ಸಂಗ್ರಹ ಚಿತ್ರ 
ರಾಜ್ಯ

ಬೆಂಗಳೂರು: ಪ್ರತ್ಯೇಕ ಅಪಘಾತದಲ್ಲಿ ಇಬ್ಬರ ಸಾವು

ನಗರದಲ್ಲಿ ಬುಧವಾರ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತಗಳಲ್ಲಿ 51 ವರ್ಷದ ಮಹಿಳೆ ಸೇರಿದಂತೆ ಇಬ್ಬರು ಸಾವನ್ನಪ್ಪಿದ್ದಾರೆ. ಹಲಸೂರು ಗೇಟ್ ಮತ್ತು ಬನಶಂಕರಿ ಸಂಚಾರಿ ಪೊಲೀಸ್ ವ್ಯಾಪ್ತಿಯಲ್ಲಿ ಪ್ರಕರಣಗಳು ದಾಖಲಾಗಿವೆ.

ಬೆಂಗಳೂರು: ನಗರದಲ್ಲಿ ಬುಧವಾರ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತಗಳಲ್ಲಿ 51 ವರ್ಷದ ಮಹಿಳೆ ಸೇರಿದಂತೆ ಇಬ್ಬರು ಸಾವನ್ನಪ್ಪಿದ್ದಾರೆ. ಹಲಸೂರು ಗೇಟ್ ಮತ್ತು ಬನಶಂಕರಿ ಸಂಚಾರಿ ಪೊಲೀಸ್ ವ್ಯಾಪ್ತಿಯಲ್ಲಿ ಪ್ರಕರಣಗಳು ದಾಖಲಾಗಿವೆ.

ಗುರುವಾರ ಬೆಳಗ್ಗೆ ಹಲಸುರುಗೇಟ್ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯ ಸುಬ್ಬಯ್ಯ ವೃತ್ತದ ಬಳಿ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ 51 ವರ್ಷದ ಪುಷ್ಪಾ ಎಂಬ ಮಹಿಳೆ ಸಾವನ್ನಪ್ಪಿದ್ದಾರೆ.

ಕಬ್ಬನ್ ಪೇಟೆ ನಿವಾಸಿಯಾಗಿರುವ ಮಹಿಳೆ, ಸಮೀಪದ ಬೇಕರಿಗೆ ಹೋಗುತ್ತಿದ್ದ ವೇಳೆ ದುರ್ಘಟನೆ ನಡೆದಿದೆ. ಘಟನೆ ಸಂಬಂಧ ಬಸ್ ಚಾಲಕ ನಾಗರಾಜ್ ನನ್ನು ಬಂಧಿಸಲಾಗಿದೆ.

ಮತ್ತೊಂದು ಘಟನೆಯಲ್ಲಿ ಕಸದ ಲರಿಗೆ ಡಿಕ್ಕಿ ಹೊಡೆದ ಪರಿಣಾಮ ಬನಶಂಕರಿಯ ಯಾರಬ್ ನಗರದ ನಿವಾಸಿ 42 ವರ್ಷದ ಮುದ್ಗರ್ ಎಂಬುವವರು ಸಾವನ್ನಪ್ಪಿದ್ದಾರೆ.

ವೃತ್ತಿಯಲ್ಲಿ ವೆಲ್ಡರ್ ಆಗಿರುವ ಮುದ್ಗರ್ ಬುಧವಾರ ಮಧ್ಯಾಹ್ನ 1.45ರ ಸುಮಾರಿಗೆ ಬೇಂದ್ರೆ ವೃತ್ತದ ಬಳಿ ಯಾರಬ್ ನಗರ ಮುಖ್ಯರಸ್ತೆಯಲ್ಲಿ ಸ್ಕೂಟರ್‌ನಲ್ಲಿ ಹೋಗುತ್ತಿದ್ದರು. ಈ ವೇಳೆ ಲಾರಿ ಚಾಲಕ ಅತಿವೇಗವಾಗಿ ವಾಹನ ಚಲಾಯಿಸಿಕೊಂಡು ಬಂದಿದ್ದು, ಸ್ಕೂಟರ್'ಗೆ ಡಿಕ್ಕಿ ಹೊಡೆದಿದ್ದಾನೆ. ಈ ವೇಳೆ ಕೆಳಗೆ ಬಿದ್ದ ಮುದ್ಗರ್ ಅವರ ಮೇಲೆ ಲಾರಿ ಹರಿದಿದ್ದು, ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಈ ಸಂಬಂಧ ಬನಶಂಕರಿ ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕೋಲ್ಕತ್ತಾ: I-PAC ಮೇಲಿನ ED ದಾಳಿ ವಿರುದ್ಧ ಬೀದಿಗಿಳಿದ ಪಶ್ಚಿಮ ಬಂಗಾಳ ಸಿಎಂ ಮಮತಾ

ಬೆಂಗಳೂರು: ಆಡಳಿತ ಮಂಡಳಿ ಕಿರುಕುಳ ಆರೋಪ; ಮನನೊಂದು ಡೆಂಟಲ್ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ

ಪ್ರಹ್ಲಾದ್ ಜೋಶಿ ಮೊದಲು ಚುನಾವಣಾ ಬಾಂಡ್‌, PM ಕೇರ್ಸ್‌ ಬಗ್ಗೆ ಉತ್ತರಿಸಲಿ: ದಿನೇಶ್ ಗುಂಡೂರಾವ್

Iran Protests ನಡುವೆ ರೆಜಾ ಪಹ್ಲವಿ ಸದ್ದು: ಜಾತ್ಯತೀತ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆಗೆ ಕರೆ ನೀಡುತ್ತಿರುವ ಈ ಪ್ರಭಾವಿ ವ್ಯಕ್ತಿ ಯಾರು?

I-PAC ದಾಳಿಗೆ ಸಿಎಂ ಮಮತಾ ಅಡ್ಡಿ: ಸಿಬಿಐ ತನಿಖೆ ಕೋರಿ ಕಲ್ಕತ್ತಾ ಹೈಕೋರ್ಟ್‌ಗೆ ED ಅರ್ಜಿ

SCROLL FOR NEXT