ಬಿಜೆಪಿ, ಹಿಂದೂ ಜಾಗರಣ ವೇದಿಕೆಯಿಂದ ಪ್ರತಿಭಟನೆ 
ರಾಜ್ಯ

ಕೊಡಗು: ಗಡಿಪಾರು ನೋಟಿಸ್ ಹಿಂಪಡೆಯುವಂತೆ ಆಗ್ರಹಿಸಿ ಬಿಜೆಪಿ, ಹಿಂದೂ ಜಾಗರಣ ವೇದಿಕೆಯಿಂದ ಪ್ರತಿಭಟನೆ

ಕೊಡಗಿನ ಇಬ್ಬರು ಹಿಂದುತ್ವವಾದಿಗಳಿಗೆ ನೀಡಿರುವ ಗಡಿಪಾರು ನೋಟಿಸ್ ಹಿಂಪಡೆಯಬೇಕು ಎಂದು ಒತ್ತಾಯಿಸಿ ಹಿಂದೂ ಜಾಗರಣ ವೇದಿಕೆ ಹಾಗೂ ಬಿಜೆಪಿಯ ಕೆಲವು ಸದಸ್ಯರು ಮಡಿಕೇರಿ ಜಿಲ್ಲಾಧಿಕಾರಿ ಕಚೇರಿ ಎದುರು ಗುರುವಾರ ಪ್ರತಿಭಟನೆ ನಡೆಸಿದರು. 

ಮಡಿಕೇರಿ: ಕೊಡಗಿನ ಇಬ್ಬರು ಹಿಂದುತ್ವವಾದಿಗಳಿಗೆ ನೀಡಿರುವ ಗಡಿಪಾರು ನೋಟಿಸ್ ಹಿಂಪಡೆಯಬೇಕು ಎಂದು ಒತ್ತಾಯಿಸಿ ಹಿಂದೂ ಜಾಗರಣ ವೇದಿಕೆ ಹಾಗೂ ಬಿಜೆಪಿಯ ಕೆಲವು ಸದಸ್ಯರು ಮಡಿಕೇರಿ ಜಿಲ್ಲಾಧಿಕಾರಿ ಕಚೇರಿ ಎದುರು ಗುರುವಾರ ಪ್ರತಿಭಟನೆ ನಡೆಸಿದರು. 

"ಹಿಂದೂ ಪರ ಕಾರ್ಯಕರ್ತರನ್ನು ಪೊಲೀಸರು ಅನಗತ್ಯವಾಗಿ ಟಾರ್ಗೆಟ್ ಮಾಡುತ್ತಿದ್ದಾರೆ" ಎಂದು ಆರೋಪಿಸಿದ ಪ್ರತಿಭಟನಾಕಾರರು, ಜಿಲ್ಲಾಡಳಿತ ಹಾಗೂ ಜಿಲ್ಲಾ ಪೊಲೀಸರ ವಿರುದ್ಧ ಘೋಷಣೆ ಕೂಗಿದರು. 

ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಹಿಂದೂ ಜಾಗರಣ ವೇದಿಕೆ ಜಿಲ್ಲಾ ಸಂಚಾಲಕ ಕುಕ್ಕೇರ ಅಜಿತ್, “ಹಿಂದುತ್ವವಾದಿಗಳಾದ ವಿಜಯ್ ಕುಮಾರ್ ಮತ್ತು ಕವನ್ ಕಾವೇರಪ್ಪ ಇಬ್ಬರೂ ಧರ್ಮ ಮತ್ತು ರಾಷ್ಟ್ರದ ರಕ್ಷಣೆಗಾಗಿ ಕೆಲಸ ಮಾಡುತ್ತಿದ್ದಾರೆ. ಗೋಹತ್ಯೆ ಮಾಡುವವರು ಮತ್ತು ದೇಶವಿರೋಧಿಗಳು ಸೇರಿದಂತೆ ಇತರ ಕಾನೂನು ಉಲ್ಲಂಘಿಸುವವರು ಪೊಲೀಸರಿಗೆ ಕಾಣಿಸುತ್ತಿಲ್ಲ. ಪೊಲೀಸರ ಈ ಬೆದರಿಕೆಗಳಿಗೆ ನಾವು ಹೆದರುವುದಿಲ್ಲ ಎಂದರು.

ಹಿಂದೂಪರ ಕಾರ್ಯಕರ್ತರಿಗೆ ನೋಟಿಸ್ ಜಾರಿ ಮಾಡಿರುವ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಿ ಕೂಡಲೇ ಹಿಂಪಡೆಯಬೇಕು ಎಂದು ಅಜಿತ್ ಒತ್ತಾಯಿಸಿದರು. ಜಿಲ್ಲಾ ಬಿಜೆಪಿ ಅಧ್ಯಕ್ಷ ರಾಬಿನ್ ದೇವಯ್ಯ ಅವರು ಈ ಕ್ರಮವನ್ನು ವಿರೋಧಿಸಿದರು.

ಈ ಮಧ್ಯೆ, ಇಂದು ಎಸಿ ಕೋರ್ಟ್ ನಲ್ಲಿ ಗಡಿಪಾರು ಮಾಡದಿರಲು ಕಾರಣ ನೀಡುವಂತೆ ನೀಡಿದ್ದ ಶೋಕಾಸ್ ನೋಟಿಸ್‌ಗಳ ವಿಚಾರಣೆ ನಡೆಯಿತು. ಜಿಲ್ಲೆಯ ಒಟ್ಟು ಐವರು ನಿವಾಸಿಗಳಿಗೆ ಗಡಿಪಾರು ನೋಟಿಸ್ ಜಾರಿ ಮಾಡಲಾಗಿದೆ ಎಂದು ತಿಳಿದುಬಂದಿದೆ. 

ಹಿಂದುತ್ವವಾದಿಗಳಾದ ಮಡಿಕೇರಿ ತಾಲೂಕಿನ ವಿನಯ್ ಕುಮಾರ್ ಮತ್ತು ಕವನ್ ಕಾವೇರಪ್ಪ ಜೊತೆಗೆ ಕೊಂಡಂಗೇರಿಯ ಕೆ.ಎಂ ಅಬ್ದುಲ್ ಸಲಾಂ, ಕುಶಾಲನಗರದ ಎನ್.ಎಲ್.ನವೀನ್ ಕುಮಾರ್ ಮತ್ತು ಸೋಮವಾರಪೇಟೆ ತಾಲೂಕಿನ ಅಜೀನ್ ಬೇಗ್ ಅವರಿಗೆ ನೋಟಿಸ್ ಜಾರಿ ಮಾಡಲಾಗಿದೆ.

ಗಡಿಪಾರು ನೋಟಿಸ್ ಪಡೆದಿದ್ದ ಮೂವರು ನ್ಯಾಯಾಲಯಕ್ಕೆ ಹಾಜರಾಗಿದ್ದರೆ, ವಿನಯ್ ಕುಮಾರ್ ಮತ್ತು ಕವನ್ ನ್ಯಾಯಾಲಯಕ್ಕೆ ಹಾಜರಾಗಲಿಲ್ಲ. ಹೀಗಾಗಿ ಫೆ. 7ರಂದು ಎಲ್ಲರೂ ವಿಚಾರಣೆಗೆ ಹಾಜರಾಗುವಂತೆ ಐವರು ಎಸಿ ಯತೀಶ್ ಉಳ್ಳಾಲ್ ಆದೇಶಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

IPL 2026 Eliminator: ವಿಶ್ವದಾಖಲೆಯ ಹೊಸ್ತಿಲಲ್ಲಿ ಎಡವಿದ Vaibhav Suryavanshi, ಮತ್ತೊಂದು ರೆಕಾರ್ಡ್ ಜಸ್ಟ್ ಮಿಸ್!

ಬೆಂಗಳೂರು: ಮಾಜಿ ಪ್ರೇಯಸಿ ಕರೆದಳೆಂದು ಮನೆಗೆ ಹೋದ ಪ್ರಿಯಕರ ದುರಂತ ಸಾವು: ಅಷ್ಟಕ್ಕೂ ಆಗಿದ್ದೇನು?

SCROLL FOR NEXT