ಬೆಂಗಳೂರು ವಿಮಾನ ನಿಲ್ದಾಣ 
ರಾಜ್ಯ

ಸಿಐಎಸ್ಎಫ್ ಅಧಿಕಾರಿ ಮೇಲೆ ಹಲ್ಲೆ ನಡೆಸಿ, ಬೆಂಗಳೂರು ವಿಮಾನ ನಿಲ್ದಾಣ ಸ್ಫೋಟಿಸುವುದಾಗಿ ಬೆದರಿಕೆ: ಮಹಿಳೆ ಬಂಧನ

ಕೋಲ್ಕತ್ತಾಗೆ ತೆರಳುವ ವಿಮಾನ ತಪ್ಪಿದ ನಂತರ ಭದ್ರತಾ ಅಧಿಕಾರಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಕೇರಳದ ಮಹಿಳೆ, ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್ ಹಾಕುವುದಾಗಿ ಬೆದರಿಕೆ ಹಾಕಿದ ಘಟನೆ ಕಳೆದ ಶುಕ್ರವಾರ ನಡೆದಿದೆ. 

ಬೆಂಗಳೂರು: ಕೋಲ್ಕತ್ತಾಗೆ ತೆರಳುವ ವಿಮಾನ ತಪ್ಪಿದ ನಂತರ ಭದ್ರತಾ ಅಧಿಕಾರಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಕೇರಳದ ಮಹಿಳೆ, ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್ ಹಾಕುವುದಾಗಿ ಬೆದರಿಕೆ ಹಾಕಿದ ಘಟನೆ ಕಳೆದ ಶುಕ್ರವಾರ ನಡೆದಿದೆ. 

ಸಿಐಎಸ್ಎಫ್ ಅಧಿಕಾರಿ ಮೇಲೆ ಹಲ್ಲೆ ನಡೆಸಿ, ಬೆದರಿಕೆ ಹಾಕಿದ ಮಹಿಳೆಯನ್ನು ಬೆಂಗಳೂರು ಇಂಟರ್‌ನ್ಯಾಶನಲ್ ಏರ್‌ಪೋರ್ಟ್ ಲಿಮಿಟೆಡ್(ಬಿಐಎಎಲ್) ಪೊಲೀಸರು ಬಂಧಿಸಿದ್ದಾರೆ. 

ಮಹಿಳೆ ವಿರುದ್ಧ ಕ್ರಿಮಿನಲ್ ಬೆದರಿಕೆ(ಸೆಕ್ಷನ್ 505), ಹಲ್ಲೆ(ಸೆಕ್ಷನ್ 323) ಮತ್ತು ಸಾರ್ವಜನಿಕ ಸೇವೆಗೆ ಅಡ್ಡಿಪಡಿಸಿದ(ಸೆಕ್ಷನ್ 353) ಸೆಕ್ಷನ್‌ಗಳ ಅಡಿಯಲ್ಲಿ ಕೇಸ್ ದಾಖಲಿಸಲಾಗಿದೆ.

ಬಂಧಿತ ಮಹಿಳೆಯನ್ನು ಕೋಝಿಕ್ಕೋಡ್ ಮೂಲದ ಮಾನಸಿ ಸತೀಬೈನು(31) ಎಂದು ಗುರುತಿಸಲಾಗಿದ್ದು, ಗೇಟ್ ನಂ. 6 ರಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಿಐಎಸ್ಎಫ್ ಅಧಿಕಾರಿ ಸಂದೀಪ್ ಸಿಂಗ್ ಅವರ ಮೇಲೆ ಹಲ್ಲೆ ನಡೆಸಿದ್ದಾರೆ.

ಪೊಲೀಸರು ದಾಖಲಿಸಿದ ಎಫ್‌ಐಆರ್ ಪ್ರತಿ ಪ್ರಕಾರ, ಫೆಬ್ರವರಿ 3 ರಂದು ಬೆಳಗ್ಗೆ 8.15 ರಿಂದ 8.30 ರ ನಡುವೆ ಈ ಘಟನೆ ನಡೆದಿದೆ. ಕೋಲ್ಕತ್ತಾಗೆ ತೆರಳಲು ತುರ್ತಾಗಿ ಇಂಡಿಗೋ ವಿಮಾನ(6E 6445) ಹತ್ತಲು ಅನುಮತಿ ನೀಡಬೇಕೆಂದು ಮಹಿಳೆ ಒತ್ತಾಯಿಸಿದ್ದಾರೆ.

ವಿಮಾನ ಹತ್ತಲು ಬಿಡದಿದ್ದರೆ ವಿಮಾನ ನಿಲ್ದಾಣಕ್ಕೆ ಬಾಂಬ್ ಹಾಕುವುದಾಗಿ ಸತೀಬೈನು ಬೆದರಿಕೆ ಹಾಕಿದ್ದಾಳೆ. ಸುತ್ತಮುತ್ತಲಿನ ಸಿಐಎಸ್‌ಎಫ್ ಸಿಬ್ಬಂದಿ ಮಹಿಳೆಯನ್ನು ಸಮಾಧಾನ ಪಡಿಸಲು ಮುಂದಾದಾಗ, ಸಿಂಗ್‌ ಅವರ ಕಾಲರ್‌ ಹಿಡಿದು ಹಲ್ಲೆ ನಡೆಸಿದ್ದಾಳೆ ಎಂದು ಆರೋಪಿಸಲಾಗಿದೆ.

ವಿಮಾನ ನಿಲ್ದಾಣದಲ್ಲಿ ಬಾಂಬ್‌ ಇಟ್ಟಿದ್ದು, ತಪ್ಪಿಸಿಕೊಳ್ಳಿ ಮತ್ತು ಪ್ರಾಣಾಪಾಯದಿಂದ ಪಾರಾಗಿ ಎಂದು ಇತರ ಪ್ರಯಾಣಿಕರಿಗೆ ಮಹಿಳೆ ಎಚ್ಚರಿಕೆ ನೀಡಿದ್ದಾಳೆ ಎಂದು ಎಫ್‌ಐಆರ್ ಪ್ರತಿಯಲ್ಲಿ ತಿಳಿಸಲಾಗಿದೆ.

ಘಟನೆ ಬಳಿಕ ಸಿಂಗ್ ವಿಮಾನ ನಿಲ್ದಾಣ ಪೊಲೀಸರಿಗೆ ದೂರು ನೀಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT