ನಾರಾಯಣಗೌಡ ಸಾಂದರ್ಭಿಕ ಚಿತ್ರ 
ರಾಜ್ಯ

ಕರವೇ ನಾರಾಯಣಗೌಡ, ಕಾರ್ಯಕರ್ತರಿಗೆ ಸೂಕ್ತ ರಕ್ಷಣೆಗೆ ಆರ್. ಅಶೋಕ್ ಆಗ್ರಹ

ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ನಾರಾಯಣಗೌಡ ಹಾಗೂ ಕಾರ್ಯಕರ್ತರಿಗೆ ಸರ್ಕಾರ ಸೂಕ್ತ ರಕ್ಷಣೆ ಒದಗಿಸಬೇಕೆಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಆಗ್ರಹಿಸಿದ್ದಾರೆ.

ಬೆಂಗಳೂರು: ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ನಾರಾಯಣಗೌಡ ಹಾಗೂ ಕಾರ್ಯಕರ್ತರಿಗೆ ಸರ್ಕಾರ ಸೂಕ್ತ ರಕ್ಷಣೆ ಒದಗಿಸಬೇಕೆಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಆಗ್ರಹಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಟ್ವೀಟ್ ಮಾಡಿರುವ ಅಶೋಕ್, ಮಾಲ್ ಆಫ್ ಏಷ್ಯಾದಲ್ಲಿ ಕನ್ನಡ ನಾಮಫಲಕ ಇಲ್ಲದ ಮಳಿಗೆಗಳಲ್ಲಿ ಸರ್ಕಾರದ ಅಧಿಕೃತ ಸೂಚನೆಯಂತೆ ಕನ್ನಡ ನಾಮಫಲಕ ಅಳವಡಿಸುವಂತೆ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದ ಬೆನ್ನಲ್ಲೇ ಕೆಲ ಕಿಡಿಗೇಡಿಗಳು ಕರವೇ ರಾಜ್ಯಾಧ್ಯಕ್ಷ  ಕೆ.ನಾರಾಯಣಗೌಡರಿಗೆ ದೂರವಾಣಿ ಕರೆ ಮೂಲಕ ಜೀವ ಬೆದರಿಕೆ ಹಾಕಿದ್ದಾರೆ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.

ಈ ಬೆಳವಣಿಗೆ ಅತ್ಯಂತ ಖಂಡನೀಯವಾಗಿದ್ದು, ಕನ್ನಡದ ನೆಲ, ಜಲ, ಭಾಷೆಗಾಗಿ ಹೋರಾಡುವವರ ದನಿ ಅಡಗಿಸಲು ಪ್ರಯತ್ನಿಸುತ್ತಿರುವ ದುಷ್ಕರ್ಮಿಗಳನ್ನ ಪತ್ತೆಹಚ್ಚಿ ಕಾನೂನಿನ ವಶಕ್ಕೆ ಒಪ್ಪಿಸಬೇಕು ಮತ್ತು ನಾರಾಯಣಗೌಡರಿಗೆ ಹಾಗೂ ಕರವೇ ಕಾರ್ಯಕರ್ತರಿಗೆ ಸೂಕ್ತ ರಕ್ಷಣೆ ಒದಗಿಸಬೇಕು ಎಂದು ಸರ್ಕಾರಕ್ಕೆ ಆಗ್ರಹಿಸುವುದಾಗಿ ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು; Video!

SCROLL FOR NEXT