ಸಂಗ್ರಹ ಚಿತ್ರ 
ರಾಜ್ಯ

ಹೊಸ ವರ್ಷಾಚರಣೆ: ನಮ್ಮ ಮೆಟ್ರೋ ಸಂಚಾರ ಅವಧಿ ವಿಸ್ತರಣೆ

ಹೊಸ ವರ್ಷದ ಸಂಭ್ರಮಾಚರಣೆಗೆ ಅನುಕೂಲ ಆಗುವಂತೆ ಡಿ.31ರಂದು ಮೆಟ್ರೊ ರೈಲು ಸಂಚಾರವನ್ನು ರಾತ್ರಿ 2 ಗಂಟೆ ವರೆಗೆ ವಿಸ್ತರಿಸಲಾಗಿದೆ. ಆದರೆ, ಈ ಹೆಚ್ಚುವರಿ ಅವಧಿಯಲ್ಲಿ ಎಂ.ಜಿ. ರಸ್ತೆ ನಿಲ್ದಾಣವನ್ನು ತೆರೆಯದಂತೆ ಪೊಲೀಸ್‌ ಇಲಾಖೆ ಸೂಚಿಸಿದೆ.

ಬೆಂಗಳೂರು: ಹೊಸ ವರ್ಷದ ಸಂಭ್ರಮಾಚರಣೆಗೆ ಅನುಕೂಲ ಆಗುವಂತೆ ಡಿ.31ರಂದು ಮೆಟ್ರೊ ರೈಲು ಸಂಚಾರವನ್ನು ರಾತ್ರಿ 2 ಗಂಟೆ ವರೆಗೆ ವಿಸ್ತರಿಸಲಾಗಿದೆ. ಆದರೆ, ಈ ಹೆಚ್ಚುವರಿ ಅವಧಿಯಲ್ಲಿ ಎಂ.ಜಿ. ರಸ್ತೆ ನಿಲ್ದಾಣವನ್ನು ತೆರೆಯದಂತೆ ಪೊಲೀಸ್‌ ಇಲಾಖೆ ಸೂಚಿಸಿದೆ.

ಪ್ರತಿ ದಿನ ರಾತ್ರಿ 11.30ಕ್ಕೆ ಇದ್ದ ಕೊನೆಯ ರೈಲು ಸೇವೆಯನ್ನು ಡಿ.31ರಂದು ರಾತ್ರಿ 2 ಗಂಟೆ ತನಕ ವಿಸ್ತರಿಸಲಾಗಿದೆ. ಈ ಸಂದರ್ಭದಲ್ಲಿ ಪ್ರತಿ 15 ನಿಮಿಷಕ್ಕೊಂದು ರೈಲು ಸಂಚರಿಸಲಿದೆ ಎಂದು ಬಿಎಂಆರ್‌ಸಿಎಲ್ ಮಾಹಿತಿ ನೀಡಿದೆ.

ಸುರಕ್ಷತೆಯ ದೃಷ್ಟಿಯಿಂದ ರಾತ್ರಿ 11.30ರ ನಂತರ ಎಂ.ಜಿ. ರಸ್ತೆಯ ಮೆಟ್ರೊ ನಿಲ್ದಾಣ ಪ್ರವೇಶ ನಿರ್ಬಂಧಿಸಬೇಕು ಎಂದು ಪೊಲೀಸ್‌ ಇಲಾಖೆ ಸೂಚಿಸಿರುವುದರಿಂದ ಅಂದು ಹೆಚ್ಚುವರಿ ಅವಧಿಯಲ್ಲಿ ಎಂ.ಜಿ.ರಸ್ತೆಯಿಂದ ಪ್ರಯಾಣ ಬೆಳೆಸುವ ಮೆಟ್ರೊ ಪ್ರಯಾಣಿಕರು ಟ್ರಿನಿಟಿ ಅಥವಾ ಕಬ್ಬನ್‌ ಪಾರ್ಕ್‌ ಮೆಟ್ರೊ ನಿಲ್ದಾಣಗಳಿಗೆ ತೆರಳಿ ಸಂಚಾರ ಮಾಡಬಹುದು ಎಂದು ಸೂಚಿಸಿದೆ.

ಟ್ರಿನಿಟಿ ಮತ್ತು ಕಬ್ಬನ್ ಪಾರ್ಕ್ ನಿಲ್ದಾಣಗಳಿಂದ ಪ್ರಯಾಣಿಸುವವರಿಗೆ ₹ 50 ಮೊತ್ತದ ಕಾಗದದ ಟಿಕೆಟ್ ವಿತರಿಸಲಾಗುವುದು. ಕಾಗದದ ಟಿಕೆಟ್‌ಗಳನ್ನು ಅಂದು ಮುಂಚಿತವಾಗಿಯೇ ಪಡೆಯಬೇಕು. ಮಧ್ಯರಾತ್ರಿ ಟಿಕೆಟ್‌ ವಿತರಣೆ ಇರುವುದಿಲ್ಲ. ಸ್ಮಾರ್ಟ್‌ ಕಾರ್ಡ್ ಮತ್ತು ಕ್ಯೂಆರ್‌ ಕೋಡ್ ಟಿಕೆಟ್‌ ಹೊಂದಿರುವ ಪ್ರಯಾಣಿಕರು ಎಂದಿನಂತೆ ರಿಯಾಯಿತಿ ದರದಲ್ಲಿ ಪ್ರಯಾಣಿಸಬಹುದು ಎಂದು ಬಿಎಂಆರ್‌ಸಿಎಲ್ ಅಧಿಕಾರಿಗಳು ತಿಳಿಸಿದ್ದಾರೆ.

ಹೊಸ ವರ್ಷಾಚರಣೆಯ ಸಂದರ್ಭದಲ್ಲಿ ಎಂ.ಜಿ. ರಸ್ತೆಗೆ ಹೊಂದಿಕೊಂಡಿರುವ ಬ್ರಿಗೇಡ್‌ ರಸ್ತೆ, ಚರ್ಚ್‌ ಸ್ಟ್ರೀಟ್‌ಗಳಲ್ಲಿ ಭಾರಿ ಸಂಖ್ಯೆಯಲ್ಲಿ ಜನ ಸೇರುತ್ತಾರೆ. ಪಕ್ಕದಲ್ಲೇ ಇರುವ ಮೆಟ್ರೋ ನಿಲ್ದಾಣದಲ್ಲಿ ಜನರನ್ನು ನಿಯಂತ್ರಿಸುವುದು ಕಷ್ಟವಾಗುತ್ತದೆ. ಈ ಸಮಸ್ಯೆ ತಪ್ಪಿಸಲು ಪೊಲೀಸ್‌ ಇಲಾಖೆ ಈ ಕ್ರಮ ಕೈಗೊಂಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT