ಅಕ್ರಮ ಮಳಿಗೆಗಳ ತೆರವುಗೊಳಿಸುತ್ತಿರುವ ಬಿಬಿಎಂಪಿ ಅಧಿಕಾರಿಗಳು. 
ರಾಜ್ಯ

ಜಯನಗರ ಕಾಂಪ್ಲೆಕ್ಸ್ ಬಳಿಯ 250 ತಾತ್ಕಾಲಿಕ ಮಳಿಗೆಗಳ ತೆರವುಗೊಳಿಸಿದ ಬಿಬಿಎಂಪಿ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ದಕ್ಷಿಣ ವಲಯದ ಜಯನಗರ ವಾಣಿಜ್ಯ ಸಂಕೀರ್ಣದ ಬಳಿಯ ಪಾದಚಾರಿ ಮಾರ್ಗ, ಮಾರುಕಟ್ಟೆ ಕಾರಿಡಾರ್ ಮೇಲೆ ಮತ್ತು ಅಕ್ಕಪಕ್ಕದಲ್ಲಿದ್ದ ಸುಮಾರು 250 ತಾತ್ಕಾಲಿಕ ಮಳಿಗೆಗಳನ್ನು ಬಿಬಿಎಂಪಿ ಬುಧವಾರ ತೆರವುಗೊಳಿಸಿತು.

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ದಕ್ಷಿಣ ವಲಯದ ಜಯನಗರ ವಾಣಿಜ್ಯ ಸಂಕೀರ್ಣದ ಬಳಿಯ ಪಾದಚಾರಿ ಮಾರ್ಗ, ಮಾರುಕಟ್ಟೆ ಕಾರಿಡಾರ್ ಮೇಲೆ ಮತ್ತು ಅಕ್ಕಪಕ್ಕದಲ್ಲಿದ್ದ ಸುಮಾರು 250 ತಾತ್ಕಾಲಿಕ ಮಳಿಗೆಗಳನ್ನು ಬಿಬಿಎಂಪಿ ಬುಧವಾರ ತೆರವುಗೊಳಿಸಿತು.

ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರ ನಿರ್ದೇಶನದ ಮೇರೆಗೆ ಈ ಕಾರ್ಯಾಚರಣೆ ನಡೆಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಪಾಲಿಕೆ ಮುಖ್ಯ ಎಂಜಿನಿಯರ್ (ದಕ್ಷಿಣ ವಲಯ) ಪೊಲೀಸರು ಮತ್ತು ಬಿಬಿಎಂಪಿ ಮಾರ್ಷಲ್‌ಗಳ ಸಮ್ಮುಖದಲ್ಲಿ ಬುಧವಾರ ಕಾರ್ಯಾಚರಣೆ ನಡೆಸಿದರು.

ಜಯನಗರ ವಾಣಿಜ್ಯ ಸಂಕೀರ್ಣ ಮತ್ತು ಫುಟ್‌ಪಾತ್‌ ಮಾರ್ಗ ಮತ್ತು ಕಾರಿಡಾರ್‌ಗಳನ್ನು ಅತಿಕ್ರಮಿಸಿಕೊಂಡಿದ್ದ ಸುಮಾರು 250 ತಾತ್ಕಾಲಿಕ ಮಳಿಗೆಗಳನ್ನು ತೆರವುಗೊಳಿಸಲಾಯಿತು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ನಡುವೆ ಅತಿಕ್ರಮಣ ತೆರವು ಕಾರ್ಯಾಚಱಣೆಯನ್ನು ಮಾನವ ಹಕ್ಕುಗಳ ಕಾರ್ಯಕರ್ತರು, ಕಾನೂನುಬಾಹಿರ ಮತ್ತು ಬಡ ಬೀದಿ ವ್ಯಾಪಾರಿಗಳಿಗೆ ಮಾಡಿದ ಅನ್ಯಾಯ ಎಂದು ಬಣ್ಣಿಸಿದ್ದಾರೆ.

ನಿಯಮಗಳ ಪ್ರಕಾರ ಬಿಬಿಎಂಪಿ ಮೊದಲು ನೋಟಿಸ್ ಜಾರಿಗೊಳಿಸಬೇಕಿತ್ತು, ಆದರೆ ಅದನ್ನು ಮಾಡಲಾಗಿಲ್ಲ, ಮಾರಾಟಗಾರರು ತಮ್ಮ ಗುರುತಿನ ಚೀಟಿಗಳನ್ನು ಪಡೆದುಕೊಂಡಿದ್ದರೂ, ಪಾಲಿಕೆ ಅಧಿಕಾರಿಗಳು ಮಳಿಗೆಗಳ ನಾಶಪಡಿಸಿದರು. ತಳ್ಳುವ ಗಾಡಿಗಳು ಹಾಗೂ ಇತರೆ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆಂದು ತಿಳಿಸಿದ್ದಾರೆ.

ವಿಚಾರ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ತೆರಳಿ ಕಾರ್ಯಾಚರಣೆ ಸ್ಥಗಿತಗೊಳ್ಳುವಂತೆ ಮಾಡಿದೆವು. ಬಡ ವ್ಯಾಪಾರಿಗಳಿಗೆ ಅನ್ಯಾಯವಾಗಲು ನಾವು ಬಿಡುವುದಿಲ್ಲ. ಅವರಿಗೆ ನ್ಯಾಯ ಒದಗಿಸಬೇಕು ಎಂದು ಕಾರ್ಯಕರ್ತ ವಿನಯ್ ಶ್ರೀನಿವಾಸ್ ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT