ಸಂಗ್ರಹ ಚಿತ್ರ 
ರಾಜ್ಯ

ಸಂಬಳ ನೀಡದ್ದಕ್ಕೆ ಖಿನ್ನತೆಗೊಳಗಾಗಿ ವ್ಯಕ್ತಿ ಆತ್ಮಹತ್ಯೆ: ರಹಸ್ಯವಾಗಿ ಶವ ಹೂತಿದ್ದ ಇಬ್ಬರ ಬಂಧನ

ಸಂಬಳ ನೀಡದ್ದಕ್ಕೆ ಖಿನ್ನತೆಗೊಳಗಾಗಿ ನೇಣು ಬಿಗಿದುಕೊಂಡು ಮೃತಪಟ್ಟಿದ್ದ ವ್ಯಕ್ತಿಯ ಮೃತದೇಹವನ್ನು ಯಾರಿಗೂ ತಿಳಿಯದಂತೆ ಸಮಾಧಿ ಮಾಡಿ ಸಾಕ್ಷ್ಯ ನಾಶ ಮಾಡಿದ್ದ ಇಬ್ಬರು ಆರೋಪಿಗಳನ್ನು ಕಾಡುಗೋಡಿ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.

ಬೆಂಗಳೂರು: ಸಂಬಳ ನೀಡದ್ದಕ್ಕೆ ಖಿನ್ನತೆಗೊಳಗಾಗಿ ನೇಣು ಬಿಗಿದುಕೊಂಡು ಮೃತಪಟ್ಟಿದ್ದ ವ್ಯಕ್ತಿಯ ಮೃತದೇಹವನ್ನು ಯಾರಿಗೂ ತಿಳಿಯದಂತೆ ಸಮಾಧಿ ಮಾಡಿ ಸಾಕ್ಷ್ಯ ನಾಶ ಮಾಡಿದ್ದ ಇಬ್ಬರು ಆರೋಪಿಗಳನ್ನು ಕಾಡುಗೋಡಿ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.

ಪಶ್ಚಿಮ ಬಂಗಾಳ ಮೂಲದ ಮೊಹಮ್ಮದ್ ರಂಜಾನ್ (40) ಮತ್ತು ರಸೆಲ್ (24) ಬಂಧಿತ ವ್ಯಕ್ತಿಯಾಗಿದ್ದಾರೆ. ಜ.14ರಂದು ಸೀಗೇಹಳ್ಳಿ ಹೆಚ್.ಪಿ.ಪೆಟ್ರೋಲ್ ಬಂಕ್ ಹಿಂಭಾಗದ ಕಾರ್ಮಿಕರ ಶೆಟ್ ನಲ್ಲಿ ಪಶ್ಚಿಮ ಬಂಗಾಳ ಮೂಲಕ ಎಂ.ಡಿ.ರಸೂಲ್ ಹವಾಲ್ದಾರ್ (30) ಆತ್ಮಹತ್ಯೆ ಮಾಡಿಕೊಂಡಿದ್ದ. ಆರೋಪಿಗಳು ಈ ವಿಚಾರವನ್ನು ಯಾರಿಗೂ ಹೇಳದಂತೆ ಇತರೆ ಕಾರ್ಮಿಕರಿಗೆ ಬೆದರಿಸಿ, ಮೃತದೇಹವನ್ನು ಖಾಜಿಸೊನ್ನೇನಹಳ್ಳಿಯ ಖಬರಸ್ತಾನದಲ್ಲಿ ಹೂತಿದ್ದರು.

ಈ ಸಂಬಂಧ ಮೃತ ಎಂ.ಡಿ.ರಸೂಲ್ ಸಂಬಂಧಿ ಆಚಿಮನ್ ಶೇಖ್ ನೀಡಿದ ದೂರಿನ ಮೇರೆಗೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ನ್ಯಾಯಾಲಯದ ಅನುಮತಿ ಮೇರೆಗೆ ಫೆಬ್ರವರಿ 4ರಂದು ಶವವನ್ನು ಹೊರತೆಗೆಯಲಾಗಿದೆ ಎಂದು ತಿಳಿದುಬಂದಿದೆ.

ಮೃತ ವ್ಯಕ್ತಿ ಕಳೆದ 4 ವರ್ಷಗಳಿಂದ ಆರೋಪಿ ರಂಜಾನ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ. ಎರಡು ತಿಂಗಳಿನಿಂದ ರಂಜಾನ್ ವೇತನವನ್ನು ನೀಡಿಲ್ಲ. ವೇತನ ಕೇಳಿದರೆ ಹಲ್ಲೆ ನಡೆಸಿ ಗದರಿಸಿದ್ದಾರೆ. ಇದರಿಂದ ಮನನೊಂದು ಶೆಡ್ ನಲ್ಲಿ ನೇಣು ಬಿಗಿದುಕೊಂಡು ರಸೂಲ್ ಆತ್ಮಹತ್ಯೆಗೆ ಶರಣಾಗಿದ್ದಾನೆಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

Watch| Traffic Fine ಗೆ ಶೇ.50 ರಷ್ಟು ರಿಯಾಯಿತಿ; ವಂಚಕರಿಂದ ಮೋಸಹೋದ ಟೆಕ್ಕಿ!; Dharmasthala Case: ಮಹೇಶ್ ಶೆಟ್ಟಿ ತಿಮರೋಡಿ ಮನೆಯಲ್ಲಿ SIT ದಾಳಿ; ಮೊಬೈಲ್ ವಶಕ್ಕೆ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT