ಲತಾ ರಜನಿಕಾಂತ್ 
ರಾಜ್ಯ

ಕೊಚ್ಚಾಡಿಯನ್ ವಂಚನೆ ಪ್ರಕರಣ: ರಜನಿಕಾಂತ್ ಪತ್ನಿ ಬೆಂಗಳೂರಿನ ಕೋರ್ಟಿಗೆ ಹಾಜರ್, ಜಾಮೀನು ಮಂಜೂರು

ಕೊಚಾಡಿಯನ್ ಚಿತ್ರದ ವಿತರಕರಿಗೆ ವಂಚಿಸಿದ ಆರೋಪ ಎದುರಿಸುತ್ತಿರುವ ತಮಿಳು ಸೂಪರ್ ಸ್ಟಾರ್ ರಜನಿಕಾಂತ್ ಅವರ ಪತ್ನಿ ಲತಾ ರಜನಿಕಾಂತ್ ಅವರು ಮಂಗಳವಾರ ಬೆಂಗಳೂರಿನ ಕೋರ್ಟ್ ಗೆ ಖುದ್ದು ಹಾಜರಾಗಿ ಜಾಮೀನು...

ಬೆಂಗಳೂರು: ಕೊಚಾಡಿಯನ್ ಚಿತ್ರದ ವಿತರಕರಿಗೆ ವಂಚಿಸಿದ ಆರೋಪ ಎದುರಿಸುತ್ತಿರುವ ತಮಿಳು ಸೂಪರ್ ಸ್ಟಾರ್ ರಜನಿಕಾಂತ್ ಅವರ ಪತ್ನಿ ಲತಾ ರಜನಿಕಾಂತ್ ಅವರು ಮಂಗಳವಾರ ಬೆಂಗಳೂರಿನ ಕೋರ್ಟ್ ಗೆ ಖುದ್ದು ಹಾಜರಾಗಿ ಜಾಮೀನು ಪಡೆದುಕೊಂಡಿದ್ದಾರೆ.

ವಂಚನೆ ಪ್ರಕರಣ ಸಂಬಂಧ 2024 ಜನವರಿ 6ರ ಒಳಗೆ ಖುದ್ದಾಗಿ ಕೋರ್ಟಿಗೆ ಹಾಜರಾಗಬೇಕು ಎಂದು ಬೆಂಗಳೂರಿನ 1ನೇ ಎಸಿಎಂಎಂ ಕೋರ್ಟ್ ಲತಾ ರಜಿನಿಕಾಂತ್ ಅವರಿಗೆ ಸೂಚಿಸಿತ್ತು. ಅದರಂತೆ ಇಂದು ಖುದ್ದಾಗಿ ಲತಾ ಅವರು ಬೆಂಗಳೂರಿನ ಕೋರ್ಟಿಗೆ ಹಾಜರಾಗಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯದ ಆರೋಪಿ ಲತಾ ಅವರಿಗೆ ಜಾಮೀನು ಮಂಜೂರು ಮಾಡಿದೆ. ಎರಡು ವೈಯಕ್ತಿಕ ಬಾಂಡ್ ನೀಡುವಂತೆ ಲತಾ ಅವರಿಗೆ ಕೋರ್ಟ್ ಸೂಚನೆ ನೀಡಿದೆ.

ಆ್ಯಡ್ ಬ್ಯೂರೋ ಏಜೆನ್ಸಿ ಲತಾ ವಿರುದ್ಧ ಕೇಸ್ ದಾಖಲಿಸಿದ್ದು, ಕೊಚಾಡಿಯನ್ ಚಿತ್ರಕ್ಕಾಗಿ 6.2 ಕೋಟಿ ರೂ. ಸಾಲ ಪಡೆದು ಹಿಂದಿರುಗಿಸಿಲ್ಲ ಮತ್ತು ನಕಲಿ ಲೆಟರ್ ಹೆಡ್ ನೀಡಿದ್ದಾರೆ ಎಂದು ಅಬಿರ್ ಚಂದ್ ನವಾಹರ್ ಎಂಬುವವರು ದೂರು ನೀಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Eiffel Tower ಇನ್ನು ನೆನಪು ಮಾತ್ರ?: ಪ್ರಸಿದ್ಧ ಸ್ಮಾರಕ ಕೆಡವುತ್ತಿರುವ ಬಗ್ಗೆ ಟ್ಯಾಪಿಯೋಕಾ ಟೈಮ್ಸ್ ಹೇಳಿದ್ದೇನು?

SCROLL FOR NEXT