ಜಗ್ಗಿ ವಾಸುದೇವ್ 
ರಾಜ್ಯ

ಕರ್ನಾಟಕ ಸರ್ಕಾರದಿಂದ ಯಾವುದೇ ಹಣ, ಜಮೀನು ಪಡೆದಿಲ್ಲ: ಇಶಾ ಫೌಂಡೇಶನ್

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ತನ್ನ ಯೋಜನೆಗಾಗಿ ಕರ್ನಾಟಕ ಸರ್ಕಾರದಿಂದ ಯಾವುದೇ ಹಣ ಅಥವಾ ಭೂಮಿಯನ್ನು ಪಡೆದಿಲ್ಲ ಎಂದು ಇಶಾ ಫೌಂಡೇಶನ್ ಸೋಮವಾರ ಸ್ಪಷ್ಟಪಡಿಸಿದೆ.

ಬೆಂಗಳೂರು: ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ತನ್ನ ಯೋಜನೆಗಾಗಿ ಕರ್ನಾಟಕ ಸರ್ಕಾರದಿಂದ ಯಾವುದೇ ಹಣ ಅಥವಾ ಭೂಮಿಯನ್ನು ಪಡೆದಿಲ್ಲ ಎಂದು ಇಶಾ ಫೌಂಡೇಶನ್ ಸೋಮವಾರ ಸ್ಪಷ್ಟಪಡಿಸಿದೆ.
  
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ಅರಣ್ಯ ಇಲಾಖೆಗೆ ಮಣ್ಣಿನ ಸಂರಕ್ಷಣೆಗೆ ಒತ್ತು ನೀಡಿ ರಾಜ್ಯ ಪರಿಸರ ಚಟುವಟಿಕೆಗಳಿಗೆ 100 ಕೋಟಿ ರೂ. ಮೀಸಲಿಟ್ಟಿರುವುದಾಗಿ ಘೋಷಿಸಿದ್ದರು. ಇದನ್ನು ಮಾಧ್ಯಮಗಳು ತಪ್ಪಾಗಿ ವರದಿ ಮಾಡಿದ್ದು, ಇಶಾ ಫೌಂಡೇಶನ್ ಅಥವಾ ಸದ್ಗುರು ಯಾವುದೇ ಹಣ ಪಡೆದಿಲ್ಲ ಎಂದು ಹೇಳಿದೆ.

"ಈಶಾ ಫೌಂಡೇಶನ್ ಅಥವಾ ಸದ್ಗುರುಗಳು ಈಗಿನ ಸರ್ಕಾರದಿಂದ ಅಥವಾ ಕರ್ನಾಟಕದ ಹಿಂದಿನ ಸರ್ಕಾರಗಳಿಂದ ಯಾವುದೇ ಹಣವನ್ನು ಪಡೆದಿಲ್ಲ. ಆಧ್ಯಾತ್ಮಿಕ ಗುರು ಸದ್ಗುರು ಜಗ್ಗಿ ಅವರು ಸ್ಥಾಪಿಸಿದ ಇಶಾ ಫೌಂಡೇಶನ್ ರಾಜ್ಯ ಸರ್ಕಾರದೊಂದಿಗೆ ನೇರವಾಗಿ ಅಥವಾ ಪರೋಕ್ಷವಾಗಿ ಯಾವುದೇ ಹಣಕಾಸಿನ ವಹಿವಾಟುಗಳಲ್ಲಿ ಭಾಗಿಯಾಗಿಲ್ಲ ಎಂದು ಇಶಾ ಫೌಂಡೇಶನ್ ಪ್ರಕಟಣೆಯಲ್ಲಿ ತಿಳಿಸಿದೆ.

"ಚಿಕ್ಕಬಳ್ಳಾಪುರದ ಸದ್ಗುರು ಸನ್ನಿಧಿಯಲ್ಲಿರುವ ಎಲ್ಲಾ ಜಮೀನನ್ನು ಮೂಲ ಮಾಲೀಕರಿಂದ ಮಾರುಕಟ್ಟೆ ಮೌಲ್ಯ ನೀಡಿ ಖರೀದಿಸಲಾಗಿದೆ" ಎಂದು ಇಶಾ ಫೌಂಡೇಶನ್ ಹೇಳಿದೆ.

ಜನವರಿ 15 ರಂದು ಉದ್ಘಾಟನೆಯಾದ ಆದಿಯೋಗಿ ಪ್ರತಿಮೆಯು ನಂದಿ ಬೆಟ್ಟದಿಂದ 31 ಕಿಮೀ ದೂರದಲ್ಲಿದೆ ಎಂದು ಫೌಂಡೇಶನ್ ತಿಳಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT