ಸಂಗ್ರಹ ಚಿತ್ರ 
ರಾಜ್ಯ

'ಮಹದಾಯಿ ತಿರುವು ಯೋಜನೆ ದುಷ್ಪರಿಣಾಮಗಳ ಅಧ್ಯಯನ'ಕ್ಕೆ ಗೋವಾ ಸರ್ಕಾರ ಮುಂದು

ಮಹದಾಯಿ ತಿರುವು ಯೋಜನೆಯಿಂದಾಗುವ ದುಷ್ಕರಿಣಾಮಗಳ ಕುರಿತು ಅಧ್ಯಯನ ನಡೆಸಲು ಗೋವಾ ಸರ್ಕಾರ ಮುಂದಾಗಿದೆ ಎಂದು ತಿಳಿದುಬಂದಿದೆ.

ಬೆಳಗಾವಿ: ಮಹದಾಯಿ ತಿರುವು ಯೋಜನೆಯಿಂದಾಗುವ ದುಷ್ಕರಿಣಾಮಗಳ ಕುರಿತು ಅಧ್ಯಯನ ನಡೆಸಲು ಗೋವಾ ಸರ್ಕಾರ ಮುಂದಾಗಿದೆ ಎಂದು ತಿಳಿದುಬಂದಿದೆ.

ಮಹದಾಯಿ ತಿರುವು ಯೋಜನೆಯಿಂದಾಗುವ ದುಷ್ಕರಿಣಾಮಗಳ ಕುರಿತು ರಾಷ್ಟ್ರೀಯ ಪರಿಸರವಾದಿಗಳಿಂದ ಅಧ್ಯಯನ ನಡೆಸಬೇಕು ಎಂದು ಗೋವಾದ ಆಡಳಿತ ಮತ್ತು ವಿರೋಧ ಪಕ್ಷಗಳ ಶಾಸಕರನ್ನೊಳಗೊಂಡ ಸದನ ಸಮಿತಿಯು ಒತ್ತಾಯಿಸಿದೆ.

ಈ ಸಂಬಂಧ ಬುಧವಾರ ಗೋವಾದಲ್ಲಿ ನಡೆದ ಸದನ ಸಮಿತಿ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ ಎಂದು ವರದಿಗಳಿಂದ ತಿಳಿದುಬಂದಿದೆ.

ಪರಿಸರವಾದಿಗಳು ಅಧ್ಯಯನ ನಡೆಸಿ ಸಲ್ಲಿಸಿದ ವರದಿಯನ್ನು ಸುಪ್ರೀಂಕೋರ್ಟ್ ನಲ್ಲಿ ಸಲ್ಲಿಸಬೇಕು. ಈ ವರದಿಯನ್ನು ಆಧರಿಸಿ ಮಹದಾಯಿ ವಿವಾದ ಸಂಬಂಧ ಗೋವಾಗೆ ಬೆಂಬಲ ವ್ಯಕ್ತಪಡಿಸಬೇಕೆಂದು ಒತ್ತಾಯಿಸಿದ್ದಾರೆ.

ಸದನ ಸಮಿತಿ ಅಧ್ಯಕ್ಷ ಸುಭಾಷ್ ಶಿರೋಡ್ಕರ್ ಅವರು ಮಾತನಾಡಿ, ಸದನ ಸಮಿತಿಯು ಮುಂದಿನ 20 ದಿನಗಳಲ್ಲಿ ಕರ್ನಾಟಕವು ಕಾರ್ಯಗತಗೊಳಿಸಿದ ಯೋಜನೆಯ ದುಷ್ಪರಿಣಾಮಗಳ ಕುರಿತು ವರದಿ ಸಲ್ಲಿಸಲು ಸಲಹೆಗಾರರು ಮತ್ತು ತಜ್ಞರನ್ನು ನೇಮಿಸುತ್ತದೆ ಎಂದು ಹೇಳಿದ್ದಾರೆ.

ನಮ್ಮ ಸರ್ಕಾರವು ಮಹಾದಾಯಿ ಹೋರಾಟವನ್ನು ಆಡಳಿತ ಮಟ್ಟದಲ್ಲಿ ನಡೆಸುತ್ತಿದೆ. ಮಹದಾಯಿ ಯೋಜನೆಯಿಂದಾಗುವ ಪರಿಣಾಮಗಳ ಬಗ್ಗೆ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರಿಗೂ ಮಾಹಿತಿ ನೀಡಿದ್ದೇನೆ. ಈ ಯೋಜನೆಯು ಯುನೆಸ್ಕೋ ಪಟ್ಟಿಯಲ್ಲಿರುವ ಪಶ್ಚಿಮ ಘಟ್ಟಗಳ ಮೇಲೆ ಪರಿಣಾಮ ಬೀರುತ್ತದೆ ಮತ್ತು ಆರು ವನ್ಯಜೀವಿ ಅಭಯಾರಣ್ಯಗಳನ್ನು ನಾಶಪಡಿಸುತ್ತದೆ ಎಂದು ಶಿರೋಡ್ಕರ್ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

SCROLL FOR NEXT