ಮಕ್ಕಳ ಮೃತದೇಹವನ್ನು ಉಪ್ಪಿನಲ್ಲಿಟ್ಟಿರುವುದು 
ರಾಜ್ಯ

ನೀರಿನಲ್ಲಿ ಮುಳುಗಿ ಮಕ್ಕಳಿಬ್ಬರ ಸಾವು: ಉಪ್ಪಿನ ರಾಶಿಯಲ್ಲಿ ಮೃತದೇಹ ಇಟ್ಟು ಬದುಕಿಸಲು ಪೋಷಕರ ಪರದಾಟ; ಹಾವೇರಿಯಲ್ಲಿ ಮನಕಲಕುವ ಘಟನೆ!

ನೀರಿನಲ್ಲಿ ಮುಳುಗಿ ಮಕ್ಕಳು ಸಾವನ್ನಪ್ಪಿದ್ದು, ದುಃಖತಪ್ತರಾಗಿದ್ದ ಪೋಷಕರು ಮರಳಿ ಬದುಕಿ ಬರುತ್ತಾರೆಂಬ ಆಶಯದೊಂದಿಗೆ ಉಪ್ಪಿನಲ್ಲಿ ಮೃತದೇಹಗಳನ್ನಿಟ್ಟು ಪರದಾಡುತ್ತಿದ್ದ ಮನ ಕಲಕುವ ಘಟನೆಯೊಂದು ಹಾವೇರಿಯಲ್ಲಿ ನಡೆದಿದೆ.

ಹಾವೇರಿ: ನೀರಿನಲ್ಲಿ ಮುಳುಗಿ ಮಕ್ಕಳು ಸಾವನ್ನಪ್ಪಿದ್ದು, ದುಃಖತಪ್ತರಾಗಿದ್ದ ಪೋಷಕರು ಮರಳಿ ಬದುಕಿ ಬರುತ್ತಾರೆಂಬ ಆಶಯದೊಂದಿಗೆ ಉಪ್ಪಿನಲ್ಲಿ ಮೃತದೇಹಗಳನ್ನಿಟ್ಟು ಪರದಾಡುತ್ತಿದ್ದ ಮನ ಕಲಕುವ ಘಟನೆಯೊಂದು ಹಾವೇರಿಯಲ್ಲಿ ನಡೆದಿದೆ.

ಹಾವೇರಿ ಜಿಲ್ಲೆಯ ಕಾಗಿನೆಲೆ ಸಮೀಪದ ಗ್ರಾಮದಲ್ಲಿ ಡಿಸೆಂಬರ್ 24 ರಂದು ಘಟನೆ ವರದಿಯಾಗಿದೆ. ಹೇಮಂತ್ (12) ಮತ್ತು ನಾಗರಾಜ್ (11) ಗ್ರಾಮದ ಕೆರೆಯ ಬಳಿ ಈಜಲು ಹೋಗಿ ನೀರಿನಲ್ಲಿ ಮುಳುಗಿ, ಮೃತಪಟ್ಟಿದ್ದರು.

ದಡದಲ್ಲಿ ಮಕ್ಕಳ ಬಟ್ಟೆಗಳನ್ನು ಕಂಡ ಕೆಲವು ಗ್ರಾಮಸ್ಥರು ಬಾಲಕರನ್ನು ಹುಡುಕಲು ಆರಂಭಿಸಿದ್ದಾರೆ. ಈ ವೇಳೆ ಬಾಲಕರ ಮೃತದೇಹಗಳು ಪತ್ತೆಯಾಗಿವೆ. ಈ ವೇಳೆ ಕೆಲ ಗ್ರಾಮಸ್ಥರು ಮೃತದೇಹಗಳನ್ನು ಉಪ್ಪಿನಲ್ಲಿಟ್ಟರೆ ಮರಳಿ ಬದುಕಬಹುದು ಎಂದು ಸಲಹೆ ನೀಡಿದ್ದಾರೆ.

ಇದನ್ನು ನಂಬಿದ ಪೋಷಕರು ಉಪ್ಪಿನ ರಾಶಿಯಲ್ಲಿ ಮೃತದೇಹಗಳನ್ನಿಟ್ಟು, ಬದುಕಿ ಬರುವಂತೆ ಮೊರೆಯಿಟ್ಟಿದ್ದಾರೆ. ಈ ವಿಚಾರ ತಿಳಿದ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದು, ಪೋಷಕರಿಗೆ ವಾಸ್ತವಿಕ ಸತ್ಯ ತಿಳಿಸಿ ಅಂತ್ಯಸಂಸ್ಕಾರ ನೆರವೇರಿಸುವಂತೆ ಮನವೊಲಿಸಿದ್ದಾರೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT