ಸಂಗ್ರಹ ಚಿತ್ರ 
ರಾಜ್ಯ

ವಿಧಾನಸಭಾ ಚುನಾವಣೆ: ಕಾರ್ಕಳದಲ್ಲಿ ಪ್ರಮೋದ್ ಮುತಾಲಿಕ್ ಬೆಂಬಲಿಸುವಂತೆ ಬಿಜೆಪಿಗೆ ಶ್ರೀರಾಮ ಸೇನೆ ಆಗ್ರಹ

ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಕಾರ್ಕಳ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಗಳನ್ನು ಕಣಕ್ಕಿಳಿಸದೆ ಪ್ರಮೋದ್ ಮುತಾಲಿಕ್ ಅವರನ್ನು ಬೆಂಬಲಿಸುವಂತೆ ಶ್ರೀರಾಮ ಸೇನೆಯ ಉಡುಪಿ ಮತ್ತು ದಕ್ಷಿಣ ಕನ್ನಡ ಘಟಕಗಳು ಬಿಜೆಪಿಗೆ ಒತ್ತಾಯಿಸಿವೆ.

ಉಡುಪಿ/ಮಂಗಳೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಕಾರ್ಕಳ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಗಳನ್ನು ಕಣಕ್ಕಿಳಿಸದೆ ಪ್ರಮೋದ್ ಮುತಾಲಿಕ್ ಅವರನ್ನು ಬೆಂಬಲಿಸುವಂತೆ ಶ್ರೀರಾಮ ಸೇನೆಯ ಉಡುಪಿ ಮತ್ತು ದಕ್ಷಿಣ ಕನ್ನಡ ಘಟಕಗಳು ಬಿಜೆಪಿಗೆ ಒತ್ತಾಯಿಸಿವೆ.

ಕಾರ್ಕಳದಿಂದ ಮುತಾಲಿಕ್ ಅವರು ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ ಎಂದು ಶ್ರೀರಾಮ ಸೇನೆಯ ಉಡುಪಿ ಘಟಕದ ವಕ್ತಾರ ಶರತ್ ಪೂಜಾರಿ ತಿಳಿಸಿದ್ದಾರೆ.

ಕರಾವಳಿ ಮತ್ತು ಉತ್ತರ ಕರ್ನಾಟಕ ಭಾಗದಲ್ಲಿ ಬಿಜೆಪಿ ಅಸ್ತಿತ್ವಕ್ಕೆ ಬಂದಿದ್ದರೆ ಅದಕ್ಕೆ ಮುತಾಲಿಕ್ ಕೊಡುಗೆಯೇ ಕಾರಣ ಎಂದು ತಿಳಿಸಿದ್ದಾರೆ.

ಶರತ್ ಪೂಜಾರಿ ಅವರ ಈ ಹೇಳಿಕೆಗೆ ಕಾರ್ಕಳ ಬಿಜೆಪಿ ಮುಖಂಡ ಬಿ ಮಣಿರಾಜ್ ಶೆಟ್ಟಿ ತಿರುಗೇಟು ನೀಡಿದ್ದಾರೆ.

ಕಾರ್ಕಳದಿಂದ ಸ್ವತಂತ್ರವಾಗಿ ಸ್ಪರ್ಧಿಸಿದರೆ ಮುತಾಲಿಕ್ 3 ಸಾವಿರ ಮತಗಳನ್ನು ಗಳಿಸಲು ಸಾಧ್ಯವಾಗದಿರಬಹುದು. 'ಇದು ಮುತಾಲಿಕ್ ಮತ್ತು ಅವರ ತಂಡದ ಒತ್ತಡದ ತಂತ್ರವಲ್ಲದೆ ಬೇರೇನೂ ಅಲ್ಲ. ಕಾಂಗ್ರೆಸ್ ಅವರನ್ನು ಬೆಂಬಲಿಸುತ್ತಿದೆ, ಮುತಾಲಿಕ್ ಅವರ ತಂಡವನ್ನು ಈಗ ಕಾಂಗ್ರೆಸ್‌ನ ಬಿ ಟೀಮ್ ಎಂದು ಕರೆಯಬಹುದು ಎಂದು ಹೇಳಿದ್ದಾರೆ.

ಇದೇ ವೇಳೆ ಮಂಗಳೂರಿನಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿರುವ ಶ್ರೀರಾಮ ಸೇನೆ ರಾಜ್ಯ ಪ್ರಧಾನ ಕಾರ್ಯದರ್ಶಿ ಆನಂದ್ ಶೆಟ್ಟಿ ಅಡ್ಯಾರ್ ಅವರು, ಭ್ರಷ್ಟಾಚಾರ, ಹಿಂದೂ ವಿರೋಧಿ ನೀತಿ, ಹಿಂದುತ್ವ ನಾಯಕರ ನಿರ್ಲಕ್ಷ್ಯ, ಅವರ ವಿರುದ್ಧ ಸುಳ್ಳು ಕೇಸ್‌ಗಳಿಂದ ಹಿಂದೂ ಸಮುದಾಯ ಅಸಮಾಧಾನಗೊಂಡಿದ್ದು, ತಪ್ಪಿತಸ್ಥರ ಹುಡುಕುವ ಕಾರ್ಯವಾಗುತ್ತಿದೆ. ಮುತಾಲಿಕ್ ಪ್ರಾಮಾಣಿಕ ಅಭ್ಯರ್ಥಿಯಾಗಿದ್ದಾರೆಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮಾತುಕತೆಗೆ ವ್ಯಾನ್ಸ್ ನೇತೃತ್ವದ ಅಮೆರಿಕಾ ತಂಡ ಇಸ್ಲಾಮಾಬಾದ್ ಗೆ ಆಗಮನ, ಲೆಬನಾನ್ ಕದನ ವಿರಾಮ, ಆಸ್ತಿ ಬಿಡುಗಡೆ ಪ್ರಮುಖ ಅಜೆಂಡಾ-Video

ಇರಾನ್‌ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ ಮುಖ ವಿರೂಪಗೊಂಡಿದೆ, ಕಾಲುಗಳಿಗೆ ತೀವ್ರ ಗಾಯವಾಗಿದೆ: ವರದಿ

IPL 2026: RCB ಸೋಲಿಸಿದ RRಗೆ ಬಿಗ್ ಶಾಕ್, ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಸಿಬ್ಬಂದಿ, BCCI ಶಿಕ್ಷೆ..! Video

ತೀವ್ರ ಕುತೂಹಲ ಘಟ್ಟಕ್ಕೆ ತಲುಪಿದ ಪಶ್ಚಿಮ ಏಷ್ಯಾ ಸಂಘರ್ಷ: ಇಂದು ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ಇರಾನ್-ಅಮೆರಿಕ ನಡುವೆ ಸಂಧಾನ ಮಾತುಕತೆ-Video

PSL ನಲ್ಲಿ ಮತ್ತೊಂದು ಹೈಡ್ರಾಮಾ: ಇದ್ಯಾವ್ ಸೀಮೆ ಬೌಲಿಂಗ್?.. ಮೈದಾನದಲ್ಲೇ Daryl Mitchell vs Usman Tariq ಜಟಾಪಟಿ, ಇಷ್ಟಕ್ಕೂ ಆಗಿದ್ದೇನು?

SCROLL FOR NEXT