ಸಿಎಂ ಬೊಮ್ಮಾಯಿ 
ರಾಜ್ಯ

13,700 ಕೋಟಿ ರೂ. ವರೆಗೆ ಸಾಲ ಪಡೆಯಲು ಎಸ್ಕಾಂಗೆ ಅವಕಾಶ: ರಾಜ್ಯ ಸಚಿವ ಸಂಪುಟ ನಿರ್ಧಾರ

ರಾಜ್ಯದ ವಿದ್ಯುತ್ ಸರಬರಾಜು ಕಂಪನಿಗಳಿಗೆ (ಎಸ್ಕಾಮ್ಸ್) 13,708.32 ಕೋಟಿ ರೂಪಾಯಿ ಸಾಲ ಪಡೆಯಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸಚಿವ ಸಂಪುಟ ಗುರುವಾರ ಆಡಳಿತಾತ್ಮಕ ಅನುಮೋದನೆ ನೀಡಿದೆ.

ಬೆಂಗಳೂರು: ರಾಜ್ಯದ ವಿದ್ಯುತ್ ಸರಬರಾಜು ಕಂಪನಿಗಳಿಗೆ (ಎಸ್ಕಾಮ್ಸ್) 13,708.32 ಕೋಟಿ ರೂಪಾಯಿ ಸಾಲ ಪಡೆಯಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸಚಿವ ಸಂಪುಟ ಗುರುವಾರ ಆಡಳಿತಾತ್ಮಕ ಅನುಮೋದನೆ ನೀಡಿದೆ.

ಈ ಕುರಿತು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ್ದು, ಬೆಸ್ಕಾಂ 7,526 ಕೋಟಿ ರು., ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ಕಂಪೆನಿ (ಮೈಸೂರು-ಸೆಸ್‌್ಕ) 1,398 ಕೋಟಿ ರು., ಹುಬ್ಬಳ್ಳಿ ವಿದ್ಯುತ್‌ ಸರಬರಾಜು ಕಂಪೆನಿ (ಹೆಸ್ಕಾಂ) 2,120 ಕೋಟಿ ರು., ಕಲಬುರಗಿ ವಿದ್ಯುತ್‌ ಸರಬರಾಜು ಕಂಪೆನಿ (ಜೆಸ್ಕಾಂ) 2,120 ಕೋಟಿ ರು. ಸೇರಿದಂತೆ ಒಟ್ಟು 13,708 ಕೋಟಿ ರು. ಸಾಲಕ್ಕೆ ಖಾತರಿ ನೀಡಲು ಸಂಪುಟದಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಿದರು.

ಕರ್ನಾಟಕ ಲೋಕಸೇವಾ ಆಯೋಗದಲ್ಲಿ ಖಾಲಿ ಇರುವ ಸದಸ್ಯರನ್ನು ತುಂಬಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಅಧಿಕಾರ ನೀಡಲು ಸಂಪುಟ ಸಭೆ ನಿರ್ಧರಿಸಿದೆ. ರಾಜ್ಯದ ಸರ್ಕಾರಿ ಐಟಿಐಗಳನ್ನು ಟಾಟಾ ಸಂಸ್ಥೆಯ ಸಹಭಾಗಿತ್ವದಲ್ಲಿ ಉನ್ನತೀಕರಣಗೊಳಿಸುವ 927 ಕೋಟಿ ರೂ. ಯೋಜನೆಗೆ ಸಂಪುಟ ಒಪ್ಪಿಗೆ ನೀಡಿದ್ದು, 155 ಸರ್ಕಾರಿ ಐಟಿಐಗಳ ಪೈಕಿ 30 ಐಟಿಐಗಳನ್ನು ತಲಾ 27 ಕೋಟಿ ರೂ. ವೆಚ್ಚದಲ್ಲಿ ಮೊದಲ ಹಂತದಲ್ಲಿ ಉನ್ನತೀಕರಣ ಮಾಡಲಾಗುವುದು. ಯೋಜನೆಯಡಿ 816 ಕೋಟಿ ರೂ.ಗಳನ್ನು ಸಂಸ್ಥೆ ಭರಿಸಲಿದ್ದು ಉಳಿದ 111 ಕೋಟಿ ರೂ. ರಾಜ್ಯ ಸರ್ಕಾರ ಭರಿಸಲಿದೆ ಎಂದು ತಿಳಿಸಿದರು.

ಕರ್ನಾಟಕ ನವೀಕರಿಸಬಹುದಾದ ಇಂಧನ ನೀತಿ-2027 ಕ್ಕೆ ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದ್ದು, ಹೊಸದಾಗಿ ಸೋಲಾರ್‌ ಘಟಕ ಸ್ಥಾಪಿಸಲು ಈಗಿರುವ 3.5 ಎಕರೆ ಜಮೀನಿನ ಮಿತಿಯನ್ನು 4 ಎಕರೆಗೆ ವಿಸ್ತರಿಸಲಾಗಿದೆ. ಅದೇ ರೀತಿ ಪವನ ವಿದ್ಯುತ್‌ ಯೋಜನೆಗೆ ಅನುಮತಿ ಪಡೆದ ಕಾರ್ಯಾರಂಭ ಮಿತಿ ಮೂರು ವರ್ಷದಿಂದ ಎರಡು ವರ್ಷಕ್ಕೆ ಇಳಿಸಲಾಗಿದೆ. ಪುನರ್‌ ನವೀಕರಿಸಬಹುದಾದ ಇಂಧನ ವಲಯದಲ್ಲಿ ಉತ್ಪಾದನಾ ಸಾಮರ್ಥ್ಯ ಹೆಚ್ಚಿಸುವ ಹಾಗೂ ಬಂಡವಾಳ ಹೂಡಿಕೆಗೆ ಮುಂದಾಗುವವರಿಗೆ ಅನುಕೂಲ ಕಲ್ಪಿಸಲು ನೂತನ ನೀತಿ ಜಾರಿಗೊಳಿಸಲಾಗುತ್ತಿದೆ. ಈ ಹಿಂದೆ 2022 ರವರೆಗೆ ನೀತಿ ರೂಪಿಸಲಾಗಿತ್ತು. ಇದೀಗ 2027 ರವರೆಗೆ ಐದು ವರ್ಷಗಳ ಅವಧಿಗೆ ಹೊಸ ನೀತಿ ರೂಪಿಸಲಾಗಿದೆ ಎಂದು ವಿವರಿಸಿದರು.

ಬೊಮ್ಮಾಯಿ ಅವರ ಹುಟ್ಟೂರು ಶಿಗ್ಗಾವಿಯಲ್ಲಿ 73. 75 ಕೋಟಿ ರೂ.ಗಳಲ್ಲಿ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ ಸ್ಥಾಪನೆ, ಹಾವೇರಿಯ ನೆಲಗೋಳದಲ್ಲಿ 37.55 ಕೋಟಿ ರೂ ವೆಚ್ಚದಲ್ಲಿ ಬಾಲಕರ ವಸತಿ ನಿಲಯದಲ್ಲಿ ಬಹು ಕೌಶಲ್ಯ ತರಬೇತಿ ಕೇಂದ್ರ, ‘ವಿಸ್ತಾರ ಸೌಧ’ ಸೇರಿದಂತೆ ಇತರೆ ನಿರ್ಣಯಗಳಿಗೆ ಸಂಪುಟ ಅನುಮೋದನೆ ನೀಡಿದೆ.

ರಾಜ್ಯದಲ್ಲೇ ಪ್ರಥಮ ಎನ್ನುವಂತೆ ಸೊರಬ ತಾಲೂಕಿನಲ್ಲಿರುವ ಎಲ್ಲಾ ಸರ್ಕಾರಿ ಕಚೇರಿಗಳನ್ನು ಒಂದೇ ಸೂರಿನಡಿ ತರಲು 18 ಎಕರೆ ಜಾಗದಲ್ಲಿ ಕಟ್ಟಡ ನಿರ್ಮಿಸುವ 49.66 ಕೋಟಿ ರೂ.ಯೋಜನೆಗೆ ಸಂಪುಟ ಅನುಮೋದನೆ ನೀಡಿದೆ.

ಚಾಮರಾಜನಗರ ಜಿಲ್ಲೆಯ 166 ಗ್ರಾಮಗಳಿಗೆ ಜಲ ಜೀವನ್‌ ಮಿಷನ್‌ ಯೋಜನೆಯಡಿ ಕುಡಿಯುವ ನೀರು ಒದಗಿಸಲು 26 ಕೋಟಿ ರೂ., ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ರಾಮನಗರದ 15 ಗ್ರಾಮಗಳಿಗೆ ಜಲ ಜೀವನ್‌ ಮಿಷನ್‌ ಯೋಜನೆಯಡಿ ಕುಡಿಯುವ ನೀರು ಒದಗಿಸಲು 28 ಕೋಟಿ ರೂ., ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಬೈನಾಪುರ ಸೇರಿ 12 ಗ್ರಾಮಗಳಿಗೆ ಕುಡಿಯುವ ನೀರು ಒದಗಿಸುವ 32 ಕೋಟಿ ರೂ., ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ನಗರ ಸೇರಿ 363 ಗ್ರಾಮಗಳಿಗೆ ಕುಡಿಯುವ ನೀರು ಒದಗಿಸುವ 350 ಕೋಟಿ ರೂ. ಯೋಜನೆಗೆ ಸಂಪುಟ ಒಪ್ಪಿಗೆ ನೀಡಿದೆ.

ಉತ್ತರ ಕನ್ನಡದ ಯಲ್ಲಾಪುರ ಹೋಬಳಿಯಲ್ಲಿ ಬುಡಕಟ್ಟು ಜನರಿಗೆ ವನವಾಸಿ ಶಾಲೆಗಾಗಿ 1 ಎಕರೆ ಜಮೀನು, ಕೊಡಗು ಜಿಲ್ಲೆಯಲ್ಲಿ ಹೊಸದಾಗಿ ಪೊಲೀಸ್‌ ವಸತಿ ಸಂಕೀರ್ಣ ನಿರ್ಮಾಣದ 12 ಕೋಟಿ ರೂ. ವೆಚ್ಚದ ಯೋಜನೆ, ಕಲಬುರಗಿಯಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಬಸ್‌ ನಿಲ್ದಾಣ ಹಾಗೂ ವಾಣಿಜ್ಯ ಸಂಕೀರ್ಣ ನಿರ್ಮಿಸುವ ಯೋಜನೆ ಹಾಗೂ ರಾಯಚೂರಿನ ಹಗರಬೊಮ್ಮನಹಳ್ಳಿಯಲ್ಲಿ 25 ಕೋಟಿ ರೂ. ವೆಚ್ಚದಲ್ಲಿ ಕೃಷಿ ಕಾಲೇಜು ಸ್ಥಾಪಿಸಲು ಸಂಪುಟ ಅನುಮೋದನೆ ನೀಡಿದೆ ಎಂದು ತಿಳಿಸಿದರು

ಬೆಂಗಳೂರಿನ ಸಿಲ್ಕ್ ಬೋರ್ಡ್‌ ಜಂಕ್ಷನ್‌ ಬಳಿ ಟೋಲ್‌ ಘಟಕವನ್ನು ಒಡೆದು ಹಾಕಿರುವ ಬಗ್ಗೆ ತನಿಖೆ ನಡೆಸಲು ಸಂಪುಟದಲ್ಲಿ ತೀರ್ಮಾನಿಸಲಾಗಿದೆ. ಈ ಬಗ್ಗೆ ಸುಪ್ರೀಂ ಕೋರ್ಟ್‌ನ ವಿಚಾರಣೆಗಾಗಿ 54.4 ಕೋಟಿ ರೂ. ಠೇವಣಿ ಇಡಲು ಸಂಪುಟ ಒಪ್ಪಿಗೆ ನೀಡಿದೆ ಎಂದು ಮಾಹಿತಿ ನೀಡಿದರು. .

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಲಬುರಗಿ: ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ಶಾಂತಿ ಮಾತುಕತೆ ನಡೆಯುತ್ತಿರುವಾಗಲೇ ಉಕ್ರೇನ್‌ ಮೇಲೆ ರಷ್ಯಾ ದಾಳಿ; ಕನಿಷ್ಠ ಏಳು ಜನ ಸಾವು

Punishment: 5 ವರ್ಷದ ಬಾಲಕನನ್ನು ಮರಕ್ಕೆ ನೇತು ಹಾಕಿದ ಶಿಕ್ಷಕಿ!

ವಿಶ್ವಕಪ್ ವಿಜೇತ ಕರ್ನಾಟಕದ ಅಂಧ ಕ್ರಿಕೆಟ್ ಆಟಗಾರ್ತಿಯರಿಗೆ ತಲಾ 10 ಲಕ್ಷ ರೂ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

SCROLL FOR NEXT