ಬಿಜೆಪಿ, ಹಿಂದೂ ಜಾಗರಣ ವೇದಿಕೆಯಿಂದ ಪ್ರತಿಭಟನೆ 
ರಾಜ್ಯ

ಕೊಡಗು: ಗಡಿಪಾರು ನೋಟಿಸ್ ಹಿಂಪಡೆಯುವಂತೆ ಆಗ್ರಹಿಸಿ ಬಿಜೆಪಿ, ಹಿಂದೂ ಜಾಗರಣ ವೇದಿಕೆಯಿಂದ ಪ್ರತಿಭಟನೆ

ಕೊಡಗಿನ ಇಬ್ಬರು ಹಿಂದುತ್ವವಾದಿಗಳಿಗೆ ನೀಡಿರುವ ಗಡಿಪಾರು ನೋಟಿಸ್ ಹಿಂಪಡೆಯಬೇಕು ಎಂದು ಒತ್ತಾಯಿಸಿ ಹಿಂದೂ ಜಾಗರಣ ವೇದಿಕೆ ಹಾಗೂ ಬಿಜೆಪಿಯ ಕೆಲವು ಸದಸ್ಯರು ಮಡಿಕೇರಿ ಜಿಲ್ಲಾಧಿಕಾರಿ ಕಚೇರಿ ಎದುರು ಗುರುವಾರ ಪ್ರತಿಭಟನೆ ನಡೆಸಿದರು. 

ಮಡಿಕೇರಿ: ಕೊಡಗಿನ ಇಬ್ಬರು ಹಿಂದುತ್ವವಾದಿಗಳಿಗೆ ನೀಡಿರುವ ಗಡಿಪಾರು ನೋಟಿಸ್ ಹಿಂಪಡೆಯಬೇಕು ಎಂದು ಒತ್ತಾಯಿಸಿ ಹಿಂದೂ ಜಾಗರಣ ವೇದಿಕೆ ಹಾಗೂ ಬಿಜೆಪಿಯ ಕೆಲವು ಸದಸ್ಯರು ಮಡಿಕೇರಿ ಜಿಲ್ಲಾಧಿಕಾರಿ ಕಚೇರಿ ಎದುರು ಗುರುವಾರ ಪ್ರತಿಭಟನೆ ನಡೆಸಿದರು. 

"ಹಿಂದೂ ಪರ ಕಾರ್ಯಕರ್ತರನ್ನು ಪೊಲೀಸರು ಅನಗತ್ಯವಾಗಿ ಟಾರ್ಗೆಟ್ ಮಾಡುತ್ತಿದ್ದಾರೆ" ಎಂದು ಆರೋಪಿಸಿದ ಪ್ರತಿಭಟನಾಕಾರರು, ಜಿಲ್ಲಾಡಳಿತ ಹಾಗೂ ಜಿಲ್ಲಾ ಪೊಲೀಸರ ವಿರುದ್ಧ ಘೋಷಣೆ ಕೂಗಿದರು. 

ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಹಿಂದೂ ಜಾಗರಣ ವೇದಿಕೆ ಜಿಲ್ಲಾ ಸಂಚಾಲಕ ಕುಕ್ಕೇರ ಅಜಿತ್, “ಹಿಂದುತ್ವವಾದಿಗಳಾದ ವಿಜಯ್ ಕುಮಾರ್ ಮತ್ತು ಕವನ್ ಕಾವೇರಪ್ಪ ಇಬ್ಬರೂ ಧರ್ಮ ಮತ್ತು ರಾಷ್ಟ್ರದ ರಕ್ಷಣೆಗಾಗಿ ಕೆಲಸ ಮಾಡುತ್ತಿದ್ದಾರೆ. ಗೋಹತ್ಯೆ ಮಾಡುವವರು ಮತ್ತು ದೇಶವಿರೋಧಿಗಳು ಸೇರಿದಂತೆ ಇತರ ಕಾನೂನು ಉಲ್ಲಂಘಿಸುವವರು ಪೊಲೀಸರಿಗೆ ಕಾಣಿಸುತ್ತಿಲ್ಲ. ಪೊಲೀಸರ ಈ ಬೆದರಿಕೆಗಳಿಗೆ ನಾವು ಹೆದರುವುದಿಲ್ಲ ಎಂದರು.

ಹಿಂದೂಪರ ಕಾರ್ಯಕರ್ತರಿಗೆ ನೋಟಿಸ್ ಜಾರಿ ಮಾಡಿರುವ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಿ ಕೂಡಲೇ ಹಿಂಪಡೆಯಬೇಕು ಎಂದು ಅಜಿತ್ ಒತ್ತಾಯಿಸಿದರು. ಜಿಲ್ಲಾ ಬಿಜೆಪಿ ಅಧ್ಯಕ್ಷ ರಾಬಿನ್ ದೇವಯ್ಯ ಅವರು ಈ ಕ್ರಮವನ್ನು ವಿರೋಧಿಸಿದರು.

ಈ ಮಧ್ಯೆ, ಇಂದು ಎಸಿ ಕೋರ್ಟ್ ನಲ್ಲಿ ಗಡಿಪಾರು ಮಾಡದಿರಲು ಕಾರಣ ನೀಡುವಂತೆ ನೀಡಿದ್ದ ಶೋಕಾಸ್ ನೋಟಿಸ್‌ಗಳ ವಿಚಾರಣೆ ನಡೆಯಿತು. ಜಿಲ್ಲೆಯ ಒಟ್ಟು ಐವರು ನಿವಾಸಿಗಳಿಗೆ ಗಡಿಪಾರು ನೋಟಿಸ್ ಜಾರಿ ಮಾಡಲಾಗಿದೆ ಎಂದು ತಿಳಿದುಬಂದಿದೆ. 

ಹಿಂದುತ್ವವಾದಿಗಳಾದ ಮಡಿಕೇರಿ ತಾಲೂಕಿನ ವಿನಯ್ ಕುಮಾರ್ ಮತ್ತು ಕವನ್ ಕಾವೇರಪ್ಪ ಜೊತೆಗೆ ಕೊಂಡಂಗೇರಿಯ ಕೆ.ಎಂ ಅಬ್ದುಲ್ ಸಲಾಂ, ಕುಶಾಲನಗರದ ಎನ್.ಎಲ್.ನವೀನ್ ಕುಮಾರ್ ಮತ್ತು ಸೋಮವಾರಪೇಟೆ ತಾಲೂಕಿನ ಅಜೀನ್ ಬೇಗ್ ಅವರಿಗೆ ನೋಟಿಸ್ ಜಾರಿ ಮಾಡಲಾಗಿದೆ.

ಗಡಿಪಾರು ನೋಟಿಸ್ ಪಡೆದಿದ್ದ ಮೂವರು ನ್ಯಾಯಾಲಯಕ್ಕೆ ಹಾಜರಾಗಿದ್ದರೆ, ವಿನಯ್ ಕುಮಾರ್ ಮತ್ತು ಕವನ್ ನ್ಯಾಯಾಲಯಕ್ಕೆ ಹಾಜರಾಗಲಿಲ್ಲ. ಹೀಗಾಗಿ ಫೆ. 7ರಂದು ಎಲ್ಲರೂ ವಿಚಾರಣೆಗೆ ಹಾಜರಾಗುವಂತೆ ಐವರು ಎಸಿ ಯತೀಶ್ ಉಳ್ಳಾಲ್ ಆದೇಶಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT