ಸಾಂಕೇತಿಕ ಚಿತ್ರ 
ರಾಜ್ಯ

ಬೆಂಗಳೂರಿನ ವರ್ತೂರಿನ ಅಪಾರ್ಟ್ ಮೆಂಟಿನಲ್ಲಿ ಬಾಲಕಿ ಸಾವಿಗೆ ಟ್ವಿಸ್ಟ್: ಸ್ವಿಮ್ಮಿಂಗ್ ಪೂಲ್ ಗೆ ಬಿದ್ದು ಮೃತ್ಯು ಎಂದು ತಂದೆಯಿಂದ ದೂರು

ವಿದ್ಯುತ್ ತಂತಿ ಸ್ಪರ್ಶಿಸಿ ಬಾಲಕಿ ಮೃತಪಟ್ಟಿದ್ದಾಳೆ ಎಂದು ಆರಂಭದಲ್ಲಿ ಆರೋಪಿಸಲಾಗಿದ್ದ ಕೇಸಿಗೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಇಂದು ಶುಕ್ರವಾರ ಬೆಳಗ್ಗೆ ಬಾಲಕಿ ಅಪಾರ್ಟ್ ಮೆಂಟಿನ ಸ್ವಿಮ್ಮಿಂಗ್ ಪೂಲ್ ಗೆ ಬಿದ್ದು ಮೃತಪಟ್ಟಿದ್ದಾಳೆ ಎಂದು ಬಾಲಕಿಯ ತಂದೆ ಪೊಲೀಸರಿಗೆ ಇಂದು ಶುಕ್ರವಾರ ದೂರು ನೀಡಿದ್ದು, ಮರಣೋತ್ತರ ಪರೀಕ್ಷೆಯ ನಂತರವಷ್ಟೇ ಸತ್ಯ ಹೊರಬರಬೇಕಿದೆ.

ಬೆಂಗಳೂರು: ವಿದ್ಯುತ್ ತಂತಿ ಸ್ಪರ್ಶಿಸಿ ಬಾಲಕಿ ಮೃತಪಟ್ಟಿದ್ದಾಳೆ ಎಂದು ಆರಂಭದಲ್ಲಿ ಆರೋಪಿಸಲಾಗಿದ್ದ ಕೇಸಿಗೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಇಂದು ಶುಕ್ರವಾರ ಬೆಳಗ್ಗೆ ಬಾಲಕಿ ಅಪಾರ್ಟ್ ಮೆಂಟಿನ ಸ್ವಿಮ್ಮಿಂಗ್ ಪೂಲ್ ಗೆ ಬಿದ್ದು ಮೃತಪಟ್ಟಿದ್ದಾಳೆ ಎಂದು ಬಾಲಕಿಯ ತಂದೆ ಪೊಲೀಸರಿಗೆ ಇಂದು ಶುಕ್ರವಾರ ದೂರು ನೀಡಿದ್ದು, ಮರಣೋತ್ತರ ಪರೀಕ್ಷೆಯ ನಂತರವಷ್ಟೇ ಸತ್ಯ ಹೊರಬರಬೇಕಿದೆ.

ನಡೆದಿರುವ ಘಟನೆಯೇನು?: ಕಳೆದ ತಿಂಗಳು ಕಾಡುಗೋಡಿಯಲ್ಲಿ ವಿದ್ಯುತ್​ ತಂತಿ ತಗುಲಿ ತಾಯಿ-ಮಗು ಸಾವಿಗೀಡಾಗಿದ್ದ ಪ್ರಕರಣ ಮಾಸುವ ಮುನ್ನವೇ ವರ್ತೂರಿನ ಪ್ರೆಸ್ಟೀಜ್ ಹೆಬಿಟೇಡ್ ಅಪಾರ್ಟ್​ಮೆಂಟ್​ನಲ್ಲಿ ವಾಸವಿದ್ದ 10 ವರ್ಷದ ಮಾನ್ಯ ಎಂಬ ಬಾಲಕಿ ವಿದ್ಯುತ್ ಸ್ಪರ್ಶದಿಂದ ಸಾವೀಗಿಡಾಗಿದ್ದಾಳೆ ಎಂದು ಹೇಳಲಾಗಿತ್ತು. 

ನಿನ್ನೆ ಸಾಯಂಕಾಲ 7.30 ರ ಸುಮಾರಿಗೆ ಬಾಲಕಿ ಮಾನ್ಯ ಅಪಾರ್ಟ್ ಮೆಂಟಿನ ಸ್ವಿಮಿಂಗ್ ಪೂಲ್ ಬಳಿ ಆಟವಾಡುತಿದ್ದಳು. ಈ ವೇಳೆ ಮಾನ್ಯ ಸ್ವಿಮಿಂಗ್ ಪೂಲ್ ಗೆ ಪ್ರಜ್ಞೆ ತಪ್ಪಿ ಬಿದ್ದಿದ್ದಾಳೆ. ಮಾಹಿತಿ ಸಿಕ್ಕಿದ ತಕ್ಷಣ ಅಪಾರ್ಟ್ ಮೆಂಟ್ ನಿವಾಸಿಗಳು ಕೂಡಲೇ ಆಸ್ಪತ್ರೆಗೆ ದಾಖಲಿಸಿದರೂ ಕೂಡ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ. ಪ್ರಕರಣ ಸಂಬಂಧ ಮೃತ ಮಾನ್ಯ ತಂದೆ ವರ್ತೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಬಾಲಕಿ ಸಾವಿಗೆ ಅಪಾರ್ಟ್ ಮೆಂಟ್ ನಿರ್ವಹಣಾ ಸಿಬ್ಬಂದಿಗಳ ಬೇಜವಾಬ್ದಾರಿ ಕಾರಣವೆಂದು ನಿವಾಸಿಗಳು ಆರೋಪ ಮಾಡಿದ್ದಾರೆ. ನಿರ್ವಹಣಾ ಸಿಬ್ಬಂದಿಗಳ ವಿರುದ್ಧ ರಾತ್ರಿಯಿಡೀ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

ಬಾಂಬೆ ಮಾದರಿಯಲ್ಲಿ ಕೊಳಗೇರಿ ಪುನಶ್ಚೇತನಕ್ಕೆ ಸಮಿತಿ ರಚನೆ: GBA ವ್ಯಾಪ್ತಿಗೆ ಆನೇಕಲ್ ಸೇರಿಸುವುದು ಕಷ್ಟ; ಡಿಕೆ ಶಿವಕುಮಾರ್

SCROLL FOR NEXT