ಸಚಿವ ಸತೀಶ್ ಜಾರಕಿಹೊಳಿ 
ರಾಜ್ಯ

ಹಿಜಾಬ್ ನಿಷೇಧ ವಾಪಸ್'ಗೆ ಸರ್ಕಾರ ಬದ್ಧ: ಸಚಿವ ಸತೀಶ್ ಜಾರಕಿಹೊಳಿ

ಹಿಜಾಬ್ ನಿಷೇಧ ಆದೇಶ ವಾಪಸ್​ ಪಡೆಯುವುದು ನಮ್ಮ ಸರ್ಕಾರದ ನಿಲುವು. ರಾಜ್ಯದ ಶಿಕ್ಷಣ ಸಂಸ್ಥೆಗಳಲ್ಲಿನ ಹಿಜಾಬ್ ನಿಷೇಧವನ್ನು ಹಿಂಪಡೆಯಲು ಸರ್ಕಾರ ಬದ್ಧವಾಗಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಸೋಮವಾರ ಹೇಳಿದರು.

ಬೆಂಗಳೂರು:  ಹಿಜಾಬ್ ನಿಷೇಧ ಆದೇಶ ವಾಪಸ್​ ಪಡೆಯುವುದು ನಮ್ಮ ಸರ್ಕಾರದ ನಿಲುವು. ರಾಜ್ಯದ ಶಿಕ್ಷಣ ಸಂಸ್ಥೆಗಳಲ್ಲಿನ ಹಿಜಾಬ್ ನಿಷೇಧವನ್ನು ಹಿಂಪಡೆಯಲು ಸರ್ಕಾರ ಬದ್ಧವಾಗಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಸೋಮವಾರ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣಾ ಸಂದರ್ಭದಲ್ಲಿ ನಮ್ಮ ಪಕ್ಷದ ಪ್ರಣಾಳಿಕೆಯಲ್ಲಿ ಹಿಜಾಬ್ ಮೇಲಿನ ನಿಷೇಧವನ್ನು ಹಿಂತೆಗೆದುಕೊಳ್ಳುವುದಾಗಿ ಘೋಷಿಸಿದ್ದೆವು, ನಮ್ಮ ಭರವಸೆಯನ್ನು ಈಡೇರಿಸಲು ನಾವು ಬದ್ಧರಾಗಿದ್ದೇವೆ ಎಂದು ಹೇಳಿದರು.

ಈ ಬಗ್ಗೆ ಸರ್ಕಾರ ತನ್ನ ನಿಲುವನ್ನು ಸ್ಪಷ್ಟಪಡಿಸಿದೆ. ನ್ಯಾಯಾಲಯಕ್ಕೆ ಸರ್ಕಾರದ ನಿಲುವು ತಿಳಿಸುತ್ತೇವೆ. ಹಿಜಾಬ್ ನಿಷೇಧ ಹಿಂಪಡೆಯುತ್ತೇವೆಂದು ಹೇಳುತ್ತೇವೆಂದು ತಿಳಿಸಿದರು.

ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿ, ಬೆಳಗಾವಿ ಮತ್ತು ಚಿಕ್ಕೋಡಿಯಿಂದ ಆಕಾಂಕ್ಷಿಗಳ ಅರ್ಜಿಗಳನ್ನು ಹೈಕಮಾಂಡ್‌ಗೆ ಕಳುಹಿಸಲಾಗುವುದು. ಈ ಸಂಬಂಧ ಮಂಗಳವಾರ ವಿಜಯಪುರದಲ್ಲಿ ಸಭೆ ನಡೆಯಲಿದೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

SCROLL FOR NEXT