ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಮಾನ್ಯತಾ ಟೆಕ್ ಪಾರ್ಕ್ ಬಳಿ ದಂಪತಿಯಿಂದ 1 ಸಾವಿರ ರೂ. ಸುಲಿಗೆ: ಇಬ್ಬರು ಪೇದೆಗಳು ಸೇವೆಯಿಂದಲೇ ವಜಾ

ಡಿಸೆಂಬರ್ 8ರಂದು ಮಾನ್ಯತಾ ಟೆಕ್ ಪಾರ್ಕ್ ಬಳಿ ಮನೆಗೆ ನಡೆದುಕೊಂಡು ಹೋಗುತ್ತಿದ್ದ ದಂಪತಿಯನ್ನು ಸುಲಿಗೆ ಮಾಡಿದ್ದ ಇಬ್ಬರು ಪೊಲೀಸರನ್ನು ಸೇವೆಯಿಂದ ವಜಾಗೊಳಿಸಲಾಗಿದೆ.

ಬೆಂಗಳೂರು: ಡಿಸೆಂಬರ್ 8ರಂದು ಮಾನ್ಯತಾ ಟೆಕ್ ಪಾರ್ಕ್ ಬಳಿ ಮನೆಗೆ ನಡೆದುಕೊಂಡು ಹೋಗುತ್ತಿದ್ದ ದಂಪತಿಯನ್ನು ಸುಲಿಗೆ ಮಾಡಿದ್ದ ಇಬ್ಬರು ಪೊಲೀಸರನ್ನು ಸೇವೆಯಿಂದ ವಜಾಗೊಳಿಸಲಾಗಿದೆ. 

ಈಶಾನ್ಯ ವಿಭಾಗದ ಸಂಪಿಗೆಹಳ್ಳಿ ಪೊಲೀಸ್ ಠಾಣೆಯ ಹೆಡ್ ಕಾನ್‌ಸ್ಟೆಬಲ್ ರಾಜೇಶ್ ಮತ್ತು ಕಾನ್‌ಸ್ಟೆಬಲ್ ನಾಗೇಶ್ ರನ್ನು ವಜಾಗೊಳಿಸಲಾಗಿದೆ. 

ಘಟನೆ ಬೆಳಕಿಗೆ ಬಂದ ತಕ್ಷಣ ಇಲಾಖಾ ವಿಚಾರಣೆಗಾಗಿ ಇಬ್ಬರನ್ನು ಅಮಾನತುಗೊಳಿಸಲಾಗಿತ್ತು. ಇದೀಗ ಯುಪಿಐ ಮೂಲಕ ದಂಪತಿಯಿಂದ 1000 ರೂಪಾಯಿ ಸುಲಿಗೆ ಮಾಡಿರುವುದು ಇಲಾಖಾ ವಿಚಾರಣೆಯಲ್ಲಿ ಪತ್ತೆಯಾಗಿದ್ದು ಈ ಹಿನ್ನೆಲೆಯಲ್ಲಿ ಇಬ್ಬರೂ ಪೊಲೀಸರನ್ನು ಸೇವೆಯಿಂದ ವಜಾಗೊಳಿಸಲಾಗಿದೆ ಎಂದು ಡಿಸಿಪಿ(ಈಶಾನ್ಯ) ಅನೂಪ್ ಎ ಶೆಟ್ಟಿ TNIE ಗೆ ತಿಳಿಸಿದ್ದಾರೆ.

ಬೆಂಗಳೂರು ನಗರ ಪೊಲೀಸರಿಗೆ ಟ್ಯಾಗ್ ಮಾಡಿ ಸಂತ್ರಸ್ತ ಸುಲಿಗೆ ಕುರಿತು ಟ್ವೀಟ್ ಮಾಡಿದ್ದರು. ಇನ್ನು ಇದೀಗ ಇಬ್ಬರೂ ಪೊಲೀಸರನ್ನು ಅಮಾನತುಗೊಳಿಸಲಾಗಿದೆ. ಬೆಂಗಳೂರು ನಗರ ಪೊಲೀಸರು ತಮ್ಮ ಸಿಬ್ಬಂದಿಯಿಂದ ವಿಕೃತ ವರ್ತನೆಯನ್ನು ಸಹಿಸುವುದಿಲ್ಲ ಎಂದು ಬೆಂಗಳೂರು ನಗರ ಪೊಲೀಸರ ಅಧಿಕೃತ ಟ್ವೀಟ್ ಹ್ಯಾಂಡಲ್ ನಲ್ಲಿ ತಿಳಿಸಿದ್ದು ಈ ಮೂಲಕ ಇತರರಿಗೂ ಕಟು ಎಚ್ಚರಿಕೆ ನೀಡಿದೆ.

ಸಂತ್ರಸ್ತ ಕಾರ್ತಿಕ್ ಪಾತ್ರಿ, ಇಬ್ಬರು ಪೊಲೀಸರು ತಮ್ಮ ಮತ್ತು ಅವರ ಪತ್ನಿಯಿಂದ ಹೇಗೆ ಹಣ ಸುಲಿಗೆ ಮಾಡಿದ್ದಾರೆ ಎಂದು ಟ್ವೀಟ್ ಮಾಡಿದ್ದರು. ದಂಪತಿಗಳು ಸ್ನೇಹಿತನ ಮನೆಯಿಂದ ಮನೆಗೆ ಹಿಂದಿರುಗುತ್ತಿದ್ದಾಗ ಹೊಯ್ಸಳ ಗಸ್ತು ತಿರುಗುವ ವಾಹನದಲ್ಲಿದ್ದ ಪೊಲೀಸರು ಮಧ್ಯರಾತ್ರಿ ರಸ್ತೆಯಲ್ಲಿ ನಡೆದಾಡುವ ಉದ್ದೇಶವನ್ನು ಕೇಳುವ ಮೂಲಕ ಭೀಕರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಬೆದರಿಕೆ ಹಾಕಿದರು.

ದಂಪತಿಗಳು ತಮ್ಮ ಸಂಬಂಧ, ಕುಟುಂಬದ ವಿವರಗಳು ಮತ್ತು ಅವರು ಎಲ್ಲಿ ಕೆಲಸ ಮಾಡುತ್ತಿದ್ದರು ಎಂದು ಪೊಲೀಸರು ಕೇಳಿದ್ದರು ಎಂದು ಆರೋಪಿಸಿದ್ದರು. ರಾತ್ರಿ 11 ಗಂಟೆಯ ನಂತರ ರಸ್ತೆಯಲ್ಲಿ ಓಡಾಡಬಾರದು ಎಂದೆಲ್ಲ ಪೊಲೀಸರು ದಂಪತಿಗೆ ಹೇಳಿದ್ದರು. ಪಾತ್ರಿ ಪತ್ನಿ ಅಳಲು ತೋಡಿಕೊಳ್ಳುತ್ತಿದ್ದಂತೆ ಇಬ್ಬರು ಪೊಲೀಸರು ಆರಂಭದಲ್ಲಿ 3000 ರೂ.ಗೆ ಬೇಡಿಕೆಯಿಟ್ಟರು ಮತ್ತು ನಂತರ 1000 ರೂ.ಗೆ ಒಪ್ಪಿಕೊಂಡಿದ್ದರು.

ಈಗ ಸರ್ಕಾರಿ ಸೇವೆಯಿಂದ ವಜಾಗೊಂಡಿರುವ ಇಬ್ಬರು ಪೊಲೀಸರು ಬೇರೆ ಯಾವುದೇ ಸರ್ಕಾರಿ ಕೆಲಸಕ್ಕೆ ಅರ್ಜಿ ಸಲ್ಲಿಸಲು ಸಾಧ್ಯವಾಗುವುದಿಲ್ಲ. ಪೊಲೀಸ್ ಕ್ಲಿಯರೆನ್ಸ್ ಸರ್ಟಿಫಿಕೇಟ್ ಸಿಗದ ಕಾರಣ ಖಾಸಗಿ ವಲಯದಲ್ಲಿ ಉದ್ಯೋಗ ಪಡೆಯುವಲ್ಲಿಯೂ ಅವರಿಗೆ ತೊಂದರೆಯಾಗುತ್ತದೆ ಆಗಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT