ಸಿದ್ದರಾಮಯ್ಯ-ಸುಬುಧೇಂದ್ರ ತೀರ್ಥ ಸ್ವಾಮೀಜಿ 
ರಾಜ್ಯ

ತಾಯಿ ಅಂದಮೇಲೆ ನೀನು ಆಕೆಯ ಸಂತಾನವಲ್ಲವೇ; ಹಿಂದು ಅಂದಮೇಲೆ ಹಿಂದುತ್ವವು ಅಷ್ಟೇ: ಸಿದ್ದುಗೆ ಮಂತ್ರಾಲಯ ಶ್ರೀ ತಿರುಗೇಟು

ನಾನು ಹಿಂದು ಆದರೆ ಹಿಂದುತ್ವವನ್ನು ಒಪ್ಪುವುದಿಲ್ಲ ಎಂದು ಹೇಳಿಕೆ ನೀಡಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಮಂತ್ರಾಲಯ ಮಠದ ಶ್ರೀ ಸುಬುಧೇಂದ್ರ ತೀರ್ಥ ಸ್ವಾಮೀಜಿಗಳು ತಿರುಗೇಟು ನೀಡಿದ್ದಾರೆ.

ಬಾಗಲಕೋಟೆ: ನಾನು ಹಿಂದು ಆದರೆ ಹಿಂದುತ್ವವನ್ನು ಒಪ್ಪುವುದಿಲ್ಲ ಎಂದು ಹೇಳಿಕೆ ನೀಡಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಮಂತ್ರಾಲಯ ಮಠದ ಶ್ರೀ ಸುಬುಧೇಂದ್ರ ತೀರ್ಥ ಸ್ವಾಮೀಜಿಗಳು ತಿರುಗೇಟು ನೀಡಿದ್ದಾರೆ.

ಹಿಂದು ಅಂದ ಮೇಲೆ ಹಿಂದುತ್ವವನ್ನು ಗೌರವಿಸಲೇಬೇಕು. ಹಿಂದುಗಳಲ್ಲಿ ಇರುವಂತಹದ್ದು ಹಿಂದುತ್ವ. ಹೀಗಾಗಿ ಹಿಂದೂಗಳೆಲ್ಲರೂ ಹಿಂದುತ್ವವನ್ನು ಗೌರವಿಸಲೇಬೇಕು ಎಂದು ಹೇಳಿರುವ ಮಂತ್ರಾಲಯ ಶ್ರೀಗಳು, ತಾಯಿ ಅಂದಮೇಲೆ ಅವಳಿಗೆ ನೀವು ಸಂತಾನ ಅಂತ ಆಯ್ತಲ್ಲ ಎಂದು ಸಿದ್ದರಾಮಯ್ಯಗೆ ತೀಕ್ಷ್ಣವಾಗಿ ಹೇಳಿದ್ದಾರೆ. 

ನಾವು ಹಿಂದು ಎಂದ ಮೇಲೆ ಹಿಂದುತ್ವವನ್ನು ಗೌರವಿಸಲೇಬೇಕು. ಒಂದೇ ಕಡೆ ನನ್ನ ತಾಯಿ ಅನ್ನೋದು, ಅವಳು ನಿಸ್ಸಾಂತಾನ ಉಳ್ಳುವಳು ಅನ್ನೋದು ಎಷ್ಟು ಅಪಹಾಸ್ಯ. ತಾಯಿ ಅಂದಮೇಲೆ ಅವಳಿಗೆ ಸಂತಾನ ನೀನು ಅಂತಾ ಆಯಿತಲ್ವಾ? ಎಂದು ಮಾರ್ಮಿಕವಾಗಿ ಹೇಳಿದ್ದಾರೆ.

ಸಿದ್ದರಾಮಯ್ಯ ಅವರ ದ್ವಂದ್ವ ಹೇಳಿಕೆಯಲ್ಲಿ ಅರ್ಥವಿಲ್ಲ. ಹಿಂದುತ್ವ ವಿಚಾರದಲ್ಲಿ ಅವರಿಗೆ ಸ್ವಲ್ಪ ಭೇದ ಇರಬಹುದು. ಅದನ್ನು ವಿಚಾರ ವಿನಿಮಯ ಮಾಡಿಕೊಂಡು ಪರಿಹರಿಸಿಕೊಳ್ಳುವುದು ಉತ್ತಮ. ಹಿಂದು ಎಂದು ಹೇಳಿಕೊಳ್ಳುತ್ತಾ ಹಿಂದುತ್ವ ವಿರೋಧಿಸುತ್ತೇನೆ ಎನ್ನುವುದು ಅರ್ಥಹೀನ ಎಂದು ಸ್ವಾಮೀಜಿ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT