ಸಾಂದರ್ಭಿಕ ಚಿತ್ರ 
ರಾಜ್ಯ

ಶಿವಮೊಗ್ಗ: ದಲಿತ ಯುವತಿಯನ್ನು ಮದುವೆಯಾದ ವ್ಯಕ್ತಿಗೆ ಸಮಾಜದಿಂದ ಬಹಿಷ್ಕಾರ!

ಶಿವಮೊಗ್ಗ ತಾಲೂಕಿನ ಕುಮ್ಸಿ ಹೋಬಳಿಯ ಹೊರಬೈಲು ಗ್ರಾಮದಲ್ಲಿ ದಲಿತ ಯುವತಿಯನ್ನು ಮದುವೆಯಾದ ಜೋಗಿ ಸಮುದಾಯದ ವ್ಯಕ್ತಿಯ ಕುಟುಂಬಕ್ಕೆ ಅವರ ಸಮುದಾಯದ ಕೆಲ ಮುಖಂಡರು ಸಾಮಾಜಿಕ ಬಹಿಷ್ಕಾರ ಹಾಕಿದ್ದಾರೆ.

ಶಿವಮೊಗ್ಗ: ಶಿವಮೊಗ್ಗ ತಾಲೂಕಿನ ಕುಮ್ಸಿ ಹೋಬಳಿಯ ಹೊರಬೈಲು ಗ್ರಾಮದಲ್ಲಿ ದಲಿತ ಯುವತಿಯನ್ನು ಮದುವೆಯಾದ ಜೋಗಿ ಸಮುದಾಯದ ವ್ಯಕ್ತಿಯ ಕುಟುಂಬಕ್ಕೆ ಅವರ ಸಮುದಾಯದ ಕೆಲ ಮುಖಂಡರು ಸಾಮಾಜಿಕ ಬಹಿಷ್ಕಾರ ಹಾಕಿದ್ದಾರೆ.

ಮದುವೆಯ ಬಗ್ಗೆ ಅಸಮಾಧಾನಗೊಂಡ ಸಮುದಾಯದ ಮುಖಂಡರು, ತಮ್ಮ ಸಮುದಾಯದ ಜನರಿಗೆ ಆ ವ್ಯಕ್ತಿಯ ಕುಟುಂಬದೊಂದಿಗೆ ಮಾತನಾಡದಂತೆ ಕೇಳಿಕೊಂಡಿದ್ದು, ಒಂದು ವೇಳೆ ಮಾತನಾಡಿದರೆ 1,000 ರೂಪಾಯಿ ದಂಡವನ್ನು ವಿಧಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಅಲ್ಲದೆ ಆ ಬಗ್ಗೆ ಮಾಹಿತಿ ನೀಡುವವರಿಗೆ 500 ರೂಪಾಯಿ ಟಿಪ್ಸ್ ನೀಡಲು ಮುಂದಾಗಿದ್ದಾರೆ.

ಈ  ಸಂಬಂಧ ಪತಿ, ಪತ್ನಿ ದೂರು ನೀಡಿದ್ದು, ಕುಮ್ಸಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದೇ ವೇಳೆ ಅಧಿಕಾರಿಗಳ ತಂಡ ಗ್ರಾಮಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದೆ.

ಹೊರಬೈಲು ಗ್ರಾಮದಲ್ಲಿ ಸುಮಾರು 80 ಮನೆಗಳಿದ್ದು, ಅದರಲ್ಲಿ 60 ಮನೆಗಳು ಜೋಗಿ ಸಮುದಾಯಕ್ಕೆ ಸೇರಿವೆ. ಜೋಗಿ ಸಮುದಾಯದ ದಿನೇಶ್ ಮತ್ತು ಪ್ರೀತಿ ಪರಸ್ಪರ ಪ್ರೀತಿಸುತ್ತಿದ್ದರು ಮತ್ತು ಸೆಪ್ಟೆಂಬರ್ 10 ರಂದು ಮದುವೆಯಾಗಿದ್ದರು. ಸೆಪ್ಟೆಂಬರ್ 27 ರಂದು ತಮ್ಮ ವಿವಾಹವನ್ನು ನೋಂದಾಯಿಸಿಕೊಂಡಿದ್ದರು. 

ಆದಿ ಕರ್ನಾಟಕ ಸಮುದಾಯದ ಹುಡುಗಿಯನ್ನು ಮದುವೆಯಾಗಿದ್ದಕ್ಕಾಗಿ ಈಗ ಅವರ ಕುಟುಂಬವನ್ನು ಬಹಿಷ್ಕರಿಸಿದ್ದಾರೆ. ಸಭೆ ನಡೆಸುವ ಮೂಲಕ, ಕುಟುಂಬವನ್ನು ಬಹಿಷ್ಕರಿಸಲು ಗ್ರಾಮಸ್ಥರು ನಿರ್ಧರಿಸಿದರು ಮತ್ತು ಎಲ್ಲಾ ಸಂಬಂಧಗಳನ್ನು ಕಡಿದುಕೊಂಡಿದ್ದಾರೆ. ವ್ಯಕ್ತಿಯ ಕುಟುಂಬದೊಂದಿಗೆ ಮಾತನಾಡಿದವರಿಗೆ 1,000 ರೂಪಾಯಿ ದಂಡ ವಿಧಿಸಲು ಮತ್ತು ಬಹಿಷ್ಕರಿಸಿದ ಕುಟುಂಬದೊಂದಿಗೆ ಮಾತನಾಡುವವರ ಬಗ್ಗೆ ಮಾಹಿತಿ ನೀಡಿದವರಿಗೆ 500 ರೂಪಾಯಿ ಬಹುಮಾನ ನೀಡಲು ನಿರ್ಧರಿಸಿದ್ದಾರೆ.

ಡಿಎಸ್‌ಎಸ್‌ ಜಿಲ್ಲಾ ಸಂಚಾಲಕ ಹಾಲೇಶಪ್ಪ ಮಾತನಾಡಿ, ‘ಜೋಗಿ ಸಮುದಾಯದ ಕೆಲವರು ನಕಲಿ ಎಸ್‌ಸಿ ಪ್ರಮಾಣ ಪತ್ರ ಪಡೆದು ಸರ್ಕಾರದ ಸವಲತ್ತು, ಸೌಲಭ್ಯ ಪಡೆಯುತ್ತಿದ್ದಾರೆ. ಅವರು ಜೋಗಿ ಸಮುದಾಯಕ್ಕೆ ಎಸ್‌ಸಿ ಮೀಸಲಾತಿ ಪಡೆಯಲು ಮತ್ತು ಸರ್ಕಾರದ ಸವಲತ್ತುಗಳನ್ನು ಪಡೆದುಕೊಳ್ಳಲು ಬಯಸುತ್ತಾರೆ. ಆದರೆ ಎಸ್‌ಸಿ ಸಮುದಾಯದ ಹುಡುಗಿಯನ್ನು ಸ್ವೀಕರಿಸಲು ಸಿದ್ಧರಿಲ್ಲ. ಇದು ಖಂಡನೀಯ ಎಂದಿದ್ದಾರೆ.

ಕುಟುಂಬಕ್ಕೆ ಸಾಮಾಜಿಕ ನ್ಯಾಯ ಒದಗಿಸುವಂತೆ ಜಿಲ್ಲಾಡಳಿತ, ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸರ್ಕಾರಕ್ಕೆ ಡಿಎಸ್‌ಎಸ್‌ ಮುಖಂಡರು ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

SCROLL FOR NEXT