ರಾಜ್ಯ

ಬಿಜೆಪಿ ರಾಜ್ಯ ಉಪಾಧ್ಯಕ್ಷರಾಗಿ ನೇಮಕ ಮಾಜಿ ಶಾಸಕ ನಂದೀಶ್ ರೆಡ್ಡಿ

Vishwanath S

ಬೆಂಗಳೂರು: ಮಾಜಿ ಶಾಸಕ ನಂದೀಶ್ ರೆಡ್ಡಿ ಅವರನ್ನು ರಾಜ್ಯ ಬಿಜೆಪಿ ಉಪಾಧ್ಯಕ್ಷರಾಗಿ ನೇಮಿಸಿ ಆದೇಶ ಹೊರಡಿಸಿದೆ.

ಕೆಆರ್ ಪುರಂ ಕ್ಷೇತ್ರದ ಮಾಜಿ ಶಾಸಕ ನಂದೀಶ್‌ ರೆಡ್ಡಿ ಇತ್ತೀಚೆಗೆ ಪಕ್ಷದಿಂದ ಅಂತರ ಕಾಯ್ದುಕೊಂಡಿದ್ದರು. ಹೀಗಾಗಿ, ಕಾಂಗ್ರೆಸ್ ಸೇರುವ ಬಗ್ಗೆ ಮನಸ್ಸು ಮಾಡಿದ್ದಾರೆಂಬ ಸುದ್ದಿ ಹರಿದಾಡಿತ್ತು. 

ಹೀಗಾಗಿ ನಂದೀಶ್ ರೆಡ್ಡಿಗೆ ಪಕ್ಷದಲ್ಲಿ ಪ್ರಮುಖ ಸ್ಥಾನ ಕೊಟ್ಟಿದೆ. ಆ ಮೂಲಕ ಅಸಮಾಧಾನಿತರನ್ನು ಸಮಾಧಾನ ಪಡಿಸಲು ಬಿಜೆಪಿ ಮುಂದಾಗಿದೆ.

SCROLL FOR NEXT