ಗೃಹ ಸಚಿವ ಡಾ. ಜಿ ಪರಮೇಶ್ವರ 
ರಾಜ್ಯ

ಶಾಂತಿಯುತ ಹೊಸ ವರ್ಷಾಚರಣೆಗೆ ರಾಜ್ಯದಾದ್ಯಂತ ಮುಂಜಾಗ್ರತಾ ಕ್ರಮ: ಗೃಹ ಸಚಿವ ಜಿ ಪರಮೇಶ್ವರ

ಎಲ್ಲಾ ಇಲಾಖೆಗಳ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದು, ಹೊಸ ವರ್ಷ ಮತ್ತು ಸಂಬಂಧಿತ ಆಚರಣೆಗಳ ಸಂದರ್ಭದಲ್ಲಿ ರಾಜ್ಯದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ ಎಂದು ಗೃಹ ಸಚಿವ ಜಿ ಪರಮೇಶ್ವರ ಮಂಗಳವಾರ ಹೇಳಿದರು.

ಬೆಂಗಳೂರು: ಎಲ್ಲಾ ಇಲಾಖೆಗಳ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದು, ಹೊಸ ವರ್ಷ ಮತ್ತು ಸಂಬಂಧಿತ ಆಚರಣೆಗಳ ಸಂದರ್ಭದಲ್ಲಿ ರಾಜ್ಯದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ ಎಂದು ಗೃಹ ಸಚಿವ ಜಿ ಪರಮೇಶ್ವರ ಮಂಗಳವಾರ ಹೇಳಿದರು.

ರಾಜ್ಯ ರಾಜಧಾನಿ ಬೆಂಗಳೂರು ಮಾತ್ರವಲ್ಲದೆ ಮೈಸೂರು, ಬೆಳಗಾವಿ, ಹುಬ್ಬಳ್ಳಿ-ಧಾರವಾಡ ಮತ್ತು ಕಲಬುರಗಿಯಂತಹ ಎರಡನೇ ಶ್ರೇಣಿಯ ನಗರಗಳಲ್ಲಿಯೂ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ರಾಜ್ಯಾದ್ಯಂತ ಈ ಬಗ್ಗೆ ಪೊಲೀಸರು ಸಲಹೆಗಳನ್ನು ನೀಡಲಿದ್ದಾರೆ ಎಂದು ಅವರು ಹೇಳಿದರು.

'ಹೊಸ ವರ್ಷಕ್ಕೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ, ಈಗಾಗಲೇ ಪೊಲೀಸ್, ಆರೋಗ್ಯ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ), ವಿದ್ಯುತ್ ಮತ್ತು ಅಬಕಾರಿ ಇಲಾಖೆಗಳಂತಹ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳೊಂದಿಗೆ ಆಯಾ ಇಲಾಖೆಗಳು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಿದ್ದೇನೆ' ಎಂದು ಪರಮೇಶ್ವರ ಹೇಳಿದರು.

'ಬೆಂಗಳೂರಿನ ಎಂಜಿ ರಸ್ತೆ ಮತ್ತು ಬ್ರಿಗೇಡ್ ರಸ್ತೆಯಂತಹ ಸ್ಥಳಗಳಲ್ಲಿ ವಿಶೇಷವಾಗಿ ಜನರು ಸಂಭ್ರಮಾಚರಣೆಗಾಗಿ ಹೆಚ್ಚಿನ ಸಂಖ್ಯೆಯಲ್ಲಿ ಸೇರುವ ಸ್ಥಳಗಳಲ್ಲಿ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಬೇಕುಟ ಎಂದರು.

ಈ ಕುರಿತು ನಾವು ಸಲಹೆ ನೀಡಿದ್ದು, ನಗರ ಪೊಲೀಸ್ ಆಯುಕ್ತರು ಅದನ್ನು ಹಂಚಿಕೊಳ್ಳಲಿದ್ದಾರೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

ಅಭಿಷೇಕ್ ಶರ್ಮಾನನ್ನು ಮೂರೇ ಎಸೆತಗಳಲ್ಲಿ ಔಟ್ ಮಾಡುತ್ತೇನೆ: ಪಾಕ್ ನ 152.65 kmph ವೇಗಿಯ ಉದ್ಧಟತನದ ಮಾತು

ಡಿಕೆ ಶಿವಕುಮಾರ್ ಇದ್ದ ವೇದಿಕೆಯಲ್ಲೇ ಹೈಡ್ರಾಮಾ: RSS ಸಮವಸ್ತ್ರದಲ್ಲಿ ಬಿಜೆಪಿ ಶಾಸಕ ಮುನಿರತ್ನ ಧರಣಿ! Video

SCROLL FOR NEXT