ಸಂಗ್ರಹ ಚಿತ್ರ 
ರಾಜ್ಯ

ಕಲಬುರಗಿ: ಚೂರಿ ಹಿಡಿದು ಸಾರ್ವಜನಿಕರ ಹೆದರಿಸುತ್ತಿದ್ದ ವ್ಯಕ್ತಿಯ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ ಪೊಲೀಸರು

ಸೂಪರ್‌ ಮಾರ್ಕೆಟ್‌ನಲ್ಲಿ ಚೂರಿ ಹಿಡಿದು ಜನರನ್ನು ಬೆದರಿಸುತ್ತಿದ್ದ ಕಿಡಿಗೇಡಿಯೊಬ್ಬನ ಕಾಲಿಗೆ ಗುಂಡು ಹಾರಿಸಿ ಬಂಧಿಸಿರುವ ಘಟನೆ ಕಲಬುರಗಿಯಲ್ಲಿ ಭಾನುವಾರ ರಾತ್ರಿ ನಡೆದಿದೆ.

ಕಲಬುರಗಿ: ಸೂಪರ್‌ ಮಾರ್ಕೆಟ್‌ನಲ್ಲಿ ಚೂರಿ ಹಿಡಿದು ಜನರನ್ನು ಬೆದರಿಸುತ್ತಿದ್ದ ಕಿಡಿಗೇಡಿಯೊಬ್ಬನ ಕಾಲಿಗೆ ಗುಂಡು ಹಾರಿಸಿ ಬಂಧಿಸಿರುವ ಘಟನೆ ಕಲಬುರಗಿಯಲ್ಲಿ ಭಾನುವಾರ ರಾತ್ರಿ ನಡೆದಿದೆ.

ಅಬ್ದುಲ್ ಜಾಫರ್‌ ಸಾಬ್ ಬಂಧಿತ ವ್ಯಕ್ತಿಯಾಗಿದ್ದಾನೆ. ಈತ ಸುಮಾರು ಒಂದು ಗಂಟೆ ಕಾಲ ಕೈಯಲ್ಲಿ ಚೂರಿ ಹಿಡಿದು ರಸ್ತೆಯಲ್ಲಿ ತಿರುಗಾಡಿ ಜನರಲ್ಲಿ ಭೀತಿ ಸೃಷ್ಟಿಸುತ್ತಿದ್ದ.

ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕಾಗಮಿಸಿದ ಪೊಲೀಸರು, ಶರಣಾಗುವಂತೆ ಸೂಚಿಸಿದ್ದರು. ಆದರೆ, ಆರೋಪಿ ಪೊಲೀಸರ ಮೇಲೆಯೇ ಹಲ್ಲೆಗೆ ಮುಂದಾಗಿದ್ದ.

ಹೀಗಾಗಿ, ಪಿಎಸ್‌ಐ ವಾಹಿದ್ ಕೊತ್ವಾಲ್ ಆರೋಪಿಯತ್ತ ಮೂರು ಸುತ್ತು ಗುಂಡು ಹಾರಿಸಿದರು. ಕೊನೆಯ ಗುಂಡು ಆತನ ಕಾಲಿಗೆ ಬಡಿದಿದ್ದರಿಂದ ಕೆಳಗೆ ಬಿದ್ದಿದ್ದಾನೆ. ಕೂಡಲೇ ಆರೋಪಿಯನ್ನು ಸುತ್ತುವರೆದ ಪೊಲೀಸರು ಆತನನ್ನು ಬಂಧನಕ್ಕೊಳಪಡಿಸಿದ್ದಾರೆ.

ಇದೀಗ ಆರೋಪಿಯನ್ನು ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಬ್ದುಲ್ ಜಾಫರ್ ಸಾಬ್ ಯಾರ ಮೇಲೂ ಹಲ್ಲೆ ಮಾಡಿಲ್ಲ. ಆದರೆ ಆತನ ಬೆದರಿಕೆ ಮತ್ತು ಚಾಕುವಿನಿಂದಾಗಿ ಜನರು ಆತಂಕ್ಕೊಳಗಾಗಿದ್ದು, ಕೆಲಕಾಲ ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

ಯಾವುದೇ ಸಿದ್ಧಾಂತ ಅಥವಾ ಅಜೆಂಡಾವನ್ನು ಪ್ರಚಾರ ಮಾಡುತ್ತಿಲ್ಲ; 'ಕಾಂತಾರ: ಚಾಪ್ಟರ್ 1' ಕುರಿತು ರಿಷಬ್ ಶೆಟ್ಟಿ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಹಾಸನಾಂಬ ದರ್ಶನಕ್ಕೆ ಭಕ್ತರ ಸಂಖ್ಯೆ ಹೆಚ್ಚಳ: ಎರಡೇ ದಿನಗಳಲ್ಲಿ ರೂ. 2.24 ಕೋಟಿ ಆದಾಯ, ಆರು ಸಿಬ್ಬಂದಿ ಅಮಾನತು!

SCROLL FOR NEXT