದಲ್ಲಿ ಶೇ 60 ಕನ್ನಡ ಅಕ್ಷರಗಳ ಬಳಕೆ ಕಡ್ಡಾಯಗೊಳಿಸಲಾಗಿದೆ. ಇದಕ್ಕೆ ಫೆಬ್ರುವರಿ 28 ಕಡೆಯ ದಿನವಾಗಿದ್ದು, ಕನ್ನಡವನ್ನು ಉಳಿಸಿ, ಕನ್ನಡತನವನ್ನು ಬೆಳೆಸುವ ಸಲುವಾಗಿ ಈ ನಿಯಮ ತರಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಈ ಬಗ್ಗೆ ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿ ಮನವಿ ಮಾಡಿಕೊಂಡಿರುವ ಅವರು, ಕರ್ನಾಟಕದಲ್ಲಿ ಹುಟ್ಟಿ ಬೆಳೆದವರು, ಹೊರರಾಜ್ಯದಿಂದ ಇಲ್ಲಿಗೆ ಬಂದು ಬದುಕು ಕಟ್ಟಿಕೊಂಡವರನ್ನು ನಾವು "ಕನ್ನಡಿಗ"ರೇ ಎಂದು ಭಾವಿಸಿದ್ದೇವೆ.  ಕನ್ನಡ ನೆಲದಲ್ಲಿ ಕನ್ನಡಕ್ಕೇ ಮೊದಲ ಪ್ರಾಶಸ್ತ್ಯ, ಅನ್ನ ಕೊಡುವ ಈ ನೆಲದ ನಿಯಮ ಪಾಲನೆ ಮಾಡಬೇಕಿರುವುದು ಪ್ರತಿಯೊಬ್ಬರ ಕರ್ತವ್ಯ ಕೂಡ.  ಕನ್ನಡವನ್ನು ಉಳಿಸಿ, ಕನ್ನಡತನವನ್ನು ಬೆಳೆಸುವ ಸಲುವಾಗಿ ಬೆಂಗಳೂರಿನ ವಾಣಿಜ್ಯ ಮಳಿಗೆಗಳ ನಾಮಫಲಕದಲ್ಲಿ ಶೇ.60 ಕನ್ನಡ ಅಕ್ಷರಗಳ ಬಳಕೆ ಕಡ್ಡಾಯಗೊಳಿಸಲಾಗಿದೆ. ಇದಕ್ಕೆ ಫೆಬ್ರವರಿ 28 ಕಡೆಯ ದಿನವಾಗಿದ್ದು, ನಿಯಮ ಪಾಲನೆ ಮಾಡಿ "ಹೆಮ್ಮೆಯ ಕನ್ನಡಿಗ"ರಾಗಿ ಎಂದು ಸಂದೇಶ ರವಾನಿಸಿದ್ದಾರೆ.

ವಾಣಿಜ್ಯ ಮಳಿಗೆಗಳ ನಾಮಫಲಕಗಳಲ್ಲಿ ಕಡ್ಡಾಯವಾಗಿ ಕನ್ನಡ ಬಳಸುವಂತೆ ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಸದಸ್ಯರು ಈ ಹಿಂದೆ ಮನವಿ ಮಾಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

SCROLL FOR NEXT