ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಸೌಲಭ್ಯ ವಂಚಿತ ಮಕ್ಕಳಿಗೆ ತಂತ್ರಜ್ಞಾನದ ಅರಿವು ಮೂಡಿಸುತ್ತಿರುವ ವಿದ್ಯಾರ್ಥಿಗಳು!

ಸೌಲಭ್ಯ ವಂಚಿತ ಮಕ್ಕಳಿಗೆ ತಂತ್ರಜ್ಞಾನದ ಅರಿವು ಮೂಡಿರುವ ಮಹತ್ವದ ಕೆಲಸವನ್ನು ನಗರದ ಈ ಯುವಕರು ಮಾಡುತ್ತಿದ್ದಾರೆ.

ಬೆಂಗಳೂರು: ಸೌಲಭ್ಯ ವಂಚಿತ ಮಕ್ಕಳಿಗೆ ತಂತ್ರಜ್ಞಾನದ ಅರಿವು ಮೂಡಿರುವ ಮಹತ್ವದ ಕೆಲಸವನ್ನು ನಗರದ ಈ ಯುವಕರು ಮಾಡುತ್ತಿದ್ದಾರೆ.

ಬೆಂಗಳೂರಿನ ದಿ ಇಂಟರ್‌ನ್ಯಾಶನಲ್ ಸ್ಕೂಲ್‌ನ 12-14 ವಯಸ್ಸಿನ 10 ವಿದ್ಯಾರ್ಥಿಗಳು ರಿಕ್ಕೆಟಿ ರೋಬೋಟ್ಸ್ ರೋಬೋಶಾಲಾ (ಆರ್'ಆರ್'ಆರ್) ಎಂಬ ಸಂಸ್ಥೆಯನ್ನು ಆರಂಭಿಸಿದ್ದು, ಇದರ ಮೂಲಕ ಹಿಂದುಳಿದ ವಿದ್ಯಾರ್ಥಿಗಳಿಗೆ ಅವರ ಭವಿಷ್ಯಕ್ಕಾಗಿ ಹೆಚ್ಚಿನ ಅವಕಾಶಗಳನ್ನು ತೆರೆಯಲು ಸಹಾಯ ಮಾಡಲು ವಿಜ್ಞಾನ, ತಂತ್ರಜ್ಞಾನ, ಎಂಜಿನಿಯರಿಂಗ್ ಮತ್ತು ಗಣಿತ (STEM) ಕುರಿತು ಅರಿವು ಮೂಡಿಸುವ ಕೆಲಸ ಮಾಡುತ್ತಿದ್ದಾರೆ.

ಬೆಂಗಳೂರು ಮತ್ತು ಇಡೀ ವಿಶ್ವವೇ ತಂತ್ರಜ್ಞಾನ ಆಧಾರಿತ ಭವಿಷ್ಯದತ್ತ ಸಾಗುತ್ತಿದ್ದು, ಸೌಲಭ್ಯರಹಿತ ಮಕ್ಕಳು ಹಿಂದುಳಿಯದಂತೆ ಮಾಡುವುದು ನಮ್ಮ ಗುರಿಯಾಗಿದೆ. ಸಮಾಜ ಕಲ್ಯಾಣಗಳು ಈ ಸಮುದಾಯಗಳ ಮೇಲೆ ಪರಿಣಾಮ ಬೀರಬೇಕೆಂದು ನಾವು ಬಯಸುತ್ತಿದ್ದೇವೆಂದು ವಿದ್ಯಾರ್ಥಿಗಳು ಹೇಳಿದ್ದಾರೆ.

ಆರಿತ್ ಸಮೈರಾ, ನಿಶ್ಕಾ, ಕೆಯೂಷ್, ಒದತಿ, ರಯಾನ್, ಅವನಿ, ಮಹಿರ್ ಮತ್ತು ಅರ್ಜುನ್ ಎಂಬ ವಿದ್ಯಾರ್ಥಿಗಳು, ಹಿಂದುಳಿದ ಮಕ್ಕಳಿಗೆ ತಂತ್ರಜ್ಞಾನದ ಅರಿವು ಮಾಡಿಸುತ್ತಿದ್ದಾರೆ. ಈಗಾಗಲೇ ಈ ವಿದ್ಯಾರ್ಥಿಗಳು ಅನಾಥಾಶ್ರಮ ಹಾಗೂ ನಗರದ ಹಲವು ಸರ್ಕಾರಿ ಶಾಲೆಗಳಲ್ಲಿ ಹಲವು ತರಬೇತಿ, ವರ್ಕ್ ಶಾಪ್ ಗಳನ್ನು ನಡೆಸಿದ್ದಾರೆ.

“ತಂತ್ರಜ್ಞಾನವು ಭವಿಷ್ಯವಾಗಿದೆ, ಆದ್ದರಿಂದ ಅದನ್ನು ಎಲ್ಲರಿಗೂ ತಿಳಿಯುವಂತೆ ಮಾಡದ ಹೊರತು ನಾವು ಪ್ರಗತಿ ಸಾಧಿಸಲು ಸಾಧ್ಯವಿಲ್ಲ. ತಂತ್ರಜ್ಞಾನದ ಬಗ್ಗೆ ಮಕ್ಕಳಲ್ಲಿ ಅರಿವು ಮೂಡಿಸುವುದು ನಮ್ಮ ಪ್ರಾಥಮಿಕ ಉದ್ದೇಶಗಳಲ್ಲಿ ಒಂದಾಗಿದೆ. ಬೆಂಗಳೂರನ್ನು ಮುಂದಿನ ಹಂತಕ್ಕೆ ಕೊಂಡೊಯ್ಯಲು ನಾವು ಈ ಪ್ರಯತ್ನಗಳನ್ನು ಮಾಡುತ್ತಿದ್ದೇವೆಂದು ಮತ್ತೊಬ್ಬ ವಿದ್ಯಾರ್ಥಿ ಹೇಳಿದ್ದಾರೆ.

ಈ ವಿದ್ಯಾರ್ಥಿಗಳು ಸರ್ಕಾರಿ ಶಾಲೆಗಳಿಗೆ ಭೇಟಿ ನೀಡಿ, ಅಲ್ಲಿ ಅವರು ಮಕ್ಕಳಿಗೆ ಪ್ರೋಗ್ರಾಮಿಂಗ್ ಭಾಷೆಯಾದ ಸ್ಕ್ರ್ಯಾಚ್ ಮೂಲಕ ಕೋಡಿಂಗ್ ಕಲಿಸುತ್ತಿದ್ದಾರೆ. ವೈಟ್‌ಫೀಲ್ಡ್‌ನಲ್ಲಿರುವ ರಾಮಗೊಂಡನಹಳ್ಳಿ ಸರ್ಕಾರಿ ಶಾಲೆಯನ್ನು ದತ್ತು ಪಡೆದುಕೊಂಡು, ಅಭಿವೃದ್ಧಿಪಡಿಸುತ್ತಿದ್ದಾರೆ. ಶಾಲೆಯಲ್ಲಿ ಕಂಪ್ಯೂಟರ್ ಮತ್ತು ರೊಬೊಟಿಕ್ಸ್ ಲ್ಯಾಬ್‌ಗಳನ್ನು ಸ್ಥಾಪಿಸುವ ಕೆಲಸ ಮಾಡುತ್ತಿದ್ದಾರೆ.

ಬೆಂಗಳೂರಿನಲ್ಲಿರುವ ಅನಾಥಾಶ್ರಮ ಆರತಿ ಹೋಮ್ಸ್‌ನಲ್ಲಿ ಮೇಕರ್ ಲ್ಯಾಬ್ ಸ್ಥಾಪಿಸಿ, ಮಕ್ಕಳು ಮತ್ತು ವಯಸ್ಕರಿಗೆ ವಸ್ತುಗಳನ್ನು ರಚಿಸಲು ಮತ್ತು ಆವಿಷ್ಕರಿಸಲು ಸ್ಥಳವನ್ನು ಒದಗಿಸಿಕೊಟ್ಟಿದ್ದಾರೆ.

ಇದಷ್ಟೇ ಅಲ್ಲದೆ, ಪ್ರತೀ ಶಾಲೆಯಲ್ಲಿ ಕಂಪ್ಯೂಟರ್ ಲ್ಯಾಬ್ ಸ್ಥಾಪಿಸುವ ಹಾಗೂ ಪ್ರತೀ ಹಂತದಲ್ಲಿಯೂ ಪೂರ್ಣ ಪ್ರಮಾಣದ ರೋಬೋಟಿಕ್ ಲ್ಯಾಬ್ ಸ್ಥಾಪಿಸುವ ಗುರಿಯನ್ನು ವಿದ್ಯಾರ್ಥಿಗಳು ಹೊಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

SCROLL FOR NEXT