ಸಂಗ್ರಹ ಚಿತ್ರ 
ರಾಜ್ಯ

ಬೆಂಗಳೂರು: ನಿಂತಿದ್ದ ಲಾರಿಗೆ ಕಾರು ಡಿಕ್ಕಿ, ಇಬ್ಬರ ದುರ್ಮರಣ

ನೈಸ್ ರಸ್ತೆಯ ಟೋಲ್ ಬಳಿ ನಿಂತಿದ್ದ ಲಾರಿಗೆ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಗಳವಾರ ನಡೆದಿದೆ.

ಬೆಂಗಳೂರು: ನೈಸ್ ರಸ್ತೆಯ ಟೋಲ್ ಬಳಿ ನಿಂತಿದ್ದ ಲಾರಿಗೆ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಗಳವಾರ ನಡೆದಿದೆ.

ಮೃತರನ್ನು ಕನಕಪುರ ರಸ್ತೆಯ ಚುಂಚಘಟ್ಟದ ಮಂಜುನಾಥ್ (55) ಹಾಗೂ ಕಾರು ಚಾಲಕ ನವೀನ್ (34) ಎಂದು ಗುರ್ತಿಸಲಾಗಿದೆ. ಘಟನೆಯಲ್ಲಿ ಮಂಜುನಾಥ್ ಅವರ ಪತ್ನಿ ಹೇಮಲತಾ, ಮಕ್ಕಳಾದ ಕೃತಿಕಾ (20) ಮತ್ತು ಪುತ್ರ ಪ್ರಜ್ವಲ್ (15) ಬದುಕುಳಿದಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮಂಜುನಾಥ್ ಮತ್ತು ಅವರ ಕುಟುಂಬ ರಜೆ ಹಿನ್ನೆಲೆಯಲ್ಲಿ ಮಂಗಳೂರಿಗೆ ತೆರಳಿದ್ದರು, ಮಂಗಳವಾರ ಬೆಳಗ್ಗೆ ಮನೆಗೆ ಮರಳುತ್ತಿದ್ದರು ಎನ್ನಲಾಗಿದೆ.

ಕಾರು ಚಲಾಯಿಸುತ್ತಿದ್ದ ನವೀನ್ ನಿದ್ರೆಗೆ ಜಾರಿದ್ದು, ಈ ವೇಳೆ ರಸ್ತೆ ಬದಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದ್ದಾನೆ. ಕೂಡಲೇ ಸ್ಥಳದಲ್ಲಿದ್ದ ಇತರ ವಾಹನ ಸವಾರರು ರಕ್ಷಣೆಗೆ ಧಾವಿಸಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಸಂಬಂಧ ನೆಲಮಂಗಲ ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT