ಸಂಗ್ರಹ ಚಿತ್ರ 
ರಾಜ್ಯ

ರಾಜ್ಯದಲ್ಲಿ ಕೋವಿಡ್ ಹೆಚ್ಚಳ: ಸೋಂಕಿತರ ಚಿಕಿತ್ಸೆಗೆ ಹಾಸಿಗೆ ಕಾಯ್ದಿರಿಸುವಂತೆ ಜಿಲ್ಲಾಸ್ಪತ್ರೆ, ವೈದ್ಯಕೀಯ ಕಾಲೇಜುಗಳಿಗೆ ಸರ್ಕಾರ ಸೂಚನೆ

ದಿನ ಕಳೆಯುತ್ತಿದ್ದಂತೆ ರಾಜ್ಯದಲ್ಲಿ ಕೋವಿಡ್ ಸೋಂಕು ಹೆಚ್ಚಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಜಿಲ್ಲಾಸ್ಪತ್ರೆಗಳು ಸೇರಿದಂತೆ ವೈದ್ಯಕೀಯ ಕಾಲೇಜುಗಳಲ್ಲಿ ಕನಿಷ್ಟ 10 ಸಾಮಾನ್ಯ ಹಾಸಿಗೆಗಳು ಮತ್ತು 5 ಐಸಿಯು ಹಾಸಿಗೆಗಳನ್ನು ಪ್ರತ್ಯೇಕವಾಗಿ ಕೋವಿಡ್-19 ಸೋಂಕಿತರಿಗಾಗಿ ಕಾಯ್ದಿರಿಸಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸುತ್ತೋಲೆ ಹೊರಡಿಸಿದೆ

ಬೆಂಗಳೂರು: ದಿನ ಕಳೆಯುತ್ತಿದ್ದಂತೆ ರಾಜ್ಯದಲ್ಲಿ ಕೋವಿಡ್ ಸೋಂಕು ಹೆಚ್ಚಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಜಿಲ್ಲಾಸ್ಪತ್ರೆಗಳು ಸೇರಿದಂತೆ ವೈದ್ಯಕೀಯ ಕಾಲೇಜುಗಳಲ್ಲಿ ಕನಿಷ್ಟ 10 ಸಾಮಾನ್ಯ ಹಾಸಿಗೆಗಳು ಮತ್ತು 5 ಐಸಿಯು ಹಾಸಿಗೆಗಳನ್ನು ಪ್ರತ್ಯೇಕವಾಗಿ ಕೋವಿಡ್-19 ಸೋಂಕಿತರಿಗಾಗಿ ಕಾಯ್ದಿರಿಸಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸುತ್ತೋಲೆ ಹೊರಡಿಸಿದೆ.

ಈ ಸಂಬಂಧ ಆರೋಗ್ಯ ಇಲಾಖೆ ಪ್ರಧಾನ ಕರ್ಯದರ್ಶಿ ಟಿ.ಕೆ. ಅನಿಲ್ ಕುಮಾರ್ ಸುತ್ತೋಲೆ ಹೊರಡಿಸಿದ್ದು, ಸೋಂಕು ಲಕ್ಷಣ ಹೊಂದಿರುವವರು ಆಸ್ಪತ್ರೆಗೆ ಬಂದಾಗ ದಾಖಲಿಸಿಕೊಂಡು ಚಿಕಿತ್ಸೆ ನೀಡುವ ಅಗತ್ಯವಿದೆ. ಹಾಗಾಗಿ ಕೋವಿಡ್ ಚಿಕಿತ್ಸೆಗಾಗಿ ಪ್ರತ್ಯೇಕ ಹಾಸಿಗೆಗಳನ್ನು ಕಾಯ್ದಿರಿಸುವಂತೆ ತಿಳಿಸಿದ್ದಾರೆ.

ರಾಜ್ಯ ಸಚಿವ ಸಂಪುಟ ಉಪಸಮಿತಿ (ರಾಜ್ಯ ಕೋವಿಡ್ ಸಾಂಕ್ರಾಮಿಕ ರೋಗ ನಿಯಂತ್ರಣ) ಸಭೆ ನಿರ್ದೇಶನದಂತೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯ ಎಚ್ – ಬ್ಲಾಕ್, ಕೆ.ಸಿ.ಜನರಲ್ ಆಸ್ಪತ್ರೆ, ಜಯನಗರ ಸಾರ್ವಜನಿಕ ಆಸ್ಪತ್ರೆ, ಸರ್ ಸಿ.ವಿ.ರಾಮನ್ ಸಾರ್ವಜನಿಕ ಆಸ್ಪತ್ರೆ ಹಾಗೂ ರಾಜೀವ್ ಗಾಂಧಿ ಎದೆರೋಗಗಳ ಸಂಸ್ಥೆಯಲ್ಲಿ ಕೋವಿಡ್ ವಾರ್ಡ್‌ಗಳನ್ನು ಕಾಯ್ದಿರಿಸಲು ಸೂಚಿಸಿದ್ದಾರೆ. ಅದೇ ರೀತಿ ರಾಜ್ಯದ ಎಲ್ಲಾ ಜಿಲ್ಲಾ ಆಸ್ಪತ್ರೆಗಳಲ್ಲಿ (ವೈದ್ಯಕೀಯ ಕಾಲೇಜುಗಳು ಸೇರಿದಂತೆ) ಕನಿಷ್ಠ 10 ಸಾಮಾನ್ಯ ಹಾಸಿಗೆಗಳು ಹಾಗೂ ತುರ್ತು ನಿಗಾ ಘಟಕದಲ್ಲಿ 5 (ಐಸಿಯು) ಹಾಸಿಗೆಗಳನ್ನು ಪ್ರತ್ಯೇಕವಾಗಿ ಕೋವಿಡ್ ಸೋಂಕಿತರ ಚಿಕಿತ್ಸೆಗಾಗಿ ಕಾಯ್ದಿರಿಸಲು ಸೂಚನೆ ನೀಡಿದ್ದಾರೆ.

ರಾಜ್ಯದಲ್ಲಿ ಒಟ್ಟು ಪಾಸಿಟಿವ್ ಪ್ರಕರಣಗಳ ಸಂಖ್ಯೆ 200ರ ಗಡಿ ದಾಟಿದೆ. ರಾಜ್ಯದಲ್ಲಿ ಶನಿವಾರ ಒಂದೇ ದಿನ 201 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಒಂದು ಸಾವು ವರದಿಯಾಗಿದೆ. 2 ಡೋಸ್ ಲಸಿಕೆ ಪಡೆದಿದ್ದ ಮೈಸೂರಿನ 74 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ. ವೃದ್ಧ ವ್ಯಕ್ತಿಯಲ್ಲಿ ಅಧಿಕ ರಕ್ತದೊತ್ತಡ, ಶ್ವಾಸಕೋಶದ ಸಮಸ್ಯೆಗಳಿದ್ದವು ಎಂದು ವರದಿಗಳು ತಿಳಿಸಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

BMTC ಬಸ್ ಚಾಲಕನಿಗೆ ಫಿಡ್ಸ್, ಚಿನ್ನಸ್ವಾಮಿ ಕ್ರೀಡಾಂಗಣ ರಸ್ತೆಯಲ್ಲಿ ಸರಣಿ ಅಪಘಾತ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

SCROLL FOR NEXT