ಗೌತಮ್ ಕಲಾಲ್ 
ರಾಜ್ಯ

ಬಂಟ್ವಾಳ: ರಸ್ತೆ ಅಪಘಾತದಲ್ಲಿ ರಂಗಭೂಮಿ ಕಲಾವಿದ ಗೌತಮ್ ಕಲಾಲ್ ಸಾವು

ಬಂಟ್ವಾಳ ಸಮೀಪದ ವಗ್ಗದಲ್ಲಿ ಭಾನುವಾರ ಮುಂಜಾನೆ ನಡೆದ ರಸ್ತೆ ಅಪಘಾತದಲ್ಲಿ ರಂಗಭೂಮಿ ಕಲಾವಿದ ಗೌತಮ್ ಕುಲಾಲ್ ವಗ್ಗ (28) ಮೃತಪಟ್ಟಿದ್ದಾರೆ.

ಬಂಟ್ವಾಳ: ಬಂಟ್ವಾಳ ಸಮೀಪದ ವಗ್ಗದಲ್ಲಿ ಭಾನುವಾರ ಮುಂಜಾನೆ ನಡೆದ ರಸ್ತೆ ಅಪಘಾತದಲ್ಲಿ ರಂಗಭೂಮಿ ಕಲಾವಿದ ಗೌತಮ್ ಕುಲಾಲ್ ವಗ್ಗ (28) ಮೃತಪಟ್ಟಿದ್ದಾರೆ.

ಬಂಟ್ವಾಳ ತಾಲ್ಲೂಕಿನ ದೇವಸ್ಯಪಡೂರು ಗ್ರಾಮದ ಮರಾಯಿದೊಟ್ಟು, ನೂಜೆ ಗ್ರಾಮದ ಗೌತಮ್ ಅವರು ಪಿಂಗಾರ ಕಲಾವಿದೆರ್ ಬೆದ್ರ ರಂಗಭೂಮಿ ತಂಡದ‌ ಸದಸ್ಯರಾಗಿದ್ದರು.

ಈ ತಂಡವು ಬೆಳುವಾಯಿಯ ಕರಿಯನಂಗಡಿಯಲ್ಲಿ ನಿನ್ನೆ ರಾತ್ರಿ 'ಕದಂಬ' ನಾಟಕವನ್ನು ಪ್ರದರ್ಶಿಸಿತ್ತು. ಅದರಲ್ಲಿ ಅಭಿನಯಿಸಿದ್ದ ಗೌತಮ್ ಮನೆಗೆ ಮರಳುತ್ತಿದ್ದರು.

ಅವರ ಬೈಕ್ ಮುಂಜಾನೆ ವೇಳೆ ವಗ್ಗದಲ್ಲಿ ಮರಕ್ಕೆ ಡಿಕ್ಕಿ ಹೊಡೆದಿತ್ತು. ಗಾಯಗೊಂಡು ಬಿದ್ದಿದ್ದ ಅವರನ್ನು ಗಮನಿಸಿದ ಸ್ಥಳೀಯರು ಆಸ್ಪತ್ರೆಗೆ ಕರೆದೊಯ್ದರು. ಅದಾಗಲೇ ಅವರು ಮೃತಪಟ್ಟಿದ್ದರು ಎಂದು ತಿಳಿದು ಬಂದಿದೆ.

ಅವಿವಾಹಿತರಾಗಿದ್ದ ಗೌತಮ್ ಬಿ.ಸಿ.ರೋಡ್ ನ ಸಂಸ್ಥೆಯೊಂದರಲ್ಲಿ ಉದ್ಯೋಗಿಯಾಗಿದ್ದರು. ಮೃತರಿಗೆ ತಾಯಿ ಸಹೋದರ ಮತ್ತು ಸಹೋದರಿ ಇದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

Belagavi: ಲವರ್ ಜೊತೆ ಮಗಳು ಪರಾರಿ, ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು, Video!

ಅಧಿಕೃತವಾಗಿ 'ಹೊಸ ಗರ್ಲ್‌ ಫ್ರೆಂಡ್‌' ಪರಿಚಯಿಸಿದ ಹಾರ್ದಿಕ್ ಪಾಂಡ್ಯ! Video

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

SCROLL FOR NEXT