ಕರ್ನಾಟಕ ಹೈಕೋರ್ಟ್ 
ರಾಜ್ಯ

ಪೋಕ್ಸೋ ಪ್ರಕರಣ: ಮುರುಘಾ ಮಠದ ಶಿವಮೂರ್ತಿ ಸ್ವಾಮಿ ಜಾಮೀನು ಅರ್ಜಿ ತಿರಸ್ಕರಿಸಿದ ಹೈಕೋರ್ಟ್

ಚಿತ್ರದುರ್ಗದ ಮುರುಘಾ ಮಠದ ಡಾ.ಶಿವಮೂರ್ತಿ ವಿರುದ್ಧ ದಾಖಲಾಗಿರುವ  ಪೋಕ್ಸೊ ಪ್ರಕರಣದ ಜಾಮೀನು ಅರ್ಜಿಯನ್ನು ಎರಡನೇ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶ ಬಿ.ಕೆ.ಕೋಮಲಾ ಮಂಗಳವಾರ ತಿರಸ್ಕರಿಸಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗದ ಮುರುಘಾ ಮಠದ ಡಾ.ಶಿವಮೂರ್ತಿ ವಿರುದ್ಧ ದಾಖಲಾಗಿರುವ  ಪೋಕ್ಸೊ ಪ್ರಕರಣದ ಜಾಮೀನು ಅರ್ಜಿಯನ್ನು ಎರಡನೇ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶ ಬಿ.ಕೆ.ಕೋಮಲಾ ಮಂಗಳವಾರ ತಿರಸ್ಕರಿಸಿದ್ದಾರೆ.

ಮಠಾಧೀಶರ ಪರ ವಕೀಲರು ಜಾಮೀನಿಗಾಗಿ ಕರ್ನಾಟಕ ಹೈಕೋರ್ಟ್‌ನ ಮೊರೆ ಹೋಗಿದ್ದರು. ನಂತರ ತಮ್ಮ ಅರ್ಜಿಯನ್ನು ಹಿಂಪಡೆದು ಎರಡನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದಲ್ಲಿ ಜಾಮೀನು ಪಡೆಯುವ ಅವಕಾಶವನ್ನು ಬಳಸಿಕೊಳ್ಳಲು ಪ್ರಯತ್ನಿಸಿದರು.

ಎರಡೂ ಕಡೆಯ ವಾದವನ್ನು ಆಲಿಸಿದ ನ್ಯಾಯಾಧೀಶರು ಮಠಾಧೀಶರ ಮನವಿಯನ್ನು ತಿರಸ್ಕರಿಸಿದರು. ಜಾಮೀನಿಗಾಗಿ ಹೈಕೋರ್ಟ್ ಮೊರೆ ಹೋಗುವುದಾಗಿ ಮಠಾಧೀಶರ ಪರ ವಕೀಲರು ತಿಳಿಸಿದ್ದಾರೆ.

ಮೈಸೂರಿನ ನಜರ್ ಬಾದ್ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತರಿಬ್ಬರು ನೀಡಿದ ದೂರಿನ ಆಧಾರದ ಮೇಲೆ ಜಿಲ್ಲಾ ಪೊಲೀಸರು ಪ್ರಕರಣವನ್ನು ಚಿತ್ರದುರ್ಗ ಗ್ರಾಮಾಂತರ ಠಾಣೆಗೆ ವರ್ಗಾಯಿಸಿ ತನಿಖೆ ನಡೆಸಿ ಪ್ರಕರಣಕ್ಕೆ ಸಂಬಂಧಿಸಿದಂತೆ 694 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT