ಪ್ರಿಯಾಂನ್ಷಿ ತ್ರಿಪಾಠಿ 
ರಾಜ್ಯ

ಬೆಂಗಳೂರು: ಎಂಎಸ್ ರಾಮಯ್ಯ ಆಸ್ಪತ್ರೆಯ ದಂತ ವೈದ್ಯೆ ಆತ್ಮಹತ್ಯೆಗೆ ಶರಣು!

ನಗರದ ಎಂಎಸ್ ರಾಮಯ್ಯ ಆಸ್ಪತ್ರೆಯಲ್ಲಿ ದಂತ ವೈದ್ಯೆಯಾಗಿದ್ದ ಪ್ರಿಯಾಂನ್ಷಿ ತ್ರಿಪಾಠಿ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಬೆಂಗಳೂರು: ನಗರದ ಎಂಎಸ್ ರಾಮಯ್ಯ ಆಸ್ಪತ್ರೆಯಲ್ಲಿ ದಂತ ವೈದ್ಯೆಯಾಗಿದ್ದ ಪ್ರಿಯಾಂನ್ಷಿ ತ್ರಿಪಾಠಿ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಉತ್ತರಪ್ರದೇಶದ ಲಖನೌ ಮೂಲದ ಪ್ರಿಯಾಂನ್ಷಿ 25ರಂದು ಬೆಂಗಳೂರಿನ ಸಂಜಯನಗರದಲ್ಲಿ ಆತ್ಮಹತ್ಯೆ ಮಾಡಿದ್ದಾರೆ. ಪ್ರಿಯಾಂನ್ಷಿ ತ್ರಿಪಾಠಿ ವೈದ್ಯ ಸುಮಿತ್ ಎಂಬಾತನನ್ನು ಪ್ರೀತಿಸುತ್ತಿದ್ದು ಅದನ್ನು ಪ್ರಿಯಕರನ ಮುಂದೆ ಹೇಳಿಕೊಂಡಿದ್ದಾಳೆ. ಇದಕ್ಕೆ ಸುಮಿತ್ ನಿರಾಕರಿಸಿದ್ದು ಈ ಹಿನ್ನೆಲೆಯಲ್ಲಿ ಪ್ರಿಯಾಂನ್ಷಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ.

ಈ ಸಂಬಂಧ ಸಂಜಯ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಿಯಾಂನ್ಷಿ ತಂದೆ ದೂರು ದಾಖಲಿಸಿದ್ದಾರೆ. ಈ ದೂರಿನ ಹಿನ್ನೆಲೆಯಲ್ಲಿ ಐಪಿಸಿ ಸೆಕ್ಷನ್ 306 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರೆಸಿದ್ದಾರೆ. ನನ್ನ ಮಗಳಿಗೆ ಸುಮಿತ್ ಮದ್ಯಪಾನ ಮಾಡುವಂತೆ, ಸಿಗರೇಟ್ ಸೇದುವಂತೆ ಒತ್ತಾಯಿಸುತ್ತಾ ಹಿಂಸೆ ಕೊಡುತ್ತಿದ್ದನು. ಇದರ ಜೊತೆಗೆ ಹಣಕ್ಕಾಗಿ ಒತ್ತಾಯಿಸಿದ್ದನು. ಈ ವಿಷಯವನ್ನು ಮಗಳು ಹೇಳಿದಾಗ ನಾನು ಆತನಿಗೆ ಕರೆ ಮಾಡಿ ತೊಂದರೆ ಕೊಂಡದಂತೆ ಮನವಿ ಮಾಡಿದ್ದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಆದರೆ ಈ ಬಗ್ಗೆ ತನಿಖೆಕೈಗೊಂಡಿದ್ದ ಪೊಲೀಸರಿಗೆ ಕೆಲ ಮಾಹಿತಿ ಸಿಕ್ಕಿದೆ. ಅದರಂತೆ ಯುವತಿಯೇ ಆತನನ್ನ ಪ್ರೀತಿಸುತ್ತಿದ್ದು ಆತ ಪ್ರೀತಿ ನಿರಾಕರಿಸಿದ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಬಳಿಕ ದೂರು ವಾಪಸ್ ಪಡೆಯುವುದಾಗಿ ಪ್ರಿಯಾಂನ್ಷಿ ತಂದೆ ಕೇಳಿದ್ದಾರೆ. ಆದರೆ ಪ್ರಕರಣದ ತನಿಖೆ ಹಿನ್ನಲೆ ಎಫ್​ಐಆರ್ ದಾಖಲಿಸಿದ್ದ ಕಾರಣ ಪೊಲೀಸರು ಯುವತಿ ಪ್ರೇಮವೈಫಲ್ಯ ಹಿನ್ನಲೆ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ವರದಿ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT