ಟ್ರಾಫಿಕ್ ದಂಡ 
ರಾಜ್ಯ

ಶೇ.50 ರಿಯಾಯಿತಿ: 50 ಕೋಟಿ ರೂ. ದಾಟಿದ ಟ್ರಾಫಿಕ್ ದಂಡ ಸಂಗ್ರಹ

ಸಂಚಾರ ನಿಯಮ ಉಲ್ಲಂಘನೆ ಸಂಬಂಧ ದಂಡ ಪಾವತಿಸುವವರಿಗೆ ಶೇ.50ರಷ್ಟು ರಿಯಾಯಿತಿ ಯೋಜನೆಗೆ ಅಭೂತಪೂರ್ವ ಪ್ರತಿಕ್ರಿಯೆ ಲಭಿಸಿದ್ದು, ರಿಯಾಯಿತಿಯ ಆರನೇ ದಿನಕ್ಕೆ ದಂಡ ಸಂಗ್ರಹ 45 ಕೋಟಿ ರೂ ದಾಟಿದೆ ಎನ್ನಲಾಗಿದೆ.

ಬೆಂಗಳೂರು: ಸಂಚಾರ ನಿಯಮ ಉಲ್ಲಂಘನೆ ಸಂಬಂಧ ದಂಡ ಪಾವತಿಸುವವರಿಗೆ ಶೇ. 50ರಷ್ಟು ರಿಯಾಯಿತಿ ಯೋಜನೆಗೆ ಅಭೂತಪೂರ್ವ ಪ್ರತಿಕ್ರಿಯೆ ಲಭಿಸಿದ್ದು, ರಿಯಾಯಿತಿಯ ಆರನೇ ದಿನಕ್ಕೆ ದಂಡ ಸಂಗ್ರಹ 45 ಕೋಟಿ ರೂ ದಾಟಿದೆ ಎನ್ನಲಾಗಿದೆ.

ವಾಹನಗಳ ಸಂಚಾರ ನಿಯಮ ಉಲ್ಲಂಘನೆಯ ಸಂಬಂಧಿಸಿದಂತೆ ಇಲ್ಲಿಯವರೆಗೆ 45 ಕೋಟಿಗೂ ಹೆಚ್ಚು ದಂಡ ಸಂಗ್ರಹಗೊಂಡಿದೆ. ಕಳೆದ ಫೆ.3ರಂದು ಈ ವಿನಾಯಿತಿ ಜಾರಿಗೆ ಬಂದಿದ್ದು, ಮೊದಲ ದಿನವೇ5,61,45,000 ರೂಪಾಯಿಗೂ ಅಧಿಕ ದಂಡದ ಮೊತ್ತ ಸಂಗ್ರಹವಾಗಿತ್ತು. ಎರಡನೇ ದಿನ ಬರೋಬ್ಬರಿ 6,80,72,500 ರೂ. ದಂಡ ಸಂಗ್ರಹವಾಗಿತ್ತು. ಮೂರನೇ ದಿನ 7,49,94,870 ರೂಗಳು ಸಂಗ್ರಹವಾದರೆ, 4ನೇ ದಿನ 9,57,12,420, 5ನೇ ದಿನವಾದ ನಿನ್ನೆ 8,13,12,200 ಸಂಗ್ರಹಗೊಂಡು ಒಟ್ಟು41,20,89,231 ರೂ ಸಂಗ್ರಹವಾಗಿ 14,71,231 ಪ್ರಕರಣಗಳು ಇತ್ಯರ್ಥಗೊಂಡಿದೆ.

ಇಂದು ಬೆಳಿಗ್ಗೆಯಿಂದ ಮತ್ತೆ ದಂಡ ಪಾವತಿ ಬಿರುಸಿನಿಂದ ನಡೆಯುತ್ತಿದ್ದು ಅದು 45 ಕೋಟಿ ದಾಟಿದೆ. ಸಂಚಾರ ನಿಯಮ ಉಲ್ಲಂಘನೆಯ ರಿಯಾಯಿತಿ ದಂಡ ಪಾವತಿಸುವವರ ಸಂಖ್ಯೆಯಲ್ಲಿ ಇಂದು ಹೆಚ್ಚಳ ಕಂಡುಬಂದಿದ್ದು ಸಂಜೆ ವೇಳೆಗೆ 45 ಕೋಟಿ ಗೂ ಹೆಚ್ಚು ದಂಡ ಸಂಗ್ರಹಗೊಂಡಿದೆ. ನಗರದ ಸಂಚಾರ ಪೊಲೀಸ್ ಠಾಣೆಗಳು ಮಾತ್ರವಲ್ಲದೆ, ಇನ್ಫೆಂಟ್ರಿ ರಸ್ತೆಯಲ್ಲಿರುವ ಸಂಚಾರ ನಿರ್ವಹಣಾ ಕೇಂದ್ರ(ಟಿಎಂಸಿ)ದಲ್ಲಿ ಕೌಂಟರ್ ತೆರೆದು ಬಾಕಿ ದಂಡದ ಮೊತ್ತ ಪಾವತಿಗೆ ಅವಕಾಶ ಕಲ್ಪಿಸಲಾಗಿರುವುದನ್ನು ಸಾರ್ವಜನಿಕರು ಸದುಪಯೋಗ ಪಡಿಸಿಕೊಳ್ಳ ತೊಡಗಿರುವುದರಿಂದ ದಂಡ ಪಾವತಿಗೆ ಭಾರಿ ಪ್ರಮಾಣದ ಜನಸಂದಣಿ ಉಂಟಾಗಿದೆ.

ಹೈಕೋರ್ಟ್ ನ್ಯಾಯಾಧೀಶರು ಮತ್ತು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಅಧ್ಯಕ್ಷ ನ್ಯಾ.ಬಿ. ವೀರಪ್ಪ ಅವರ ಅಧ್ಯಕ್ಷತೆಯಲ್ಲಿ ಜ.27ರಂದು ನಡೆದ ಸಭೆಯಲ್ಲಿ ರಾಜ್ಯ ಸಾರಿಗೆ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ, ಬಾಕಿ ಇರುವ ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ವಿನಾಯಿತಿ ನೀಡುವಂತೆ ಚರ್ಚೆ ನಡೆಸಿದ್ದರು. ಇದಕ್ಕೆ ರಾಜ್ಯ ಸಾರಿಗೆ ಮತ್ತು ರಸ್ತೆ ಸುರಕ್ಷತೆ ಆಯುಕ್ತರು ಗ್ರೀನ್ ಸಿಗ್ನಲ್ ತೋರಿದ್ದರು. ಇದರ ಮೇರೆಗೆ ಕಾನೂನು ಸೇವೆಗಳ ಪ್ರಾಧಿಕಾರ, ರಾಜ್ಯಾದ್ಯಂತ ಸಂಚಾರ ಪೊಲೀಸರು ದಾಖಲಿಸಿರುವ ಸಂಚಾರ ಉಲ್ಲಂಘನೆ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇ.50 ವಿನಾಯಿತಿ ನೀಡುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದರು.

ಈ ಬಗ್ಗೆ ಕಾನೂನು ಇಲಾಖೆ ಅಧಿಕಾರಿಗಳ ಒಪ್ಪಿಗೆ ಪಡೆದ ಸಾರಿಗೆ ಇಲಾಖೆ, ಶೇ.50 ವಿನಾಯಿತಿ ನೀಡಿದೆ. ಹಲವು ದಿನಗಳಿಂದ ಬಾಕಿ ಉಳಿಸಿಕೊಂಡಿರುವ ಸಂಚಾರ ದಂಡವನ್ನು ಫೆ.11ರ ಒಳಗೆ ಪಾವತಿಸಿದರೇ ಶೇ.50 ವಿನಾಯಿತಿ ಸಿಗಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

SCROLL FOR NEXT