ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಮತ್ತಿತರರು 
ರಾಜ್ಯ

ತಿಮ್ಮಾಪೂರ ಏತ ನೀರಾವರಿ ಯೋಜನೆ: ಲೋಕಾರ್ಪಣೆಗೊಳಿಸಿದ ಸಿಎಂ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ತಿಮ್ಮಾಪೂರ ಏತ ನೀರಾವರಿ ಯೋಜನೆ ಲೋಕಾರ್ಪಣೆ ಮಾಡಿ, ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆಯನ್ನು ನೆರವೇರಿಸಿದರು. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತಿತರರು ಪಾಲ್ಗೊಂಡರು.

ಸಿಂಧನೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ತಿಮ್ಮಾಪೂರ ಏತ ನೀರಾವರಿ ಯೋಜನೆ ಲೋಕಾರ್ಪಣೆ ಮಾಡಿ, ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆಯನ್ನು ನೆರವೇರಿಸಿದರು. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತಿತರರು ಪಾಲ್ಗೊಂಡರು.

ನಂತರ ಜನತೆಯನ್ನುದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ, ರೂ. 109 ಕೋಟಿ ವೆಚ್ಚದ ಈ ಏತ ನೀರಾವರಿ ಯೋಜನೆಯಿಂದ ಸಿಂಧನೂರು ತಾಲೂಕಿನ ಸುಲ್ತಾನಪುರ, ರಾಮತ್ನಾಳ, ದಿಬ್ಬನಖೇಡ, ತುರಕಟ್ಟಿ, ಕನಕರೆಡ್ಡಿ ಸೇರಿದಂತೆ 24 ಗ್ರಾಮಗಳ ಅಚ್ಚುಕಟ್ಟು ಪ್ರದೇಶಗಳಿಗೆ ನೀರು ದೊರೆಯಲಿದೆ ಎಂದು ತಿಳಿಸಿದರು.

 ಕನ್ನಡಿಗರು ಪ್ರತೀ ವರ್ಷ ಕೇಂದ್ರಕ್ಕೆ 4 ಲಕ್ಷ ಕೋಟಿ ತೆರಿಗೆ ರೂಪದಲ್ಲಿ ಹಣ ಕೊಡ್ತೀವಿ. ಆದರೆ ಕೇಂದ್ರ ನಮಗೆ ವಾಪಾಸ್ ಕೊಡುವುದು 52 ಸಾವಿರ ಕೋಟಿ ಮಾತ್ರ. ಬರಗಾಲ ಬಂದಿದ್ದರೂ ಕೇಂದ್ರದಿಂದ ನಯಾಪೈಸೆ ಬಂದಿಲ್ಲ. ಇದನ್ನು ರಾಜ್ಯದ ಜನತೆ ಬಿಜೆಪಿ ಸಂಸದರಿಗೆ ಪ್ರಶ್ನಿಸಬೇಕು ಎಂದರು. 

ನಮ್ಮ ಗ್ಯಾರಂಟಿ ಯೋಜನೆಗಳಿಂದಾಗಿ ಬರಗಾಲದಲ್ಲೂ ರಾಜ್ಯದ ಬಡವರು ಸಂಕಷ್ಟದಿಂದ ಪಾರಾಗಿದ್ದಾರೆ. ನಾವು ಐದೂ ಗ್ಯಾರಂಟಿಗಳನ್ನು ಜಾರಿ ಮಾಡಿದ್ದು ಬಿಜೆಪಿಯವರಿಗೆ ನುಂಗಲಾರದ ತುತ್ತಾಗಿದೆ. ಮೋದಿ ಅವರು ರಾಜ್ಯ ಆರ್ಥಿಕವಾಗಿ ದಿವಾಳಿಯಾಗುತ್ತದೆ ಎಂದು ಭಾಷಣ ಮಾಡಿದ್ದರು. ಆದರೆ ಅವರ ಮಾತು ಮತ್ತೊಮ್ಮೆ ಸುಳ್ಳಾಗಿದೆ ಎಂದರು.

ಶಕ್ತಿ ಯೋಜನೆಯಡಿ 120 ಕೋಟಿ ಬಾರಿ ಮಹಿಳೆಯರು ಉಚಿತವಾಗಿ ಬಸ್ ನಲ್ಲಿ ಪ್ರಯಾಣ ಮಾಡಿದ್ದಾರೆ. 1.16 ಕೋಟಿ ಮಹಿಳೆಯರ ಖಾತೆಗೆ ತಿಂಗಳಿಗೆ 2 ಸಾವಿರ ಜಮೆ ಮಾಡಲಾಗುತ್ತಿದೆ. ಹೀಗೆ ಪ್ರತಿ ಕುಟುಂಬಕ್ಕೆ ತಿಂಗಳಿಗೆ 5-6 ಸಾವಿರ ರೂಪಾಯಿ ಉಳಿತಾಯ ಆಗುತ್ತಿದೆ ಎಂದು ತಿಳಿಸಿದರು. 

ಕೇಂದ್ರ ಸರ್ಕಾರವು ರಾಜ್ಯದ ಜನರ ನೆರವಿಗೆ ಬರದಿದ್ದರೂ ನಾವು ರಾಜ್ಯದ ಜನರ ಕೈ ಬಿಡುವುದಿಲ್ಲ. ಸಿಂಧನೂರಿಗೆ ಇದುವರೆಗೂ ಶೇ.80 ರಷ್ಟು ನೀರಾವರಿ ಸವಲತ್ತು ಸಿಕ್ಕಿದೆ. ಶಾಸಕರು ನೂರಕ್ಕೆ ನೂರರಷ್ಟು ನೀರಾವರಿ ಮಾಡಲು ಬದ್ಧರಾಗಿದ್ದಾರೆ. ನಮ್ಮ ಸರ್ಕಾರ ಇದಕ್ಕೆ ಸಂಪೂರ್ಣ ಸಹಕಾರ ನೀಡಿ ರೈತರ ಬದುಕನ್ನು ಉನ್ನತೀಕರಿಸಲಿದೆ. ನವಿಲೆ ಬ್ಯಾಲೆನ್ಸಿಂಗ್ ಅಣೆಕಟ್ಟು ನಿರ್ಮಿಸಲು ನಮ್ಮ ಸರ್ಕಾರ ಸಿದ್ಧವಿದೆ ಎಂದು ತಿಳಿಸಿದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT