ಸಾಂದರ್ಭಿಕ ಚಿತ್ರ 
ರಾಜ್ಯ

ರಾಜ್ಯದಲ್ಲಿಂದು 158 ಮಂದಿಗೆ ಕೊರೋನಾ: 69 ಸೋಂಕಿತರು ಗುಣಮುಖ

ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 158 ಜನರಲ್ಲಿ ಕೊರೋನಾ ಸೋಂಕು ದೃಢಪಟ್ಟಿದ್ದು, 69 ಸೋಂಕಿತರು ಗುಣಮುಖರಾಗಿದ್ದಾರೆ. ಯಾವುದೇ ಸಾವು ಪ್ರಕರಣ ವರದಿಯಾಗಿಲ್ಲ. ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 568 ಆಗಿದೆ. 

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 158 ಜನರಲ್ಲಿ ಕೊರೋನಾ ಸೋಂಕು ದೃಢಪಟ್ಟಿದ್ದು, 69 ಸೋಂಕಿತರು ಗುಣಮುಖರಾಗಿದ್ದಾರೆ. ಯಾವುದೇ ಸಾವು ಪ್ರಕರಣ ವರದಿಯಾಗಿಲ್ಲ. ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 568 ಆಗಿದೆ.

ಕಳೆದ 24 ಗಂಟೆಗಳಲ್ಲಿ ಒಟ್ಟು 8,350 ಪರೀಕ್ಷೆ ಮಾಡಲಾಗಿದೆ. ಈ ಪೈಕಿ 6,346 ಆರ್ ಟಿ ಪಿಸಿಆರ್ ಹಾಗೂ 2,004 RAT ಪರೀಕ್ಷೆ ಮಾಡಲಾಗಿದೆ. ಕೋವಿಡ್ ಪಾಸಿಟಿವಿಟಿ ದರ ಶೇ. 1.89 ರಷ್ಟಿದ್ದು, ಮರಣ ದರ ಶೇ 0.00 ಆಗಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ. 

568 ಸಕ್ರಿಯ ಪ್ರಕರಣಗಳಲ್ಲಿ 514 ಮಂದಿಯನ್ನು ಮನೆಯಲ್ಲಿ ಪ್ರತ್ಯೇಕವಾಗಿರಿಸಲಾಗಿದೆ. 54 ಸೋಂಕಿತರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಪೈಕಿ 14 ಸೋಂಕಿತರು ಐಸಿಯು ಹಾಗೂ 40 ಸೋಂಕಿತರು ಜನರಲ್ ಬೆಡ್ ನಲ್ಲಿದ್ದಾರೆ.

ಬೆಂಗಳೂರು ನಗರದಲ್ಲಿ 85 ಪ್ರಕರಣ ದಾಖಲಾಗಿದ್ದು, 414 ಸಕ್ರಿಯ ಪ್ರಕರಣಗಳಿವೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 5, ಬೀದರ್ 1, ಚಾಮರಾಜನಗರ 7, ಚಿಕ್ಕಬಳ್ಳಾಪುರ 2, ಚಿಕ್ಕಮಗಳೂರು 3, ದಕ್ಷಿಣ ಕನ್ನಡದಲ್ಲಿ 8, ಧಾರವಾಡ 2, ಗದಗ 2, ಹಾಸನ 2 , ಕಲಬರುಗಿ 1 ಹಾಗೂ ಕೋಲಾರದಲ್ಲಿ 3 ಪಾಸಿಟಿವ್ ಪ್ರಕರಣ ದೃಢಪಟ್ಟಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

SCROLL FOR NEXT