ಅಂಬರೀಷ್ 
ರಾಜ್ಯ

‘ನನ್ ಮಗನೆ ಕರೆಕ್ಟ್ ಆಗಿ ಹೆಸರು ಇಟ್ಟಿದಿಯಾ’ ಎನ್ನುತ್ತಿದ್ದರು ಅಂಬರೀಷ್': ರೇಸ್ ಕೋರ್ಸ್ ರಸ್ತೆಗೆ ರೆಬಲ್ ಸ್ಟಾರ್ ಹೆಸರು ಘೋಷಿಸಿದ ಸಿಎಂ

ರಾಜಧಾನಿಯಲ್ಲಿನ ಪ್ರಮುಖ ರಸ್ತೆಗೆ ಪುನೀತ್ ರಾಜಕುಮಾರ್​ ನಾಮಕರಣ ಮಾಡಿದ ಬಳಿಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರೇಸ್​ಕೋರ್ಸ್​ ರಸ್ತೆಗೆ ರೆಬೆಲ್ ಸ್ಟಾರ್ ಅಂಬರೀಷ್ ಹೆಸರಿಡುವುದಾಗಿ ಘೋಷಣೆ ಮಾಡಿದರು.

ಬೆಂಗಳೂರು: ರಾಜಧಾನಿಯಲ್ಲಿನ ಪ್ರಮುಖ ರಸ್ತೆಗೆ ಪುನೀತ್ ರಾಜಕುಮಾರ್​ ನಾಮಕರಣ ಮಾಡಿದ ಬಳಿಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರೇಸ್​ಕೋರ್ಸ್​ ರಸ್ತೆಗೆ ರೆಬೆಲ್ ಸ್ಟಾರ್ ಅಂಬರೀಷ್ ಹೆಸರಿಡುವುದಾಗಿ ಘೋಷಣೆ ಮಾಡಿದರು.

ಪದ್ಮನಾಭನಗರದ ಅಟಲ್‌ ಬಿಹಾರಿ ವಾಜಪೇಯಿ ಮೈದಾನದಲ್ಲಿ ಮಂಗಳವಾರ ನಡೆದ ಸಮಾರಂಭದಲ್ಲಿ ‘ವಿವಿಧ ಅಭಿವೃದ್ಧಿ ಕಾಮಗಾರಿಗಳ ಲೋಕಾರ್ಪಣೆ ಮತ್ತು ಕರ್ನಾಟಕ ರತ್ನ ಡಾ. ಪುನೀತ್ ರಾಜಕುಮಾರ್ ರಸ್ತೆ ನಾಮಕರಣ’ ನೆರವೇರಿಸಿ ಅವರು ಮಾತನಾಡಿದರು.

ಒಂದೂವರೆ ವರ್ಷದ ಹಿಂದೆ ಆರಂಭಿಸಿದ ಅಂಬರೀಷ್ ಸ್ಮಾರಕವನ್ನು ಮಾರ್ಚ್‌ನಲ್ಲಿ ಉದ್ಘಾಟನೆ ಮಾಡಲಾಗುತ್ತದೆ. ಬಳಿಕ ರೇಸ್‌ಕೋರ್ಸ್ ರಸ್ತೆಗೆ ‘ರೆಬೆಲ್ ಸ್ಟಾರ್ ಅಂಬರೀಷ್’ ಹೆಸರಿಡಲಾಗುವುದು ಎಂದರು.

ಅಂಬರೀಷ್ ಕುದುರೆ ಮಾಲೀಕರಾಗಿದ್ದರು ಮತ್ತು ರೇಸ್‌ಕೋರ್ಸ್‌ನಲ್ಲಿ ಹೆಚ್ಚು ಸಮಯ ಕಳೆಯುತ್ತಿದ್ದರು. ರೇಸ್‌ಕೋರ್ಸ್, ಚಲನಚಿತ್ರ ವಾಣಿಜ್ಯ ಮಂಡಳಿ ಮತ್ತು ಗಾಂಧಿನಗರ ಮೂರಕ್ಕೂ ರೇಸ್‌ಕೋರ್ಸ್ ರಸ್ತೆ ಜಂಕ್ಷನ್ ಆಗಿರುವುದರಿಂದ ಅಂಬರೀಷ್ ಹೆಸರಿಡಲಾಗುತ್ತಿದೆ ಎಂದು ಹೇಳಿದರು.

ಒಂದು ವೇಳೆ ಅಂಬರೀಷ್ ಇದ್ದಿದ್ದರೆ, ಅವನದೇ ಸ್ಟೈಲ್‌ನಲ್ಲಿ ಹೇಳುವುದಾದರೆ, ‘ನನ್ ಮಗನೆ ಕರೆಕ್ಟ್ ಆಗಿ ಹೆಸರು ಇಟ್ಟಿದಿಯಾ’ ಎನ್ನುತ್ತಿದ್ದ. ಅದಕ್ಕೆ ನಾನು ಕೂಡ ‘ಮಗನೆ ನೀನು ಏನೇನು ಮಾಡಿದ್ದೀಯಾ ಎಲ್ಲ ಗೊತ್ತಿದೆ, ಅದಕ್ಕಾಗಿ ಈ ಹೆಸರು ಇಡುತ್ತಿದ್ದೇನೆ’ ಎನ್ನುತ್ತಿದ್ದೆ ಎಂದು ಹಾಸ್ಯ ಚಟಾಕಿ ಹಾರಿಸಿದರು.

ಈಗಾಗಲೇ ಬೆಂಗಳೂರಿನ ಹಲವು ರಸ್ತೆಗಳಿಗೆ ಕನ್ನಡ ಚಿತ್ರರಂಗದ ಹೆಸರಾಂತ ತಾರೆಯರ ಹೆಸರುಗಳನ್ನು ಇಡಲಾಗಿದೆ. ಬೆಂಗಳೂರಿನ ಪ್ರಮುಖ ರಸ್ತೆಯೊಂದಕ್ಕೆ 'ರೆಬೆಲ್ ಸ್ಟಾರ್‌' ಅಂಬರೀಷ್ ಅವರ ಹೆಸರನ್ನು ಇಡುವಂತೆ ಕೇಳಲಾಗಿತ್ತು.

ಕನ್ನಡ ಚಿತ್ರರಂಗದಲ್ಲಿ ಅಪಾರ ಕೊಡುಗೆಯನ್ನು ನೀಡಿರುವ ಖ್ಯಾತ ಕಲಾವಿದ ರೆಬೆಲ್ ಸ್ಟಾರ್' ಡಾ. ಅಂಬರೀಶ್ ಅವರಿಗೆ 70 ವರ್ಷಗಳು ಪೂರೈಸಿರುವ ಈ ಸಂದರ್ಭದಲ್ಲಿ ಚಲನಚಿತ್ರ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಮಹಾನ್‌ ಸಾಧಕರಾದ ಡಾ. ಅಂಬರೀಶ್‌ ಹೆಸರನ್ನು ಪರಿಗಣಿಸಿ, ರಾಂ ನಾರಾಯಣ ಚಲರಾಮ್ ಕಾಲೇಜ್‌ನಿಂದ ಮೌರ್ಯ ವೃತ್ತ ಮತ್ತು ಆನಂದರಾವ್‌ ವೃತ್ತದ ರಸ್ತೆವರೆಗೆ ನಾಮಕರಣ ಮಾಡಬೇಕೆಂಬುದು ಚಲನಚಿತ್ರೋದ್ಯಮದವರೆಲ್ಲರ ಮಹದಾಸೆಯಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT