ಬಿಜೆಪಿ, ಹಿಂದೂ ಜಾಗರಣ ವೇದಿಕೆಯಿಂದ ಪ್ರತಿಭಟನೆ 
ರಾಜ್ಯ

ಕೊಡಗು: ಗಡಿಪಾರು ನೋಟಿಸ್ ಹಿಂಪಡೆಯುವಂತೆ ಆಗ್ರಹಿಸಿ ಬಿಜೆಪಿ, ಹಿಂದೂ ಜಾಗರಣ ವೇದಿಕೆಯಿಂದ ಪ್ರತಿಭಟನೆ

ಕೊಡಗಿನ ಇಬ್ಬರು ಹಿಂದುತ್ವವಾದಿಗಳಿಗೆ ನೀಡಿರುವ ಗಡಿಪಾರು ನೋಟಿಸ್ ಹಿಂಪಡೆಯಬೇಕು ಎಂದು ಒತ್ತಾಯಿಸಿ ಹಿಂದೂ ಜಾಗರಣ ವೇದಿಕೆ ಹಾಗೂ ಬಿಜೆಪಿಯ ಕೆಲವು ಸದಸ್ಯರು ಮಡಿಕೇರಿ ಜಿಲ್ಲಾಧಿಕಾರಿ ಕಚೇರಿ ಎದುರು ಗುರುವಾರ ಪ್ರತಿಭಟನೆ ನಡೆಸಿದರು. 

ಮಡಿಕೇರಿ: ಕೊಡಗಿನ ಇಬ್ಬರು ಹಿಂದುತ್ವವಾದಿಗಳಿಗೆ ನೀಡಿರುವ ಗಡಿಪಾರು ನೋಟಿಸ್ ಹಿಂಪಡೆಯಬೇಕು ಎಂದು ಒತ್ತಾಯಿಸಿ ಹಿಂದೂ ಜಾಗರಣ ವೇದಿಕೆ ಹಾಗೂ ಬಿಜೆಪಿಯ ಕೆಲವು ಸದಸ್ಯರು ಮಡಿಕೇರಿ ಜಿಲ್ಲಾಧಿಕಾರಿ ಕಚೇರಿ ಎದುರು ಗುರುವಾರ ಪ್ರತಿಭಟನೆ ನಡೆಸಿದರು. 

"ಹಿಂದೂ ಪರ ಕಾರ್ಯಕರ್ತರನ್ನು ಪೊಲೀಸರು ಅನಗತ್ಯವಾಗಿ ಟಾರ್ಗೆಟ್ ಮಾಡುತ್ತಿದ್ದಾರೆ" ಎಂದು ಆರೋಪಿಸಿದ ಪ್ರತಿಭಟನಾಕಾರರು, ಜಿಲ್ಲಾಡಳಿತ ಹಾಗೂ ಜಿಲ್ಲಾ ಪೊಲೀಸರ ವಿರುದ್ಧ ಘೋಷಣೆ ಕೂಗಿದರು. 

ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಹಿಂದೂ ಜಾಗರಣ ವೇದಿಕೆ ಜಿಲ್ಲಾ ಸಂಚಾಲಕ ಕುಕ್ಕೇರ ಅಜಿತ್, “ಹಿಂದುತ್ವವಾದಿಗಳಾದ ವಿಜಯ್ ಕುಮಾರ್ ಮತ್ತು ಕವನ್ ಕಾವೇರಪ್ಪ ಇಬ್ಬರೂ ಧರ್ಮ ಮತ್ತು ರಾಷ್ಟ್ರದ ರಕ್ಷಣೆಗಾಗಿ ಕೆಲಸ ಮಾಡುತ್ತಿದ್ದಾರೆ. ಗೋಹತ್ಯೆ ಮಾಡುವವರು ಮತ್ತು ದೇಶವಿರೋಧಿಗಳು ಸೇರಿದಂತೆ ಇತರ ಕಾನೂನು ಉಲ್ಲಂಘಿಸುವವರು ಪೊಲೀಸರಿಗೆ ಕಾಣಿಸುತ್ತಿಲ್ಲ. ಪೊಲೀಸರ ಈ ಬೆದರಿಕೆಗಳಿಗೆ ನಾವು ಹೆದರುವುದಿಲ್ಲ ಎಂದರು.

ಹಿಂದೂಪರ ಕಾರ್ಯಕರ್ತರಿಗೆ ನೋಟಿಸ್ ಜಾರಿ ಮಾಡಿರುವ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಿ ಕೂಡಲೇ ಹಿಂಪಡೆಯಬೇಕು ಎಂದು ಅಜಿತ್ ಒತ್ತಾಯಿಸಿದರು. ಜಿಲ್ಲಾ ಬಿಜೆಪಿ ಅಧ್ಯಕ್ಷ ರಾಬಿನ್ ದೇವಯ್ಯ ಅವರು ಈ ಕ್ರಮವನ್ನು ವಿರೋಧಿಸಿದರು.

ಈ ಮಧ್ಯೆ, ಇಂದು ಎಸಿ ಕೋರ್ಟ್ ನಲ್ಲಿ ಗಡಿಪಾರು ಮಾಡದಿರಲು ಕಾರಣ ನೀಡುವಂತೆ ನೀಡಿದ್ದ ಶೋಕಾಸ್ ನೋಟಿಸ್‌ಗಳ ವಿಚಾರಣೆ ನಡೆಯಿತು. ಜಿಲ್ಲೆಯ ಒಟ್ಟು ಐವರು ನಿವಾಸಿಗಳಿಗೆ ಗಡಿಪಾರು ನೋಟಿಸ್ ಜಾರಿ ಮಾಡಲಾಗಿದೆ ಎಂದು ತಿಳಿದುಬಂದಿದೆ. 

ಹಿಂದುತ್ವವಾದಿಗಳಾದ ಮಡಿಕೇರಿ ತಾಲೂಕಿನ ವಿನಯ್ ಕುಮಾರ್ ಮತ್ತು ಕವನ್ ಕಾವೇರಪ್ಪ ಜೊತೆಗೆ ಕೊಂಡಂಗೇರಿಯ ಕೆ.ಎಂ ಅಬ್ದುಲ್ ಸಲಾಂ, ಕುಶಾಲನಗರದ ಎನ್.ಎಲ್.ನವೀನ್ ಕುಮಾರ್ ಮತ್ತು ಸೋಮವಾರಪೇಟೆ ತಾಲೂಕಿನ ಅಜೀನ್ ಬೇಗ್ ಅವರಿಗೆ ನೋಟಿಸ್ ಜಾರಿ ಮಾಡಲಾಗಿದೆ.

ಗಡಿಪಾರು ನೋಟಿಸ್ ಪಡೆದಿದ್ದ ಮೂವರು ನ್ಯಾಯಾಲಯಕ್ಕೆ ಹಾಜರಾಗಿದ್ದರೆ, ವಿನಯ್ ಕುಮಾರ್ ಮತ್ತು ಕವನ್ ನ್ಯಾಯಾಲಯಕ್ಕೆ ಹಾಜರಾಗಲಿಲ್ಲ. ಹೀಗಾಗಿ ಫೆ. 7ರಂದು ಎಲ್ಲರೂ ವಿಚಾರಣೆಗೆ ಹಾಜರಾಗುವಂತೆ ಐವರು ಎಸಿ ಯತೀಶ್ ಉಳ್ಳಾಲ್ ಆದೇಶಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?