ವಿಶ್ವಸಂಸ್ಥೆ ಸಾಮಾನ್ಯ ಸಭೆ ಅಧ್ಯಕ್ಷ ಕೊರೊಸಿ 
ರಾಜ್ಯ

ಜಾಗತಿಕ ನಾಯಕರ ಗಮನ ಸೆಳೆದ ಕೆಸಿ ವ್ಯಾಲಿ ಯೋಜನೆ: ಸಿದ್ದರಾಮಯ್ಯ ಹರ್ಷ

ತ್ಯಾಜ್ಯ ನೀರನ್ನ ಸಂಸ್ಕರಿಸಿ ಕೋಲಾರದ ಕರೆಗಳನ್ನ ತುಂಬಿಸುವ ಮಹತ್ವದ ನೀರಾವರಿ ಯೋಜನೆ ಕೆಸಿ ವ್ಯಾಲಿ (ಕೋರಮಂಗಲ-ಚಲ್ಲಘಟ್ಟ  ಏತ ನೀರಾವರಿ ಯೋಜನೆ) ಇದೀಗ ಜಾಗತಿಕ ನಾಯಕರ ಗಮನ ಸೆಳೆದಿದೆ.

ಬೆಂಗಳೂರು: ತ್ಯಾಜ್ಯ ನೀರನ್ನ ಸಂಸ್ಕರಿಸಿ ಕೋಲಾರದ ಕರೆಗಳನ್ನ ತುಂಬಿಸುವ ಮಹತ್ವದ ನೀರಾವರಿ ಯೋಜನೆ ಕೆಸಿ ವ್ಯಾಲಿ (ಕೋರಮಂಗಲ-ಚಲ್ಲಘಟ್ಟ  ಏತ ನೀರಾವರಿ ಯೋಜನೆ) ಇದೀಗ ಜಾಗತಿಕ ನಾಯಕರ ಗಮನ ಸೆಳೆದಿದೆ.

ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಅನುಷ್ಠಾನಗೊಂಡ ಈ ಯೋಜನೆಯಿಂದ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿನ 191 ಕೆರೆಗಳನ್ನು ತುಂಬಿಸಲು ನೀರು ಸರಬರಾಜು ಮಾಡಲಾಗುತ್ತಿದೆ.

ಈ ಯೋಜನೆ ದೇಶ, ವಿದೇಶದ ನಾಯಕರ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿದ್ದು, ವಿಶ್ವಸಂಸ್ಥೆ ಸಾಮಾನ್ಯ ಸಭೆ ಅಧ್ಯಕ್ಷ ಚಾಬ ಕೊರೊಸಿ, ಟ್ವೀಟ್ ಮೂಲಕ ಯೋಜನೆಯನ್ನು ಮುಕ್ತ ಕಂಠದಿಂದ ಶ್ಲಾಘಿಸಿದ್ದಾರೆ. ನಾಲ್ಕು ವರ್ಷಗಳ ಹಿಂದೆ ಇದು ಒಣ ವ್ಯರ್ಥ ಪ್ರದೇಶವಾಗಿತ್ತು. ಇದೀಗ ಸಂಸ್ಕರಿಸಿದ ವ್ಯರ್ಥ ನೀರಿನಿಂದ ತೆಂಗಿನ ಕಾಯಿ ಬೆಳೆಯುತ್ತಿದ್ದು, ನಾನು ಎಂಜಾಯ್ ಮಾಡುತ್ತಿದ್ದು, ಈ ಯಶಸ್ಸಿನ ಹಿಂದಿರುವ ಪ್ರತಿಯೊಬ್ಬರನ್ನು ಅಭಿನಂದಿಸುವುದಾಗಿ ಟ್ವೀಟರ್ ನಲ್ಲಿ ಬರೆದುಕೊಂಡಿದ್ದಾರೆ.

ಈ ಟ್ವೀಟ್ ಹಂಚಿಕೊಂಡಿರುವ ಸಿದ್ದರಾಮಯ್ಯ, ಕಾಂಗ್ರೆಸ್ ಸರ್ಕಾರದ ಮಹತ್ವಕಾಂಕ್ಷೆಯ ಕೆಸಿ ವ್ಯಾಲಿ ಯೋಜನೆ ತ್ಯಾಜ್ಯ ನೀರಿನ ಮರು ಬಳಕೆಯಲ್ಲಷ್ಟೇ ಇತಿಹಾಸ ಸೃಷ್ಟಿಸಿಲ್ಲ, ರೈತರ ಬದುಕಲ್ಲಿ ಬದಲಾವಣೆ ಮೂಡಿಸಿ ಜಾಗತಿಕ ನಾಯಕರ ಗಮನ ಸೆಳೆದಿದೆ ಎಂಬುದಕ್ಕೆ ವಿಶ್ವ ಸಂಸ್ಥೆ ಸಾಮಾನ್ಯ ಸಭೆ ಅಧ್ಯಕ್ಷರ ಮಾತುಗಳು ಸಾಕ್ಷಿಯಾಗಿವೆ. ಮುಖ್ಯಮಂತ್ರಿಯಾಗಿ ಯೋಜನೆ ಜಾರಿ ಮಾಡಿದ ನನಗಿದು ಪ್ರಶಸ್ತಿ, ಸನ್ಮಾನಗಳಿಗಿಂತಲೂ ದೊಡ್ಡದು ಎಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ; Indian Army ಹೆಲಿಕಾಪ್ಟರ್ ರೋಚಕ ಕಾರ್ಯಾಚರಣೆ! Video

ಡಿ ಕೆ ಶಿವಕುಮಾರ್ ಹಿಂದೂ ಜನರ ಭಾವನೆಗಳಿಗೆ ನೋವುಂಟುಮಾಡಿದ್ದು ಕ್ಷಮೆಯಾಚಿಸಬೇಕು: ಶೋಭಾ ಕರಂದ್ಲಾಜೆ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

SCROLL FOR NEXT