ಜಗ್ಗಿ ವಾಸುದೇವ್ 
ರಾಜ್ಯ

ಕರ್ನಾಟಕ ಸರ್ಕಾರದಿಂದ ಯಾವುದೇ ಹಣ, ಜಮೀನು ಪಡೆದಿಲ್ಲ: ಇಶಾ ಫೌಂಡೇಶನ್

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ತನ್ನ ಯೋಜನೆಗಾಗಿ ಕರ್ನಾಟಕ ಸರ್ಕಾರದಿಂದ ಯಾವುದೇ ಹಣ ಅಥವಾ ಭೂಮಿಯನ್ನು ಪಡೆದಿಲ್ಲ ಎಂದು ಇಶಾ ಫೌಂಡೇಶನ್ ಸೋಮವಾರ ಸ್ಪಷ್ಟಪಡಿಸಿದೆ.

ಬೆಂಗಳೂರು: ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ತನ್ನ ಯೋಜನೆಗಾಗಿ ಕರ್ನಾಟಕ ಸರ್ಕಾರದಿಂದ ಯಾವುದೇ ಹಣ ಅಥವಾ ಭೂಮಿಯನ್ನು ಪಡೆದಿಲ್ಲ ಎಂದು ಇಶಾ ಫೌಂಡೇಶನ್ ಸೋಮವಾರ ಸ್ಪಷ್ಟಪಡಿಸಿದೆ.
  
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ಅರಣ್ಯ ಇಲಾಖೆಗೆ ಮಣ್ಣಿನ ಸಂರಕ್ಷಣೆಗೆ ಒತ್ತು ನೀಡಿ ರಾಜ್ಯ ಪರಿಸರ ಚಟುವಟಿಕೆಗಳಿಗೆ 100 ಕೋಟಿ ರೂ. ಮೀಸಲಿಟ್ಟಿರುವುದಾಗಿ ಘೋಷಿಸಿದ್ದರು. ಇದನ್ನು ಮಾಧ್ಯಮಗಳು ತಪ್ಪಾಗಿ ವರದಿ ಮಾಡಿದ್ದು, ಇಶಾ ಫೌಂಡೇಶನ್ ಅಥವಾ ಸದ್ಗುರು ಯಾವುದೇ ಹಣ ಪಡೆದಿಲ್ಲ ಎಂದು ಹೇಳಿದೆ.

"ಈಶಾ ಫೌಂಡೇಶನ್ ಅಥವಾ ಸದ್ಗುರುಗಳು ಈಗಿನ ಸರ್ಕಾರದಿಂದ ಅಥವಾ ಕರ್ನಾಟಕದ ಹಿಂದಿನ ಸರ್ಕಾರಗಳಿಂದ ಯಾವುದೇ ಹಣವನ್ನು ಪಡೆದಿಲ್ಲ. ಆಧ್ಯಾತ್ಮಿಕ ಗುರು ಸದ್ಗುರು ಜಗ್ಗಿ ಅವರು ಸ್ಥಾಪಿಸಿದ ಇಶಾ ಫೌಂಡೇಶನ್ ರಾಜ್ಯ ಸರ್ಕಾರದೊಂದಿಗೆ ನೇರವಾಗಿ ಅಥವಾ ಪರೋಕ್ಷವಾಗಿ ಯಾವುದೇ ಹಣಕಾಸಿನ ವಹಿವಾಟುಗಳಲ್ಲಿ ಭಾಗಿಯಾಗಿಲ್ಲ ಎಂದು ಇಶಾ ಫೌಂಡೇಶನ್ ಪ್ರಕಟಣೆಯಲ್ಲಿ ತಿಳಿಸಿದೆ.

"ಚಿಕ್ಕಬಳ್ಳಾಪುರದ ಸದ್ಗುರು ಸನ್ನಿಧಿಯಲ್ಲಿರುವ ಎಲ್ಲಾ ಜಮೀನನ್ನು ಮೂಲ ಮಾಲೀಕರಿಂದ ಮಾರುಕಟ್ಟೆ ಮೌಲ್ಯ ನೀಡಿ ಖರೀದಿಸಲಾಗಿದೆ" ಎಂದು ಇಶಾ ಫೌಂಡೇಶನ್ ಹೇಳಿದೆ.

ಜನವರಿ 15 ರಂದು ಉದ್ಘಾಟನೆಯಾದ ಆದಿಯೋಗಿ ಪ್ರತಿಮೆಯು ನಂದಿ ಬೆಟ್ಟದಿಂದ 31 ಕಿಮೀ ದೂರದಲ್ಲಿದೆ ಎಂದು ಫೌಂಡೇಶನ್ ತಿಳಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಗೆ ರೂ.10 ಕೋಟಿ: ಸುರಂಗ ರಸ್ತೆ ಯೋಜನೆಯಿಂದ 'ಸಸ್ಯೋದ್ಯಾನ'ದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ- ಡಿಕೆ ಶಿವಕುಮಾರ್

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು; Video!

SCROLL FOR NEXT