ಮಾಜಿ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯ್ ಭಾಸ್ಕರ್ 
ರಾಜ್ಯ

ಎಸ್ಎಸ್ಎಲ್‌ಸಿ ಪಾಸ್ ಅಂಕಗಳನ್ನು 28 ರಿಂದ 20ಕ್ಕೆ ಇಳಿಸಿ: ಕರ್ನಾಟಕ ಸರ್ಕಾರಕ್ಕೆ ಸಮಿತಿ ಶಿಫಾರಸು

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇಕಡಾವಾರು ಉತ್ತೀರ್ಣತೆಯನ್ನು ಹೆಚ್ಚಿಸುವ ಉದ್ದೇಶದಿಂದ ಕರ್ನಾಟಕ ಆಡಳಿತ ಸುಧಾರಣಾ ಆಯೋಗ- II ಥಿಯರಿ ಪರೀಕ್ಷೆಗಳಲ್ಲಿ ಒಟ್ಟು 80 ಅಂಕಗಳ ಪೈಕಿ ಉತ್ತೀರ್ಣ ಅಂಕಗಳನ್ನು ಸದ್ಯದ 28 ಅಂಕಗಳಿಂದ 20 ಅಂಕಗಳಿಗೆ ಇಳಿಸಲು ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡಿದೆ.

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇಕಡಾವಾರು ಉತ್ತೀರ್ಣತೆಯನ್ನು ಹೆಚ್ಚಿಸುವ ಉದ್ದೇಶದಿಂದ ಕರ್ನಾಟಕ ಆಡಳಿತ ಸುಧಾರಣಾ ಆಯೋಗ- II ಥಿಯರಿ ಪರೀಕ್ಷೆಗಳಲ್ಲಿ ಒಟ್ಟು 80 ಅಂಕಗಳ ಪೈಕಿ ಉತ್ತೀರ್ಣ ಅಂಕಗಳನ್ನು ಸದ್ಯದ 28 ಅಂಕಗಳಿಂದ 20 ಅಂಕಗಳಿಗೆ ಇಳಿಸಲು ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡಿದೆ.

ಮಾಜಿ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯ್ ಭಾಸ್ಕರ್ ನೇತೃತ್ವದ ಸಮಿತಿಯು ಶುಕ್ರವಾರ ನಾಲ್ಕು ಮತ್ತು ಐದನೇ ವರದಿಗಳನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಸಲ್ಲಿಸಿತು. ಆಯೋಗದ ಪ್ರಕಾರ, ಪ್ರಿ-ಯೂನಿವರ್ಸಿಟಿ (PU) ತರಗತಿಗಳಿಗೆ ಪ್ರವೇಶ ಪಡೆಯುವ ಮಕ್ಕಳ ಒಟ್ಟು ದಾಖಲಾತಿ ಅನುಪಾತವು ಎಲ್ಲಾ ದಕ್ಷಿಣ ಭಾರತದ ರಾಜ್ಯಗಳ ಪೈಕಿ ಅತ್ಯಂತ ಕಡಿಮೆಯಾಗಿದೆ. ಇದಕ್ಕೆ ಮುಖ್ಯ ಕಾರಣವೆಂದರೆ ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅನುತ್ತೀರ್ಣರಾಗುತ್ತಿರುವುದು.

ಇತರ ರಾಜ್ಯಗಳ ಇತರ ಮಕ್ಕಳು ಉತ್ತಮವಾಗಿ ಕಾರ್ಯನಿರ್ವಹಿಸಬಹುದಾದಾಗ, ನಮ್ಮ ಮಕ್ಕಳಿಗೆ ಏಕೆ ಸಾಧ್ಯವಾಗುವುದಿಲ್ಲ ಎಂದು ವಿಜಯಭಾಸ್ಕರ್ ಅವರು 1,609 ಶಿಫಾರಸುಗಳನ್ನು ಒಳಗೊಂಡ ವರದಿಯನ್ನು ಮುಖ್ಯಮಂತ್ರಿಗೆ ಸಲ್ಲಿಸಿದ ಬಳಿಕ ಟಿಎನ್‌ಐಇ ಜೊತೆಗೆ ಮಾತನಾಡಿದರು. ಎಸ್‌ಸಿ/ಎಸ್‌ಟಿಗೆ ಸೇರಿದ ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅನುತ್ತೀರ್ಣರಾಗುತ್ತಾರೆ. ಇದು ಒಟ್ಟಾರೆ ಕಡಿಮೆ ಉತ್ತೀರ್ಣ ಶೇಕಡಾವಾರು ಪಲಿತಾಂಶ ಪ್ರಮಾಣವನ್ನು ಹೆಚ್ಚಿಸುತ್ತದೆ ಎಂದು ವರದಿ ಗಮನಸೆಳೆದಿದೆ.

ಶಾಲೆಗಳ ವಿಲೀನಕ್ಕೆ ಶಿಫಾರಸು

ಎಸ್‌ಎಸ್‌ಎಲ್‌ಸಿ ಮತ್ತು ಪಿಯು ವಿದ್ಯಾರ್ಥಿಗಳಿಗೆ ನೆರೆಯ ರಾಜ್ಯಗಳ ಮಾದರಿಯಲ್ಲಿ ಆಂತರಿಕ ಮೌಲ್ಯಮಾಪನವನ್ನು ಪರಿಚಯಿಸಲು ಸಮಿತಿಯು ಶಿಫಾರಸು ಮಾಡಿದೆ. ಎಸ್‌ಎಸ್‌ಎಲ್‌ಸಿ ಮತ್ತು ಪಿಯು ಪರೀಕ್ಷೆಗಳಲ್ಲಿ ವಿಜ್ಞಾನ ವಿಷಯಗಳಲ್ಲಿ 15 ಅಂಕಗಳಿಗೆ ಮತ್ತು ಸಮಾಜ ವಿಜ್ಞಾನ ಮತ್ತು ಭಾಷಾ ವಿಷಯಗಳಲ್ಲಿ 20 ಅಂಕಗಳಿಗೆ ಬಹು ಆಯ್ಕೆಯ ಪ್ರಶ್ನೆಗಳನ್ನು (ಎಂಸಿಕ್ಯೂ) ನೀಡುವಂತೆ ಹೇಳಿದೆ. ಪ್ರಥಮ ಪಿಯು ಮತ್ತು ದ್ವಿತೀಯ ಪಿಯು ತರಗತಿಗಳ ನಡುವಿನ ವಿದ್ಯಾರ್ಥಿಗಳ ಡ್ರಾಪ್ಔಟ್ ಪ್ರಮಾಣವನ್ನು ವರದಿಯು ಎತ್ತಿ ತೋರಿಸಿದೆ.

ಇದಲ್ಲದೆ, 100 ಮೀಟರ್ ವ್ಯಾಪ್ತಿಯಲ್ಲಿರುವ ಕಿರಿಯ ಪ್ರಾಥಮಿಕ ಶಾಲೆಗಳು, ಹಿರಿಯ ಪ್ರಾಥಮಿಕ ಶಾಲೆಗಳು ಮತ್ತು ಪ್ರೌಢಶಾಲೆಗಳನ್ನು ವಿಲೀನಗೊಳಿಸಲು ಸಮಿತಿಯು ಶಿಫಾರಸು ಮಾಡಿದೆ. ಸದ್ಯ, 100 ಮೀಟರ್ ಅಂತರದ ಪ್ರದೇಶದಲ್ಲಿ ವಿವಿಧ ಕಟ್ಟಡಗಳಲ್ಲಿ ಸಾವಿರಾರು ಶಾಲೆಗಳಿವೆ.

ಕಿರಿಯ ಪ್ರಾಥಮಿಕ ಶಾಲೆಗಳಲ್ಲಿ ವಿಧ್ಯಾಭ್ಯಾಸ ಮುಗಿಸುವ ಮತ್ತು ಹಿರಿಯ ಪ್ರಾಥಮಿಕ ಶಾಲೆಗಳಿಗೆ ಸೇರಲು ಬಯಸುವ ವಿದ್ಯಾರ್ಥಿಗಳು ವರ್ಗಾವಣೆ ಪ್ರಮಾಣಪತ್ರವನ್ನು ಪಡೆದುಕೊಳ್ಳಬೇಕು ಮತ್ತು ನಂತರ ಹೊಸ ಪ್ರವೇಶವನ್ನು ತೆಗೆದುಕೊಳ್ಳಬೇಕು. ಈ ಪ್ರಕ್ರಿಯೆಯಲ್ಲಿ, ವಿದ್ಯಾರ್ಥಿಗಳು ಶಾಲೆಯಿಂದ ಹೊರಗುಳಿಯುವ ಸಾಧ್ಯತೆಗಳಿವೆ. ನಾವು ಶಾಲೆಗಳನ್ನು ಮುಚ್ಚಲು ಶಿಫಾರಸು ಮಾಡುತ್ತಿಲ್ಲ. ಆದರೆ, ಎರಡು ಶಾಲೆಗಳನ್ನು ವಿಲೀನಗೊಳಿಸುವುದು ವಿದ್ಯಾರ್ಥಿಗಳಿಗೆ ಯಾವುದೇ ಅಡೆತಡೆಯಿಲ್ಲದೆ ಅಧ್ಯಯನ ಮಾಡಲು ಸಹಾಯ ಮಾಡುತ್ತದೆ ಎಂದು ಹೇಳಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods: ಸಾವಿನ ಸಂಖ್ಯೆ 157ಕ್ಕೇರಿಕೆ, 750ಕ್ಕೂ ಅಧಿಕ ಮಂದಿ ನಾಪತ್ತೆ, ನೇಪಾಳಕ್ಕೆ ಭಾರತ ನೆರವು! ಸಹಾಯವಾಣಿ ಬಿಡುಗಡೆ

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ

Sugar Price: ಈರುಳ್ಳಿ ಬೆನ್ನಲ್ಲೇ ಇದೀಗ ಸಕ್ಕರೆ ಶಾಕ್: ಕೆಜಿಗೆ 65 ರೂ ದಾಟಿದ ದರ, ಗ್ರಾಹಕರ ಜೇಬಿಗೆ 'ಸಿಹಿ ಕಹಿ'!

2nd Test: ಬೌಂಡರಿ ಲೈನ್ ಬಳಿ ದುರ್ವರ್ತನೆ ತೋರಿದ್ದ ಲಂಕಾ ಆಟಗಾರ Prabath Jayasuriyaಗೆ ಬರೆ ಹಾಕಿದ ICC!