ಪ್ರಧಾನಿ ಮೋದಿ 
ರಾಜ್ಯ

ಪ್ರಬಲ ಭೂಕಂಪಕ್ಕೆ ತತ್ತರಿಸಿದ ಟರ್ಕಿ: ಸಂತ್ರಸ್ತರಿಗೆ ನೆರವು ನೀಡಲು ಭಾರತ ಸಿದ್ಧ ಎಂದ ಪ್ರಧಾನಿ ಮೋದಿ

ಪ್ರಬಲ ಭೂಕಂಪಕ್ಕೆ ಟರ್ಕಿ ತತ್ತರಿಸಿ ಹೋಗಿದ್ದು, ಭೂಕಂಪ ಸಂತ್ರಸ್ತರಿಗೆ ಅಗತ್ಯ ನೆರವು ನೀಡಲು ಭಾರತ ಸಿದ್ಧವಾಗಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸೋಮವಾರ ಹೇಳಿದ್ದಾರೆ.

ಬೆಂಗಳೂರು: ಪ್ರಬಲ ಭೂಕಂಪಕ್ಕೆ ಟರ್ಕಿ ತತ್ತರಿಸಿ ಹೋಗಿದ್ದು, ಭೂಕಂಪ ಸಂತ್ರಸ್ತರಿಗೆ ಅಗತ್ಯ ನೆರವು ನೀಡಲು ಭಾರತ ಸಿದ್ಧವಾಗಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸೋಮವಾರ ಹೇಳಿದ್ದಾರೆ.

ನೆಲಮಂಗಲ ಹತ್ತಿರದ ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರ( ಬಿಐಇಸಿ)ದಲ್ಲಿ ಭಾರತ ಇಂಧನ ಸಪ್ತಾಹ–2023ಕ್ಕೆ ಚಾಲನೆ ನೀಡಿದ ಮಾತನಾಡಿದ ಅವರು, ಟರ್ಕಿಯಲ್ಲಿ ಸಂಭವಿಸಿದ ವಿನಾಶಕಾರಿ ದುರಂತದ ಬಗ್ಗೆ ತೀವ್ರ ವಿಷಾದ ವ್ಯಕ್ತಪಡಿಸಿದರು.

ಭೂಕಂಪ ಸಂತ್ರಸ್ತರಿಗೆ ಭಾರತವು ಸಾಧ್ಯವಾಗುವ ಎಲ್ಲ ರೀತಿಯಲ್ಲಿಯೂ ನೆರವು ನೀಡಲಿದೆ ಎಂದು ಭರವಸೆ ನೀಡಿದರು.

ಟರ್ಕಿಯಲ್ಲಿ ಸಂಭವಿಸಿದ ವಿನಾಶಕಾರಿ ಭೂಕಂಪವನ್ನು ನಾವೆಲ್ಲರೂ ನೋಡುತ್ತಿದ್ದೇವೆ. ಹಲವಾರು ಜನರ ಸಾವು ಹಾಗೂ ಹಾನಿಗಳು ವರದಿಯಾಗಿವೆ. ಟರ್ಕಿಯ ಸಮೀಪವಿರುವ ದೇಶಗಳಲ್ಲಿಯೂ ಕೂಡ ಹಾನಿ ಸಂಭವಿಸಿದೆ. ಭೂಕಂಪ ಪೀಡಿತ ಸಂತ್ರಸ್ತರ ಜೊತೆಗೆ ಭಾರತದ 140 ಕೋಟಿ ಜನರ ಸಹಾನುಭೂತಿಯಿದೆ. ಭಾರತೀಯರು ಭೂಕಂಪ ಪೀಡಿತ ಜನರೊಂದಿಗೆ ಇದ್ದಾರೆ. ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲಾ ರೀತಿಯ ನೆರವು ನೀಡಲು ಭಾರತ ಸಿದ್ಧವಿದೆ ಎಂದು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT