ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಯುಕೆಜಿ ವಿದ್ಯಾರ್ಥಿ ಅನುತ್ತೀರ್ಣ, ಶಾಲೆಯಿಂದ ಸ್ಪಷ್ಟೀಕರಣ ಕೇಳಿದ ಸರ್ಕಾರ

ಆರು ವರ್ಷದ ಯುಕೆಜಿ ವಿದ್ಯಾರ್ಥಿನಿಯನ್ನು ಅನುತ್ತೀರ್ಣಗೊಳಿಸಿದ ಬೆಂಗಳೂರಿನ ಖಾಸಗಿ ಶಾಲೆಯೊಂದರಿಂದ ರಾಜ್ಯ ಶಿಕ್ಷಣ ಇಲಾಖೆ ಸ್ಪಷ್ಟೀಕರಣ ಕೋರಿದೆ. ಪೋಷಕರು ಹಾಗೂ ಶಿಕ್ಷಣ ತಜ್ಞರು, ಶಾಲಾ ಆಡಳಿತ ಮಂಡಳಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರು: ಆರು ವರ್ಷದ ಯುಕೆಜಿ ವಿದ್ಯಾರ್ಥಿನಿಯನ್ನು ಅನುತ್ತೀರ್ಣಗೊಳಿಸಿದ ಬೆಂಗಳೂರಿನ ಖಾಸಗಿ ಶಾಲೆಯೊಂದರಿಂದ ರಾಜ್ಯ ಶಿಕ್ಷಣ ಇಲಾಖೆ ಸ್ಪಷ್ಟೀಕರಣ ಕೋರಿದೆ. ಪೋಷಕರು ಹಾಗೂ ಶಿಕ್ಷಣ ತಜ್ಞರು, ಶಾಲಾ ಆಡಳಿತ ಮಂಡಳಿ ವಿರುದ್ಧ 
ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರು ಹೊರವಲಯ ಆನೇಕಲ್ ನ ದೀಪಹಳ್ಳಿಯಲ್ಲಿರುವ ಸೆಂಟ್ ಜೋಸೆಪ್ ಚಾಮಿನಾಡೆ ಅಕಾಡೆಮಿಯಲ್ಲಿ ಇಂತಹ ಘಟನೆ ನಡೆದಿದೆ. ಬಾಲಕಿಗೆ ನೀಡಿರುವ ಅಂಕಪಟ್ಟಿಯಲ್ಲಿ ಅನುತ್ತೀರ್ಣ ಎಂದು ಉಲ್ಲೇಖಿಸಲಾಗಿದೆ. ಒಂದು ವಿಷಯದಲ್ಲಿ ನಂದಿನಿ 40 ಅಂಕಗಳ ಪೈಕಿ ಕೇವಲ ಐದು ಅಂಕಗಳನ್ನು ಪಡೆದಿರುವುದಾಗಿ ಮಾರ್ಕ್ಸ್ ಕಾರ್ಡ್ ನಲ್ಲಿ ತೋರಿಸಲಾಗಿದೆ. 

ಶಾಲೆಯ ಆಡಳಿತ ಮಂಡಳಿ ವಿರುದ್ಧ ವಾಗ್ದಾಳಿ ನಡೆಸಿರುವ ಮಾಜಿ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್, ಸಂಬಂಧಿತ ಇಲಾಖೆ ಈ ಶಾಲೆ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ. ಒಂದರಿಂದ 9ನೇ ತರಗತಿವರೆಗಿನ ವಿದ್ಯಾರ್ಥಿಗಳನ್ನು ಅನುತ್ತೀರ್ಣಗೊಳಿಸಬಾರದು ಎಂದು ಕಾನೂನು ಹೇಳುತ್ತದೆ. ಈ ನಿಯಮವನ್ನು ಶಾಲಾ ಆಡಳಿತ ಮಂಡಳಿ ಗಾಳಿಗೆ ತೂರಿದೆ ಎಂದು ಅವರು ಆರೋಪಿಸಿದ್ದಾರೆ.

ಮತ್ತೊಂದೆಡೆ ಶಾಲೆ ವಿರುದ್ಧ ವಾಗ್ದಾಳಿ ನಡೆಸಿರುವ ಬಾಲಕಿಯ ಪೋಷಕರು, ಆರು ವರ್ಷದ ವಿದ್ಯಾರ್ಥಿನಿಯ ಫಲಿತಾಂಶವನ್ನು ಸರಿಯಾಗಿ ಪ್ರಕಟಿಸಿಲ್ಲ ಎಂದು ಬಾಲಕಿ ತಂದೆ ಮನೋಜ್ ಬಾದಲ್ ಹೇಳಿದ್ದಾರೆ.  ಆದರೆ, ಸಂಸ್ಥೆ ಫೇಲ್ ಮಾಡಿರುವುದಾಗಿ ಘೋಷಿಸಿಲ್ಲ. ಯೂನಿಟ್ ಟೆಸ್ಟ್ ಅಂಕಪಟ್ಟಿ ನೀಡಲಾಗಿದೆ ಎಂದು ಶಾಲೆಯ ಆಡಳಿತ ಮಂಡಳಿ ಹೇಳಿದೆ. ಈ ವಿಚಾರದ ಬಗ್ಗೆ ಬಿಇಒ ಜಯಲಕ್ಷ್ಮಿ ಶಾಲೆಯಿಂದ ಸ್ಪಷ್ಟೀಕರಣ ಕೋರಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT