ನಾಡ ಕಚೇರಿ ಉದ್ಘಾಟಿಸಿದ ಸಚಿವ ಆರ್.ಅಶೋಕ 
ರಾಜ್ಯ

ರಾಜ್ಯದ ಎಲ್ಲಾ ಗ್ರಾಮ ಲೆಕ್ಕಿಗರಿಗೆ ಸರ್ಕಾರದಿಂದ ಟ್ಯಾಬ್ ವಿತರಣೆ: ಸಚಿವ ಆರ್.ಅಶೋಕ

ಚಿಕ್ಕಮಗಳೂರು ಜಿಲ್ಲಾ ಪ್ರವಾಸದಲ್ಲಿರುವ ಕಂದಾಯ ಸಚಿವ ಆರ್.ಅಶೋಕ, ವಸ್ತಾರೆ ಮತ್ತು ಅಂಬಳಿ ಹೋಬಳಿಯಲ್ಲಿ ಅಟಲ್ ಜನಸ್ನೇಹಿ ಕೇಂದ್ರದ ನೂತನ ಕಟ್ಟಡಗಳನ್ನು ಉದ್ಘಾಟಿಸಿ, ಹಕ್ಕುಪತ್ರ ಸೇರಿದಂತೆ ವಿವಿಧ ಸವಲತ್ತುಗಳನ್ನು ವಿತರಿಸಿದರು.

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲಾ ಪ್ರವಾಸದಲ್ಲಿರುವ ಕಂದಾಯ ಸಚಿವ ಆರ್.ಅಶೋಕ, ವಸ್ತಾರೆ ಮತ್ತು ಅಂಬಳಿ ಹೋಬಳಿಯಲ್ಲಿ ಅಟಲ್ ಜನಸ್ನೇಹಿ ಕೇಂದ್ರದ ನೂತನ ಕಟ್ಟಡಗಳನ್ನು ಉದ್ಘಾಟಿಸಿ, ಹಕ್ಕುಪತ್ರ ಸೇರಿದಂತೆ ವಿವಿಧ ಸವಲತ್ತುಗಳನ್ನು ವಿತರಿಸಿದರು.

ನಂತರ ಮಾತನಾಡಿದ ಸಚಿವರು, ರಾಜ್ಯದ ಎಲ್ಲಾ ಗ್ರಾಮ ಲೆಕ್ಕಿಗರಿಗೆ ರಾಜ್ಯ ಸರ್ಕಾರದಿಂದ ಟ್ಯಾಬ್ ಗಳನ್ನು ವಿತರಿಸಲಾಗುವುದು ಎಂದರು. ಗ್ರಾಮ ಲೆಕ್ಕಿಗರ ಕೆಲಸಗಳಲ್ಲಿ ಸರಳೀಕರಣ  ಮತ್ತು ವೇಗವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಸರ್ಕಾರ ಈ ತೀರ್ಮಾನ ಕೈಗೊಂಡಿದೆ ಎಂದು ತಿಳಿಸಿದರು.

ಕಂದಾಯ ಇಲಾಖೆಯ ಕಚೇರಿಗಳನ್ನು ಕಂಪ್ಯೂಟರೀಕರಣ ಮಾಡಲಾಗುವುದು, ಕಾಗದ ಬಳಕೆ ಕಡಿಮೆ ಮಾಡಿ ತಂತ್ರಜ್ಞಾನದ ಮೂಲಕ ಸಾರ್ವಜನಿಕ ಸೇವೆ ನೀಡಲು ಕ್ರಮ ಕೈಗೊಂಡಿರುವುದಾಗಿ ಅವರು ಹೇಳಿದರು.

ಇಡೀ ರಾಜ್ಯದಲ್ಲಿ ಡ್ರೋನ್ ಮೂಲಕ ಭೂಮಿ ಸರ್ವೇ ಮಾಡಲು ಸರ್ಕಾರ ಕ್ರಮ ಕೈಗೊಂಡಿರುವುದಾಗಿ ಸಚಿವರು ಇದೇ ವೇಳೆ ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

‘ಸ್ವಯಂ ರಕ್ಷಣೆ’ ಹೆಸರಿನಲ್ಲಿ ಇರಾನ್ ಕ್ಷಿಪಣಿ ಉಡಾವಣೆ ತಾಣಗಳ ಮೇಲೆ ಅಮೆರಿಕಾ ವಾಯುದಾಳಿ: ಟ್ರಂಪ್ ದ್ವಿಮುಖ ನಡೆ ವಿರುದ್ಧ ಟೀಕೆ, ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತೆ ಉದ್ವಿಗ್ನ..!

ಸತತ 4ನೇ ಬಾರಿ CNG ದರ ಏರಿಕೆ: ಕೆಜಿಗೆ 2 ರೂ. ಹೆಚ್ಚಳ, ವಾಹನ ಸವಾರರಿಗೆ ಶಾಕ್‌

ಗೃಹಲಕ್ಷ್ಮಿ ಯೋಜನೆಯಲ್ಲಿ 100 ಕೋಟಿ ರೂ.ದುರ್ಬಳಕೆ: ಫಲಾನುಭವಿಗಳ ಮರುಪರಿಶೀಲನೆಗೆ ಸರ್ಕಾರ ಚಿಂತನೆ..!

Main Tera Hero: ರಿರಿಲೀಸ್; ಗರ್ಲ್ ಫ್ರೆಂಡ್ ಗಾಗಿ ಅಭಿಮಾನಿಯ ಡ್ಯಾನ್ಸ್ , ವಿಡಿಯೋ ವೈರಲ್, ವರುಣ್ ಧವನ್ ಹೇಳಿದ್ದೇನು?

ವಿಜಯ್ ಸಿಎಂ ಆಗುತ್ತಿದ್ದಂತೆಯೇ ಆಂಧ್ರದಲ್ಲಿ ಗಂಭೀರವಾದ DCM ಪವನ್ ಕಲ್ಯಾಣ್ ! JSP ಕಾರ್ಯಕರ್ತರಿಗೆ ಖಡಕ್ ಸೂಚನೆ

SCROLL FOR NEXT